ಆ್ಯಪ್ನಗರ

ಮೋದಿಯ ಟೀಕಿಸಬೇಡಿ: ಪಳನಿಸ್ವಾಮಿ

ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರವನ್ನು ಟೀಕಿಸಬಾರದು ಎಂದು ತಮಿಳುನಾಡು ಮುಖ್ಯಮಂತ್ರಿ ಎಡಪಾಡಿ ಕೆ.ಪಳನಿಸ್ವಾಮಿ ಸಂಪುಟ ಸಹೋದ್ಯೋಗಿಗಳಿಗೆ ನಿರ್ದೇಶಿಸಿದ್ದಾರೆ.

ಟೈಮ್ಸ್ ಆಫ್ ಇಂಡಿಯಾ 4 May 2017, 3:08 pm
ಚೆನ್ನೈ: ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರವನ್ನು ಟೀಕಿಸದಂತೆ ಸಂಪುಟ ಸಹೋದ್ಯೋಗಿಗಳಿಗೆ ತಮಿಳುನಾಡು ಮುಖ್ಯಮಂತ್ರಿ ಎಡಪಾಡಿ ತಾಕೀತು ಮಾಡಿದ್ದಾರೆ.
Vijaya Karnataka Web cm edappadi k palaniswami to aiadmk dont slam modi government
ಮೋದಿಯ ಟೀಕಿಸಬೇಡಿ: ಪಳನಿಸ್ವಾಮಿ


ಕೇಂದ್ರ ಸರಕಾರದೊಂದಿಗೆ ಒಳ್ಳೆಯ ಸಂಬಂಧ ಹೊಂದುವ ಜತೆ ಉತ್ತಮ ಆಡಳಿತ ನೀಡುವ ಪ್ರಯತ್ನದಲ್ಲಿರುವ ಪಳನಿಸ್ವಾಮಿ, ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರವನ್ನು ಟೀಕಿಸಬಾರದೆಂದು ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ನಿರ್ದೇಶಿಸಿದ್ದಾರೆ.

ಕೇಂದ್ರ ಸರಕಾರವನ್ನು ಟೀಕಿಸಬಾರದೆಂದು ಸಿಎಂ ಎಡಪಾಡಿ ನಿರ್ದೇಶನ ಕುರಿತು ಪ್ರತಿಕ್ರಿಯಿಸಿದ ಡಿಎಂಕೆ ಕಾರ್ಯಕಾರಿ ಅಧ್ಯಕ್ಷ ಎಂ.ಕೆ. ಸ್ಟಾಲಿನ್ , ಐಟಿ ಹಾಗೂ ಇಡಿ ಇಲಾಖೆ ಮಾಡಬಹುದಾದ ಸಂಭವನೀಯ ದಾಳಿಯಿಂದ ತಪ್ಪಿಸಿಕೊಳ್ಳಲು ಈ ನಿಲುವು ತೆಗೆದುಕೊಂಡಿದ್ದಾರೆಯೇ ಹೊರತು ರಾಜ್ಯದ ಜನತೆಗೆ ಉತ್ತಮ ಯೋಜನೆ ನೀಡುವ ಉದ್ದೇಶದಿಂದ ಅಲ್ಲ ಎಂದು ಜರಿದಿದ್ದಾರೆ.

ಮುಖ್ಯಮಂತ್ರಿ ನಿರ್ದೇಶನ ಕುರಿತು ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಪುರಸಭೆಯ ಆಡಳಿತ ಸಚಿವ ಎಸ್.ಪಿ.ವೆಲುಮಾನಿ, ಯೋಜನೆಗಳನ್ನು ನೆರವೇರಿಸಲು ಕೇಂದ್ರ ಸರಕಾರದ ಬೆಂಬಲ ಅಗತ್ಯ ಎಂದಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ