ಆ್ಯಪ್ನಗರ

ತೇಜಸ್ವಿ ಯಾದವ್‌ಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ ಚಿರಾಗ್ ಪಾಸ್ವಾನ್!

ಬಿಹಾರದ ನೂತನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಹೇಳಲಾಗುತ್ತಿರುವ ಮಹಾಘಟಬಂಧನ್ ಮೈತ್ರಿಕೂಟ ಹಾಗೂ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಇಂದು(ನ.09)32ನೇ ವಸಂತಕ್ಕೆ ಕಾಲಿಟ್ಟಿದ್ದು, ಎಲ್‌ಜೆಪಿ ಮುಖ್ಯಸ್ಥ ಚಿರಾಗ್ ಪಾಸ್ವಾನ್ ಜನ್ಮದಿನದ ಶುಭಾಶಯ ತಿಳಿಸಿದ್ದಾರೆ.

Vijaya Karnataka Web 9 Nov 2020, 7:44 pm
ಪಾಟ್ನಾ: ನಾಳೆ(ನ.10-ಮಂಗಳವಾರ) ಬಿಹಾರ ವಿಧಾನಸಭೆ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಇಡೀ ದೇಶ ಕಾತರದಿಂದ ಕಾಯುತ್ತಿರುವ ಈ ಫಲಿತಾಂಶ ಪ್ರಕಟಣೆಗೆ ಕ್ಷಣಗಣನೆ ಆರಂಭವಾಗಿದೆ.
Vijaya Karnataka Web Tejashwi Prasad Yadav and LJP chief Chirag Paswan
ಸಂಗ್ರಹ ಚಿತ್ರ


ಈ ಮಧ್ಯೆ ಬಿಹಾರದ ನೂತನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಹೇಳಲಾಗುತ್ತಿರುವ ಮಹಾಘಟಬಂಧನ್ ಮೈತ್ರಿಕೂಟ ಹಾಗೂ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಇಂದು(ನ.09) 32ನೇ ವಸಂತಕ್ಕೆ ಕಾಲಿಟ್ಟಿದ್ದು, ಪ್ರಮುಖ ಗಣ್ಯರು ತೇಜಸ್ವಿ ಯಾದವ್ ಅವರಿಗೆ ಜನ್ಮದಿನದ ಶುಭಾಶಯ ತಿಳಿಸಿದ್ದಾರೆ.

ಅದರಂತೆ ತೇಜಸ್ವಿ ಯಾದವ್ ಅವರಿಗೆ ಜನ್ಮದಿನದ ಶುಭಾಶಯ ತಿಳಿಸಿರುವ ಎಲ್‌ಜೆಪಿ ಮುಖ್ಯಸ್ಥ ಚಿರಾಗ್ ಪಾಸ್ವಾನ್, ತೇಜಸ್ವಿ ಅವರ ಎಲ್ಲ ಕನಸುಗಳೂ ಸಾಕಾರವಾಗಲಿ ಎಂದು ಹಾರೈಸಿದ್ದಾರೆ.

ತೇಜಸ್ವಿ ಯಾದವ್‌ ಆಗ್ತಾರಾ ರಾಜ್ಯವೊಂದರ ಅತಿ ಕಿರಿಯ ಮುಖ್ಯಮಂತ್ರಿ?

ಈ ಕುರಿತು ಟ್ವೀಟ್ ಮಾಡಿರುವ ಚಿರಾಗ್ ಪಾಸ್ವಾನ್, 32ನೆ ವಸಂತಕ್ಕೆ ಕಾಲಿಟ್ಟಿರುವ ತೇಜಸ್ವಿ ಯಾದವ್ ಅವರಿಗೆ ದೇವರು ದೀರ್ಘಾಯುಷ್ಯ ಮತ್ತು ಆರೋಗ್ಯ ಕರುಣಿಸಲಿ ಎಂದು ಪ್ರಾರ್ಥಿಸುವುದಾಗಿ ಹೇಳಿದ್ದಾರೆ.


ಇನ್ನು ತೇಸ್ವಿ ಟ್ವೀಟ್‌ಗೆ ರಿಟ್ವೀಟ್ ಮಾಡಿರುವ ತೇಜಸ್ವಿ ಯಾದವ್ ಜನ್ಮದಿನಕ್ಕೆ ಶುಭಾಶಯ ತಿಳಿಸಿದಕ್ಕೆ 'ಧನ್ಯವಾದ ಸಹೋದರ' ಎಂದು ಹೇಳಿದ್ದಾರೆ.

ಬಿಹಾರ ವಿಧಾನಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಪರಸ್ಪರ ಪೂರಕವಾಗಿ ಮಾತನಾಡಿದ್ದ ಚಿರಾಗ್ ಪಾಸ್ವಾನ್ ಮತ್ತು ತೇಜಸ್ವಿ ಯಾದವ್, ಜೆಡಿಯು ನಾಯಕ ನಿತೀಶ್ ಕುಮಾರ್ ಅವರ ಚಿಂತೆಯನ್ನು ಹೆಚ್ಚಿಸಿದ್ದರು.

ನ.10 ರಂದು ತೇಜಸ್ವಿ ಮುಂದೆ ನಿತೀಶ್ ಮಂಡಿಯೂರಲಿದ್ದಾರೆ: ಚಿರಾಗ್ ಸ್ಫೋಟಕ ಹೇಳಿಕೆ!

ಅಲ್ಲದೇ ನ.10 ರ ಬಳಿಕ ತೇಜಸ್ವಿ ಯಾದವ್ ಅವರ ಮುಂದೆ ನಿತೀಶ್ ಕುಮಾರ್ ಮಂಡಿಯೂರಲಿದ್ದಾರೆ ಎಂದು ಹೇಳುವ ಮೂಲಕ ಚಿರಾಗ್ ಪಾಸ್ವಾನ್ ಭಾರೀ ಸಂಚಲನವನ್ನೇ ಸೃಷ್ಟಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ