ಆ್ಯಪ್ನಗರ

ಚಿದಂಬರಂಗೆ ಶುಕ್ರವಾರದವರೆಗೂ ಸಿಬಿಐ ಕಸ್ಟಡಿ ಅವಧಿ ಮುಂದುವರಿಕೆ

ಚಿದಂಬರಂಗೆ ಸದ್ಯಕ್ಕೆ ಕಾಲ ಸರಿ ಇಲ್ಲ. ಸುಪ್ರೀಂ ಕೋರ್ಟ್‌ನಲ್ಲಿ ಜಾಮೀಜು ಅರ್ಜಿ ತಿರಸ್ಕೃತಗೊಂಡಿದ್ದರೆ, ದಿಲ್ಲಿ ನ್ಯಾಯಾಲಯ ಸಿಬಿಐ ಕಸ್ಟಡಿಯನ್ನು ಶುಕ್ರವಾರದವರೆಗೆ ವಿಸ್ತರಿಸಿದೆ.

Vijaya Karnataka Web 26 Aug 2019, 7:16 pm
ಹೊಸದಿಲ್ಲಿ: ಐಎನ್‌ಎಕ್ಸ್‌ ಮೀಡಿಯಾ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐ ವಶದಲ್ಲಿರುವ ಹಿರಿಯ ಕಾಂಗ್ರೆಸ್‌ ನಾಯಕ ಪಿ. ಚಿದಂಬರಂ ಅವರನ್ನು ಇನ್ನೂ ನಾಲ್ಕು ದಿನಗಳ ಕಾಲ ಕಸ್ಟಡಿಗೆ ಒಪ್ಪಿಸಿ ನ್ಯಾಯಾಲಯ ಆದೇಶ ನೀಡಿದೆ.
Vijaya Karnataka Web ಚಿದಂಬರಂ
ಚಿದಂಬರಂ


ಕಳೆದ ಆಗಸ್ಟ್‌ 23ರಂದು ಚಿದಂಬರಂ ಅವರನ್ನು ನಾಲ್ಕು ದಿನಗಳ ಕಾಲ ಸಿಬಿಐ ಕಸ್ಟಡಿಗೆ ಒಪ್ಪಿಸಲಾಗಿತ್ತು. ಆಗಸ್ಟ್‌ 26ರಂದು ಕಸ್ಟಡಿ ಅವಧಿ ಮುಗಿದಿದೆ.

ಚಿದಂಬರಂ ವಿಚಾರಣೆಗೆ ಸಹಕಾರ ನೀಡುತ್ತಿಲ್ಲ. ಇನ್ನಷ್ಟು ಮಾಹಿತಿಯನ್ನು ಪಡೆಯಬೇಕಾಗಿದೆ ಎಂದು ಸಿಬಿಐ ಪರ ವಕೀಲರಾದ ಸಾಲಿಸಿಟರ್‌ ಜನರಲ್ ತುಷಾರ್ ಮೆಹ್ತಾ, ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಕೆಎನ್‌ ನಟರಾಜನ್‌ ವಾದಿಸಿದರು.

ಇನ್ನೂ ಐದು ದಿನಗಳ ಕಾಲ ಸಿಬಿಐ ಕಸ್ಟಡಿಗೆ ಒಪ್ಪಿಸಬೇಕೆಂದು ವಕೀಲರು ಮಾಡಿದರು.

ಇದನ್ನು ಪುರಸ್ಕರಿಸಿದ ನ್ಯಾಯಾಲಯ ಶುಕ್ರವಾರದವರೆಗೆ ಸಿಬಿಐ ಕಸ್ಟಡಿಗೆ ಒಪ್ಪಿಸಿ ಆದೇಶ ನೀಡಿದೆ.

ಹೆಚ್ಚುವರಿ ಮಾಹಿತಿ ಪಡೆಯಲು ವಿಚಾರಣೆ ಅಗತ್ಯವಿದೆ ವಕೀಲರು ವಾದಿಸಿದಾಗ ನಾಲ್ಕು ದಿನಗಳ ಏನು ಮಾಡಿದಿರಿ ಎಂದು ನ್ಯಾಯಾಧೀಶರು ಪ್ರಶ್ನಿಸಿದರು.

ಈ ಸಂದರ್ಭದಲ್ಲಿ ವಿಚಾರಣೆಯ ದಾಖಲೆಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು.

ಕಸ್ಟಡಿ ಅವಧಿಯನ್ನು ವಿಸ್ತರಿಸಬೇಕೆಂದು ಸಿಬಿಐ ಪರ ವಕೀಲರ ವಾದಕ್ಕೆ ಚಿದಂಬರಂ ಪರ ವಕೀಲ ಕಪಿಲ್‌ ಸಿಬಲ್‌ ವಿರೋಧ ವ್ಯಕ್ತಪಡಿಸಿದರು.

ಕಪಿಲ್‌ ಸಿಬಲ್‌ ವಾದವನ್ನು ತಿರಸ್ಕರಿಸಿದ ನ್ಯಾಯಾಲಯ ಪಿ ಚಿದಂಬರಂರನ್ನು ಸಿಬಿಐ ಕಸ್ಟಡಿಗೆ ಒಪ್ಪಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ