ಆ್ಯಪ್ನಗರ

ತ್ರಿವಳಿ ತಲಾಖ್ ಆಯ್ತು, ಮತ್ತೀಗ ನಿಖಾ ಹಲಾಲ, ಬಹುಪತ್ನಿತ್ವ ರದ್ದತಿಗೆ ಸಿದ್ಧತೆ

ತೀವ್ರ ವಿರೋಧದ ನಡುವೆ ತ್ರಿವಳಿ ತಲಾಖ್ ನಿಷೇಧ ಮಾಡಿದ್ದ ಕೇಂದ್ರ ಸರಕಾರವೀಗ ನಿಖಾ ಹಲಾಲ ಮತ್ತು ಬಹುಪತ್ನಿತ್ವವನ್ನು ಕ್ರಿಮಿನಲ್ ಅಪರಾಧದಡಿ ತರಲು ಸಿದ್ಧತೆ ನಡೆಸಿದೆ. ಇವೆರಡು ಪದ್ಧತಿಗಳು ಅಸಾಂವಿಧಾನಿಕ ಎಂದು ಘೋಷಿಸುವಂತೆ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿರುವ ಅರ್ಜಿದಾರರ ಪರ ನಿಲ್ಲಲು ಕೇಂದ್ರ ನಿರ್ಧರಿಸಿದೆ.

TIMESOFINDIA.COM 30 Jun 2018, 3:20 pm
ಹೊಸದಿಲ್ಲಿ: ತೀವ್ರ ವಿರೋಧದ ನಡುವೆ ತ್ರಿವಳಿ ತಲಾಖ್ ನಿಷೇಧ ಮಾಡಿದ್ದ ಕೇಂದ್ರ ಸರಕಾರವೀಗ ನಿಖಾ ಹಲಾಲ ಮತ್ತು ಬಹುಪತ್ನಿತ್ವವನ್ನು ಕ್ರಿಮಿನಲ್ ಅಪರಾಧದಡಿ ತರಲು ಸಿದ್ಧತೆ ನಡೆಸಿದೆ. ಇವೆರಡು ಪದ್ಧತಿಗಳು ಅಸಾಂವಿಧಾನಿಕ ಎಂದು ಘೋಷಿಸುವಂತೆ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿರುವ ಅರ್ಜಿದಾರರ ಪರ ನಿಲ್ಲಲು ಕೇಂದ್ರ ನಿರ್ಧರಿಸಿದೆ.
Vijaya Karnataka Web Muslim


ನಿಖಾ ಹಲಾಲ (ವಿಚ್ಛೇದಿತ ಪತ್ನಿ ಮರುಮದುವೆ ನಿಯಮಗಳು) ಎನ್ನುವುದು ವಿವಾದಾತ್ಮಕ ಪದ್ಧತಿಯಾಗಿದ್ದು, ವಿಚ್ಛೇದಿತ ದಂಪತಿ ಮರು ಮದುವೆಯಾಗಲು ಬಹುದೊಡ್ಡ ತೊಡಕಾಗಿ ಪರಿಣಮಿಸಿದೆ. ಇದರ ಪ್ರಕಾರ, ಪರಿತ್ಯಕ್ತ ಪತಿಯನ್ನು ಪುನಃ ವರಿಸಲು ಕೆಲ ಪ್ರಕ್ರಿಯೆಯನ್ನು ಪೂರೈಸಬೇಕಾಗುತ್ತದೆ. ಇಲ್ಲಿ ಮಹಿಳೆ ಇನ್ನೊಬ್ಬನನ್ನು ಮದುವೆಯಾಗಿ ವಿಚ್ಛೇದನ ಪಡೆಯಬೇಕು ಅಥವಾ ಆ ಎರಡನೇ ಪತಿ ಮರಣ ಹೊಂದಿರಬೇಕು.

ಬಹುಪತ್ನಿತ್ವ ಎನ್ನುವುದು ಮುಸ್ಲಿಂ ಸಮುದಾಯದಲ್ಲಿ ವ್ಯಾಪಕವಾಗಿ ಪ್ರಚಲಿತದಲ್ಲಿದ್ದು ಒಂದಕ್ಕಿಂತ ಹೆಚ್ಚು ಮಹಿಳೆಯರನ್ನು ಮದುವೆಯಾಗುವ ಅವಕಾಶ ಕಲ್ಪಿಸಿದೆ. ಈ ಎರಡು ಪದ್ಧತಿಗಳು ಮಹಿಳಾ ವಿರೋಧಿಯಾಗಿದ್ದು, ನಿಷೇಧಗೊಳ್ಳಲೇಬೇಕಿದೆ ಎಂದು ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆಯಾಗಿದೆ.

ಅರ್ಜಿ ವಿಚಾರಣೆ ನಡೆಸಲು ಒಪ್ಪಿದ್ದ ಕೋರ್ಟ್, ಈ ಕುರಿತು ಪ್ರತಿಕ್ರಿಯೆ ನೀಡುವಂತೆ ಈ ಹಿಂದೆ ಕೇಂದ್ರ ಸರಕಾರಕ್ಕೆ ನೋಟಿಸ್ ಜಾರಿ ಮಾಡಿತ್ತು.

ತಲಾಖ್ ವಿರುದ್ಧ ಕೋರ್ಟ್ ಮೆಟ್ಟಿಲೇರಿ ಜಯ ಗಳಿಸಿರುವ ಭಾರತೀಯ ಮುಸ್ಲಿಂ ಮಹಿಳಾ ಆಂದೋಲನ ( ಬಿಎಮ್ಎಮ್ಎ) ಎಂಬ ಸ್ವಯಂ ಸೇವಾ ಸಂಸ್ಥೆ ಕೂಡ ನಿಖಾ ಹಲಾಲ ಮತ್ತು ಬಹುಪತ್ನಿತ್ವದ ವಿರುದ್ಧ ಅರ್ಜಿ ಸಲ್ಲಿಸಿರುವವರ ಪರ ನಿಲ್ಲುವುದಾಗಿ ಹೇಳಿದೆ.

ಮುಸ್ಲಿಮ್‌ ಸಮುದಾಯದಲ್ಲಿನ ತ್ರಿವಳಿ ತಲಾಖ್‌ ಅಸಾಂವಿಧಾನಿಕ ಎಂದು ಸುಪ್ರೀಂ ಕೋರ್ಟ್‌ ಕಳೆದ ವರ್ಷ ತೀರ್ಪು ನೀಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ