ಆ್ಯಪ್ನಗರ

ಲೇಹ್‌ಗೆ ಭೇಟಿ ನೀಡಲಿರುವ ಬಿಪಿನ್ ರಾವತ್: ಸಿಡಿಎಸ್‌ ವಿವರಣೆಗಾಗಿ ಗ್ರೌಂಡ್ ರಿಪೋರ್ಟ್ ರೆಡಿ!

ಲಡಾಖ್ ಗಡಿಯಲ್ಲಿ ಭಾರತ-ಚೀನಾ ಸೈನಿಕರ ನಡುವಿನ ಭೀಕರ ಹಿಂಸಾತ್ಮಕ ಗಡಿ ಘರ್ಷಣೆ ಬಳಿಕದ ಪರಿಸ್ಥಿತಿ ಅವಲೋಕಿಸಲು, ರಕ್ಷಣಾ ಸಿಬ್ಬಂದಿ ಮುಖ್ಯಸ್ಥ(ಸಿಡಿಎಸ್) ಬಿಪಿನ್ ರಾವತ್ ಇಂದು(ಶುಕ್ರವಾರ) ಲೇಹ್‌ಗೆ ಭೇಟಿ ನೀಡಲಿದ್ದಾರೆ.

Vijaya Karnataka Web 3 Jul 2020, 8:18 am
ನವದೆಹಲಿ: ಲಡಾಖ್ ಗಡಿಯಲ್ಲಿ ಭಾರತ-ಚೀನಾ ಸೈನಿಕರ ನಡುವಿನ ಭೀಕರ ಹಿಂಸಾತ್ಮಕ ಗಡಿ ಘರ್ಷಣೆ ಬಳಿಕದ ಪರಿಸ್ಥಿತಿ ಅವಲೋಕಿಸಲು, ರಕ್ಷಣಾ ಸಿಬ್ಬಂದಿ ಮುಖ್ಯಸ್ಥ(ಸಿಡಿಎಸ್) ಬಿಪಿನ್ ರಾವತ್ ಇಂದು(ಶುಕ್ರವಾರ) ಲೇಹ್‌ಗೆ ಭೇಟಿ ನೀಡಲಿದ್ದಾರೆ.
Vijaya Karnataka Web bipin-rawat-pti
ಸಂಗ್ರಹ ಚಿತ್ರ


ಲೇಹ್‌ಗೆ ಭೇಟಿ ನೀಡಲಿರುವ ಬಿಪಿನ್ ರಾವತ್, ಲಡಾಖ್ ಗಡಿ ಘರ್ಷಣೆ ಕುರಿತು ಮಾಹಿತಿ ಪಡೆಯಲಿದ್ದಾರೆ. ಅಲ್ಲದೇ ಸದ್ಯದ ಗಡಿ ಪರಿಸ್ಥಿತಿಯನ್ನು ಖುದ್ದು ಅವಲೋಕಿಸಲಿದ್ದಾರೆ.

ಸೇನೆಯ 14 ಕೋರ್‌ನ ಹಿರಿಯ ಸೇನಾಧಿಕಾರಿಗಳು ಬಿಪಿನ್ ರಾವತ್ ಅವರಿಗೆ ಲಡಾಖ್ ಗಡಿಯಲ್ಲಿನ ಸದ್ಯದ ಸ್ಥಿತಿಗತಿಯ ಕುರಿತು ಮಾಹಿತಿ ನೀಡಲಿದ್ದಾರೆ ಎಂದು ಹೇಳಲಾಗಿದೆ.

ವಿಡಿಯೋ: ಗಾಲ್ವಾನ್ ವ್ಯಾಲಿ ಘರ್ಷಣೆ: ಗಾಯಗೊಂಡ ಸೈನಿಕರನ್ನು ಭೇಟಿಯಾದ ಸೇನಾ ಮುಖ್ಯಸ್ಥ



ಈಗಾಗಲೇ ಭೂಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಣೆ ಲೇಹ್ ಮತ್ತು ಲಡಾಖ್‌ಗೆ ಭೇಟಿ ನೀಡಿದ್ದು, ಇದೀಗ ಬಿಪಿನ್ ರಾವತ್ ಕೂಡ ಲೇಹ್‌ಗೆ ಭೇಟಿ ನೀಡಲಿರುವುದು ತಿವ್ರ ಕುತೂಹಲ ಮೂಡಿಸಿದೆ.

ಚೀನಾ ಗಡಿಯಲ್ಲಿ ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ - ಭೂಸೇನಾ ಮುಖ್ಯಸ್ಥ ನರವಾಣೆ

ಲಡಾಖ್ ಗಡಿ ಘರ್ಷಣೆ ಬಳಿಕ ಸೇನೆಯಲ್ಲಿ ಚಟುವಟಿಕೆಗಳು ತೀವ್ರಗೊಳ್ಳುತ್ತಿದ್ದು, ಖುದ್ದು ಭಾರತದ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ(ಸಿಡಿಎಸ್) ಬಿಪಿನ್ ರಾವತ್ ವಸ್ತುಸ್ಥಿತಿ ಅಧ್ಯಯನ ನಡೆಸಲಿರುವುದು ದೇಶದ ಗಮನ ಸೆಳೆದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ