ಆ್ಯಪ್ನಗರ

ಭಾರತ-ಚೀನಾ ಗಡಿ ಬಿಕ್ಕಟ್ಟು: ರಾಮ ಮಂದಿರ ನಿರ್ಮಾಣ ಕಾಮಗಾರಿ ಮುಂದೂಡಿಕೆ

ಕೋವಿಡ್‌-19 ಬಿಕ್ಕಟ್ಟು ದಿನೇ ದಿನೆ ಉಲ್ಬಣಿಸುತ್ತಿರುವುದು ಒಂದು ಕಡೆಯಾದರೆ ಮತ್ತೊಂದು ಕಡೆ ಚೀನಾ ಗಡಿಯಲ್ಲಿ ಉದ್ವಿಗ್ನ ಸನ್ನಿವೇಶ ನಿರ್ಮಾಣವಾಗಿದೆ. ದೇಶದ ಮುಂದಿನ ಪರಿಸ್ಥಿತಿ ನೋಡಿಕೊಂಡು ಮಂದಿರ ನಿರ್ಮಾಣಕ್ಕೆ ದಿನಾಂಕ ಪ್ರಕಟಿಸಲಾಗುವುದು ಎಂದು ಟ್ರಸ್ಟ್‌ ಹೇಳಿದೆ.

Agencies 19 Jun 2020, 6:40 pm

ಅಯೋಧ್ಯೆ: ಭಾರತ - ಚೀನಾ ಗಡಿ ಸಂಘರ್ಷದ ಹಿನ್ನೆಲೆಯಲ್ಲಿ ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಿಸುವ ಯೋಜನೆಯನ್ನು ಸದ್ಯಕ್ಕೆ ಕೈಬಿಡಲಾಗಿದೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ಹೇಳಿದೆ. ಗಾಲ್ವಾನ್‌ ಕಣಿವೆಯ ಸಂಘರ್ಷದಲ್ಲಿ ಚೀನಿ ಯೋಧರ ಆಕ್ರಮಣದಲ್ಲಿ ಹುತಾತ್ಮರಾದ 20 ಯೋಧರಿಗೆ ನಮನ ಸಲ್ಲಿಸಿರುವ ಟ್ರಸ್ಟ್‌, ಚೀನಾ ಗಡಿಯಲ್ಲಿನ ಪರಿಸ್ಥಿತಿ ಬಿಗುವಿನಿಂದ ಕೂಡಿದ್ದು ನಮಗೆ ದೇಶ ಮೊದಲು ಎಂದು ಅದು ಹೇಳಿದೆ.
Vijaya Karnataka Web Ram Janmabhoomi


ಕೆಲವು ವಾರಗಳ ಹಿಂದಷ್ಟೇ ಮಂದಿರ ನಿರ್ಮಾಣಕ್ಕೆ ಭೂಮಿ ಸಮತಟ್ಟುಗೊಳಿಸುವ ಕಾಮಗಾರಿಯನ್ನು ಟ್ರಸ್ಟ್‌ ಕೈಗೊಂಡಿತ್ತು. ಆದರೆ ಸದ್ಯಕ್ಕೆ ಎಲ್ಲ ಕಾಮಗಾರಿಗಳಿಗೂ ಸ್ವಯಂ ನಿರ್ಬಂಧ ವಿಧಿಸಿಕೊಂಡಿದೆ. "ಕೋವಿಡ್‌-19 ಬಿಕ್ಕಟ್ಟು ದಿನೇ ದಿನೆ ಉಲ್ಬಣಿಸುತ್ತಿರುವುದು ಒಂದು ಕಡೆಯಾದರೆ ಮತ್ತೊಂದು ಕಡೆ ಚೀನಾ ಗಡಿಯಲ್ಲಿ ಉದ್ವಿಗ್ನ ಸನ್ನಿವೇಶ ನಿರ್ಮಾಣವಾಗಿದೆ. ದೇಶದ ಮುಂದಿನ ಪರಿಸ್ಥಿತಿ ನೋಡಿಕೊಂಡು ಮಂದಿರ ನಿರ್ಮಾಣಕ್ಕೆ ದಿನಾಂಕ ಪ್ರಕಟಿಸಲಾಗುವುದು," ಎಂದು ಟ್ರಸ್ಟ್‌ ಸದಸ್ಯ ಅನಿಲ್‌ ಮಿಶ್ರಾ ಅವರು ಸುದ್ದಿಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ.
ಅಯೋಧ್ಯೆ ರಾಮಮಂದಿರ ನಿರ್ಮಾಣ: ಜುಲೈ 1ಕ್ಕೆ ಯೋಗಿ ಆದಿತ್ಯನಾಥ ಭೂಮಿ ಪೂಜೆ ಸಾಧ್ಯತೆ!

ಕಳೆದ ವರ್ಷ ಸುಪ್ರೀಂ ಕೋರ್ಟ್‌ ಶ್ರೀರಾಮಜನ್ಮಭೂಮಿ-ಬಾಬ್ರಿ ಮಸೀದಿ ಭೂ ಒಡೆತನ ವ್ಯಾಜ್ಯದ ಕುರಿತು ನೀಡಿದ ಐತಿಹಾಸಿಕ ತೀರ್ಪಿನ ಬಳಿಕ ರಾಮ ಮಂದಿರ ನಿರ್ಮಿಸುವ ಹೊಣೆಗಾರಿಕೆಯನ್ನು ಟ್ರಸ್ಟ್‌ ವಹಿಸಿಕೊಂಡಿದೆ. ಈ ಮಧ್ಯೆ ಚೀನಾ ವಿರುದ್ಧ ವಿವಿಧ ಸಂಘಟನೆಗಳು ಪ್ರತಿಭಟನೆ ಮುಂದುವರಿಸಿವೆ. ಹಿಂದೂ ಮಹಾಸಭಾ, ವಿಶ್ವ ಹಿಂದೂ ಪರಿಷತ್‌ ಸೇರಿ ಹಲವು ಸಂಘಟನೆಗಳು ಚೀನಾದ ಉತ್ಪನ್ನಗಳನ್ನು ನಾಶಪಡಿಸಿ ಅವುಗಳನ್ನು ಬಹಿಷ್ಕರಿಸುವಂತೆ ಜನತೆಗೆ ಕರೆ ನೀಡಿವೆ. ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ