ಆ್ಯಪ್ನಗರ

ಪೌರತ್ವ ಕಾಯ್ದೆ ಜಾರಿಯಿಂದ ಕಾಂಗ್ರೆಸ್‌ಗೆ ಹೊಟ್ಟೆ ನೋವು ಹೆಚ್ಚಾಗಿದೆ!

ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಈಶಾನ್ಯ ರಾಜ್ಯಗಳ ಸಾಮಾಜಿಕ, ಸಾಂಸ್ಕೃತಿಕ ಪರಂಪರೆ ಹಾಗೂ ಅಲ್ಲಿನ ಜನರಿಗೆ ಯಾವುದೇ ಸಮಸ್ಯೆಯಾಗದು. ಕಾಯ್ದೆ ಜಾರಿಗೊಂಡ ಬಳಿಕ ಕಾಂಗ್ರೆಸ್‌ ಹೊಟ್ಟೆ ನೋವು ಮಾತ್ರ ಹೆಚ್ಚಾಗಿದೆ ಎಂದು ಕೇಂದ್ರ ಸಚಿವ ಅಮಿತ್‌ ಶಾ ಲೇವಡಿ ಮಾಡಿದ್ದಾರೆ.

TIMESOFINDIA.COM 14 Dec 2019, 5:36 pm
ಗಿರಿಧ್‌ಹ್‌ (ಜಾರ್ಖಂಡ್‌): ಪೌರತ್ವ ತಿದ್ದುಪಡಿ ಕಾಯ್ದೆ ಕುರಿತಂತೆ ನಡೆಯುತ್ತಿರುವ ಹೋರಾಟಕ್ಕೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಗುಡಿಗಿದ್ದಾರೆ. ಬಿಜೆಪಿ ಜಾರಿಗೊಳಿಸಿದ ನೂತನ ಕಾಯ್ದೆ ಕಾಂಗ್ರೆಸ್‌ ಹೊಟ್ಟೆ ನೋವಿಗೆ ಕಾರಣವಾಗಿದೆ ಎಂದು ಲೇವಡಿ ಮಾಡಿದ್ದಾರೆ.
Vijaya Karnataka Web Amith sha


ಜಾರ್ಖಂಡ್‌ನ ಗಿರಿಧ್‌ನಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅಮಿತ್‌ ಶಾ, ಕೇಂದ್ರ ಸರಕಾರ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೊಳಿಸಿತು. ಇದರಿಂದ ಕಾಂಗ್ರೆಸ್‌ಗೆ ಹೊಟ್ಟೆ ನೋವು ಆರಂಭವಾಗಿದೆ. ಇದರ ಮುಂದಿನ ಭಾಗವಾಗಿ ಹೋರಾಟಗಳು ನಡೆಯುತ್ತಿದೆ ಎಂದರು. ಕಾಯ್ದೆಯಿಂದ ಈಶಾನ್ಯ ರಾಜ್ಯಗಳ ಜನರ ಸಾಮಾಜಿಕ, ರಾಜಕೀಯ, ಭಾಷಾ ಪ್ರಭುತ್ವತೆ, ಸಂಸ್ಕೃತಿಗೆ ಯಾವುದೇ ಧಕ್ಕೆಯಾಗದು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರಕಾರ ಈಶಾನ್ಯ ರಾಜ್ಯದ ಘನತೆ, ಗೌರವವನ್ನು ಕಾಪಾಡುವ ಕೆಲಸವನ್ನಷ್ಟೇ ಮಾಡಲಿದೆ ಎಂದು ಹೇಳಿದ್ದಾರೆ.

ವಿವಾದಾತ್ಮಕ ಸಿಎಬಿ ಕಾಯ್ದೆಗೆ ವ್ಯಾಪಕ ವಿರೋಧ

ಕಾಯ್ದೆ ವಿಚಾರವಾಗಿ ಈಗಾಗಲೇ ಮೇಘಾಲಯ ಸಿಎಂ ಕೋನಾರ್ಡ್‌ ಸಾಂಗ್ಮಾ ಅವರನ್ನು ಭೇಟಿ ಮಾಡಲಾಗಿದೆ. ಭಯಪಡುವ ಅಗತ್ಯವೇ ಇಲ್ಲ ಎಂದು ಪುನರುಚ್ಚರಿಸಿದ್ದಾರೆ.

ಎಲ್ಲೆಲ್ಲಿ ಏನಾಗಿದೆ?
ಪೌರತ್ವ ಕಾಯ್ದೆ ವಿರೋಧಿಸಿ, ಗುವಾಹಟಿ, ಕೋಲ್ಕತಾ, ಮೇಘಾಲಯ, ಕರ್ನಾಟಕದ ಕಲಬುರಗಿ ಸೇರಿದಂತೆ ಅನೇಕ ಭಾಗದಲ್ಲಿ ಪ್ರತಿಭಟನೆ, ಹೋರಾಟ ನಡೆದಿತ್ತು. ಗುವಾಹಟಿಯಲ್ಲಿ ಎರಡು ದಿನಗಳ ಬಳಿಕ ಕರ್ಫ್ಯೂ ಸಡಿಲಿಸಲಾಗಿದೆ. ನಾಗಲ್ಯಾಂಡ್‌ನಲ್ಲಿ ಎನ್‌ಎಸ್‌ಎಫ್‌ನಿಂದ ಆರು ಗಂಟೆಗಳ ಬಂದ್‌ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ. ದೈನಂದಿನ ವ್ಯವಹಾರ ಸ್ಥಗಿತಗೊಂಡಿದೆ.
ಈಶಾನ್ಯ ರಾಜ್ಯಗಳಲ್ಲಿ ಬಿಗುವಿನ ಪರಿಸ್ಥಿತಿ ಇರುವ ಹಿನ್ನೆಲೆಯಲ್ಲಿ ಜಪಾನ್‌ ಪ್ರಧಾನಿ ಭಾರತ ಪ್ರವಾಸವನ್ನು ರದ್ದುಗೊಳಿಸಲಾಗಿದ್ದು, ಯುಎಸ್‌ ಹಾಗೂ ಯುಕೆಯಿಂದ ಪ್ರವಾಸಕ್ಕಾಗಿ ಭಾರತಕ್ಕೆ ಆಗಮಿಸುವವರಿಗೆ ಎಚ್ಚರಿಕೆಯಿಂದ ಪ್ರಯಾಣ ಮಾಡುವಂತೆ ತಿಳಿಸಲಾಗಿದೆ.
ಕೋಲ್ಕತಾದಲ್ಲಿ ರೈಲು ಹಾಗೂ ಹೆದ್ದಾರಿ ತಡೆದು ಹೋರಾಟ ನಡೆಸಲಾಗಿದೆ. ರೈಲ್ವೆ ನಿಲ್ದಾಣದ ಕಟ್ಟಡಕ್ಕೆ ಬೆಂಕಿ ಹಚ್ಚಲಾಗಿದ್ದು, ಒಟ್ಟಾರೆ 15ಕ್ಕೂ ಅಧಿಕ ಬಸ್‌ಗಳಿಗೂ ಬೆಂಕಿ ಹಾಕಿ ಹೋರಾಟ ನಡೆಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ