ಆ್ಯಪ್ನಗರ

ಕೊರೊನಾ ಕಾರಣ: ಈ ಬಾರಿಯ ಗಣಾಜ್ಯೋತ್ಸವಕ್ಕೆ ವಿದೇಶಿ ಮುಖ್ಯ ಅತಿಥಿ ಇಲ್ಲ!

ಈ ಬಾರಿಯ(2021) ಗಣರಾಜ್ಯೋತ್ಸವ ಸಮಾರಂಭಕ್ಕೆ ಯಾವುದೇ ವಿದೇಶಿ ಮುಖ್ಯ ಅತಿಥಿ ಭಾಗವಹಿಸುವುದಿಲ್ಲ ಎಂದು ಕೇಂದ್ರ ಸರ್ಕಾರ ಘೋಷಿಸಿದೆ. ಇಷ್ಟೇ ಅಲ್ಲದೇ ಗಣರಾಜ್ಯೋತ್ಸವ ಸಮಾರಂಭದ ಸೇನಾ ಪಥಸಂಚಲನದಲ್ಲೂ ಭಾರೀ ಬದಲಾವಣೆ ಮಾಡಲಾಗಿದೆ.

Vijaya Karnataka Web 14 Jan 2021, 8:24 pm
ಹೊಸದಿಲ್ಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಈ ಬಾರಿಯ(2021) ಗಣರಾಜ್ಯೋತ್ಸವ ಸಮಾರಂಭಕ್ಕೆ ಯಾವುದೇ ವಿದೇಶಿ ಮುಖ್ಯ ಅತಿಥಿ ಭಾಗವಹಿಸುವುದಿಲ್ಲ ಎಂದು ಕೇಂದ್ರ ಸರ್ಕಾರ ಘೋಷಿಸಿದೆ.
Vijaya Karnataka Web Republic Day
ಗಣರಾಜ್ಯೋತ್ಸವಕ್ಕೆ ವಿದೇಶಿ ಅತಿಥಿ ಇಲ್ಲ


ಈ ಕುರಿತು ಮಾಹಿತಿ ನೀಡಿರುವ ವಿದೇಶಾಂಗ ಇಲಾಖೆ ವಕ್ತಾರ ಅನುರಾಗ್ ಶ್ರೀವಾತ್ಸವ್, ಮಾರಕ ಕೊರೊನಾ ವೈರಸ್ ಜಾಗತಿಕ ಪರಿಣಾಮಗಳನ್ನು ಗಮನದಲ್ಲಿಟ್ಟುಕೊಂಡು ಈ ಬಾರಿ ಯಾವುದೇ ವಿದೇಶಿ ಮುಖ್ಯ ಅತಿಥಿಯನ್ನು ಕರೆಯದಿರುವ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಈ ಮೊದಲು ಇಂಗ್ಲೆಂಡ್ ಪ್ರಧಾನಿ ಬೋರಿಸ್ ಜಾನ್ಸನ್ ಈ ಬಾರಿಯ ಗಣರಾಜ್ಯೋತ್ಸವದ ಮುಖ್ಯ ಅತಿಥಿ ಎಂದು ಘೋಷಿಸಲಾಗಿತ್ತು. ಆದರೆ ಇಂಗ್ಲೆಂಡ್‌ನಲ್ಲಿ ಕಾಣಿಸಿಕೊಂಡ ಕೊರೊನಾ ರೂಪಾಂತರಿಯನ್ನು ಎದುರಿಸಲು, ಬೋರಿಸ್ ಜಾನ್ಸನ್ ತಮ್ಮ ಭಾರತ ಪ್ರವಾಸವನ್ನು ರದ್ದುಗೊಳಿಸಿದ್ದರು.

ಕೊರೊನಾ ರೂಪಾಂತರಿ ಭೀತಿ: ಭಾರತ ಭೇಟಿ ರದ್ದುಗೊಳಿಸಿದ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್!

ರಾಷ್ಟ್ರೀಯ ಜವಾಬ್ದಾರಿ ನಿರ್ವಹಿಸಲು ಭಾರತ ಭೇಟಿಯನ್ನು ರದ್ದುಗೊಳಿಸಿದ್ದಾಗಿ ಬೋರಿಸ್ ಜಾನ್ಸನ್ ಸ್ಪಷ್ಟಪಡಿಸಿದ್ದರು. ಇದೀಗ ಯಾವುದೇ ವಿದೇಶಿ ಅತಿಥಿಗೆ ಆಮಂತ್ರಣ ನೀಡದಿರುವ ನಿರ್ಣಯವನ್ನು ಭಾರತ ಕೈಗೊಂಡಿದೆ.



ಇಷ್ಟೇ ಅಲ್ಲದೇ ಗಣರಾಜ್ಯೋತ್ಸವ ಸಮಾರಂಭದ ಸೇನಾ ಪಥಸಂಚಲನದಲ್ಲೂ ಭಾರೀ ಬದಲಾವಣೆ ಮಾಡಲಾಗಿದ್ದು, ಭಾರತೀಯ ಸೇನೆ ಈ ಬಾರಿ 144 ಯೋಧರ ಪಥಸಂಚಲನದ ಬದಲಾಗಿ 96 ಸೈನಿಕರ ಪಥಸಂಚಲನ ನಡೆಸಲು ನಿರ್ಧರಿಸಿದೆ.

ಅಲ್ಲದೇ ಒಟ್ಟು 1.5 ಲಕ್ಷ ಜನರಿಗೆ ಸ್ಥಳಾವಕಾಶ ಇರುವ ಗಣರಾಜ್ಯೋತ್ಸವ ಸಮಾರಂಭದಲ್ಲಿ ಈ ಬಾರಿ ಕೇವಲ 25 ಸಾವಿರ ಜನರಿಗೆ ಮಾತ್ರ ಅನುಮತಿ ನೀಡಲಾಗಿದೆ.

ಕೊರೊನಾ ಭೀತಿ: ಗಣರಾಜ್ಯೋತ್ಸವ ಸಮಾರಂಭವನ್ನೇ ರದ್ದುಪಡಿಸುವಂತೆ ಆಗ್ರಹಿಸಿದ ಶಶಿ ತರೂರ್!

ಪ್ರತಿ ಬಾರಿ ಗಣರಾಜ್ಯೋತ್ಸವದಲ್ಲಿ 600 ಶಾಲಾ ಮಕ್ಕಳು ಭಾಗವಹಿಸುತ್ತಿದ್ದರು. ಆದರೆ ಈ ಬಾರಿ ಕೇವಲ 160 ಜನರಿಗೆ ಅವಕಾಶ ಕಲ್ಪಿಸಲಾಗಿದೆ. ಅಲ್ಲದೇ 15 ವರ್ಷದ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ ಮಾತ್ರ ಸಮಾರಂಭದಲ್ಲಿ ಭಾಗವಹಿಸಲು ಅನುಮತಿ ನೀಡಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ