ಆ್ಯಪ್ನಗರ

ಸರಕಾರದ ನಿರ್ಧಾರಕ್ಕೆ ಸರ್ವ ಪಕ್ಷಗಳ ಬೆಂಬಲ

ಕಾಂಗ್ರೆಸ್‌ನ ಗುಲಾಂ ನಬಿ ಆಜಾದ್‌ ಸೇರಿ ಹಲವು ನಾಯಕರು ಉಗ್ರರ ವಿರುದ್ಧ ಸರಕಾರ ಕೈಗೊಳ್ಳುವ ನಿರ್ಧಾರಗಳಿಗೆ ತಮ್ಮ ಬೆಂಬಲ ಘೋಷಿಸಿದರು.

Vijaya Karnataka 27 Feb 2019, 5:00 am
ಹೊಸದಿಲ್ಲಿ: ಪಾಕ್‌ ನೆಲೆದಲ್ಲಿರುವ ಉಗ್ರ ಶಿಬಿರಗಳ ಮೇಲೆ ವಾಯುಪಡೆ ದಾಳಿ ನಡೆಸಿದ ಬೆನ್ನಲ್ಲೇ ಸರಕಾರ ಸರ್ವಪಕ್ಷ ಸಭೆ ಕರೆದು ದಾಳಿ ಕುರಿತು ನೀಡಿದೆ. ಅಧ್ಯಕ್ಷತೆ ವಹಿಸಿದ್ದ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್‌ ಅವರು ಸಭೆಗೆ ಕಾರ್ಯಾಚರಣೆಯ ವಿವರಗಳನ್ನು ನೀಡಿದರು. ಈ ವೇಳೆ ಕಾಂಗ್ರೆಸ್‌ನ ಗುಲಾಂ ನಬಿ ಆಜಾದ್‌ ಸೇರಿ ಹಲವು ನಾಯಕರು ಉಗ್ರರ ವಿರುದ್ಧ ಸರಕಾರ ಕೈಗೊಳ್ಳುವ ನಿರ್ಧಾರಗಳಿಗೆ ತಮ್ಮ ಬೆಂಬಲ ಘೋಷಿಸಿದರು. ಅಲ್ಲದೇ ವಾಯುಪಡೆಯ ಸಾಹಸವನ್ನು ಕೊಂಡಾಡಿದರು. ಕೇಂದ್ರ ಸಚಿವರಾದ ರಾಜನಾಥ್‌ ಸಿಂಗ್‌, ಅರುಣ್‌ ಜೇಟ್ಲಿ, ಸಿಪಿಐ(ಎಂ) ನಾಯಕ ಸೀತಾರಾಂ ಯೆಚೂರಿ, ಟಿಎಂಸಿ ನಾಯಕ ಡೆರೆಕ್‌ ಒಬ್ರಿಯಾನ್‌, ನ್ಯಾಷನಲ್‌ ಕಾನ್ಫರೆನ್ಸ್‌ನ ಒಮರ್‌ ಅಬ್ದುಲ್ಲಾ, ಎನ್‌ಸಿಪಿಯ ಪ್ರಫುಲ್‌ ಪಟೇಲ್‌ ಸೇರಿ ಹಲವರು ಪಾಲ್ಗೊಂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ