ಆ್ಯಪ್ನಗರ

ತ್ರಿವಳಿ ತಲಾಖ್‌: ವಿಧೇಯಕ ಮಂಡಿಸಲು ಕೇಂದ್ರ ಸರಕಾರದ ತಯಾರಿ

ತ್ರಿವಳಿ ತಲಾಖ್‌ ಬಗ್ಗೆ ಮುಂದಿನ ಚಳಿಗಾಲ ಅಧಿವೇಶನದಲ್ಲಿ ಕಾನೂನು ರೂಪಿತವಾಗಲಿದೆ.

Vijaya Karnataka Web 21 Nov 2017, 5:43 pm
ಹೊಸದಿಲ್ಲಿ: ತ್ರಿವಳಿ ತಲಾಖ್‌ ಈಗ ಮತ್ತೆ ಚರ್ಚೆಗೆ ಬಂದಿದೆ. ಸುಪ್ರೀಂ ಕೋರ್ಟ್‌ನಿಂದ ತ್ರಿವಳಿ ತಲಾಖ್‌ ರದ್ದುಪಡಿಸಿದ ಆದೇಶದ ಹಿನ್ನೆಲೆಯಲ್ಲಿ ಈಗ ಕೇಂದ್ರ ಸರಕಾರ ಇದಕ್ಕಾಗಿ ವಿಧೇಯಕ ಜಾರಿಗೆ ತರಲು ಮುಂದಾಗಿದೆ.
Vijaya Karnataka Web centre mulls introducing bill in winter session of parliament to end triple talaq
ತ್ರಿವಳಿ ತಲಾಖ್‌: ವಿಧೇಯಕ ಮಂಡಿಸಲು ಕೇಂದ್ರ ಸರಕಾರದ ತಯಾರಿ


ಈ ಸಂಬಂಧ ಸಚಿವ ಮಟ್ಟದ ಸಮಿತಿಯೊಂದನ್ನು ರಚಿಸಲಾಗಿದೆ.

ಸುಪ್ರೀಂ ಕೋರ್ಟ್‌ ಆದೇಶದ ನಂತರ ಇದಕ್ಕೆ ಕಾನೂನು ಚೌಕಟ್ಟು ರೂಪಿಸಲು ಕೇಂದ್ರ ಸರಕಾರ ಮುಂದಾಗಿದೆ. ಸುಪ್ರೀಂ ಕೋರ್ಟ್‌ ಆದೇಶ ಜಾರಿಗೆ ಬಂದ ನಂತರವೂ ಕೆಲವು ಕಡೆ ತ್ರಿವಳಿ ತಲಾಖ್‌ ಸಂಪ್ರದಾಯದಂತೆ ಮುಸ್ಲಿಂ ಮಹಿಳೆಯರಿಗೆ ವಿಚ್ಛೇದನ ನೀಡಿರುವ ಪ್ರಕರಣಗಳು ಬೆಳಕಿಗೆ ಬಂದಿವೆ. ಈ ನಿಟ್ಟಿನಲ್ಲಿ ಇದಕ್ಕೆ ಕಾನೂನು ರೂಪಿಸಲು ಕೇಂದ್ರ ಸರಕಾರ ಚಿಂತನೆ ನಡೆಸಿದೆ.

ಇತ್ತೀಚಿಗೆ ವಾಟ್ಸಾಪ್‌ ಮೂಲಕ ಮುಸ್ಲಿಂ ವ್ಯಕ್ತಿಯೊಬ್ಬರು ಪತ್ನಿಗೆ ತಲಾಖ್‌ ನೀಡಿದ್ದು ಭಾರಿ ಸುದ್ದಿಯಾಗಿತ್ತು.

ಈ ಹಿನ್ನೆಲೆಯಲ್ಲಿ ವಿಧೇಯಕ ಮಂಡಿಸಲು ಕೇಂದ್ರ ಸರಕಾರ ಮುಂದಾಗಿದ್ದು, ಸಂಪುಟ ಸಭೆಯಲ್ಲಿ ಈ ವಿಧೇಯಕದ ಕುರಿತು ಚರ್ಚೆ ನಡೆಸಲು ನಿರ್ಧರಿಸಲಾಗಿದೆ.

Centre mulls introducing Bill in winter session of Parliament to end triple talaq

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ