ಆ್ಯಪ್ನಗರ

ರಾಹುಲ್‌ ಮನವೊಲಿಸಲು ಸಿಎಂಗಳ ಅಂತಿಮ ಕಸರತ್ತು

ಸಭೆಯಲ್ಲಿ ಮುಖ್ಯಮಂತ್ರಿಗಳಾದ ಪಂಜಾಬ್‌ನ ಕ್ಯಾ.ಅಮರೀಂದರ್‌ ಸಿಂಗ್‌, ಛತ್ತೀಸ್‌ಗಢದ ಭೂಪೇಶ್‌ ಭಗೇಲ್‌ ಮತ್ತು ಪಾಂಡಿಚೇರಿಯ ನಾರಾಯಣಸ್ವಾಮಿ ಭಾಗವಹಿಸಿದ್ದರು.

PTI 2 Jul 2019, 5:00 am
ಹೊಸದಿಲ್ಲಿ: ಲೋಕಸಭೆ ಚುನಾವಣೆ ಮುಖಭಂಗದ ಬಳಿಕ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನ ತ್ಯಜಿಸುವ ಘೋಷಣೆ ಮಾಡಿರುವ ರಾಹುಲ್‌ ಗಾಂಧಿ ಅವರ ಮನವೊಲಿಸಲು ಪಕ್ಷದಲ್ಲಿ ಅಂತಿಮ ಕಸರತ್ತು ನಡೆದಿದೆ. ಕಾಂಗ್ರೆಸ್‌ ಆಡಳಿತ ಇರುವ ರಾಜ್ಯಗಳ ಮುಖ್ಯಮಂತ್ರಿಗಳು ಸೋಮವಾರ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯುವಂತೆ ಪರಿಪರಿಯ ಮನವಿ ಮಾಡಿದರು. ಆದರೆ, ಮಾತುಕತೆ ವೇಳೆ ರಾಹುಲ್‌ ಯಾವುದೇ ಸ್ಪಷ್ಟ ಭರವಸೆ ನೀಡಿಲ್ಲ. ಮುಖ್ಯಮಂತ್ರಿಗಳು ಸ್ಥಳದಲ್ಲಿಯೇ ಅವರನ್ನು ಒಪ್ಪಿಸುವ ಪ್ರಯತ್ನ ಮಾಡಿದರಾದರೂ ಅದಕ್ಕೆ ಅವರು ಬಗ್ಗಲಿಲ್ಲ ಎಂದು ಮೂಲಗಳು ತಿಳಿಸಿವೆ.
Vijaya Karnataka Web raga


''ರಾಹುಲ್‌ ಗಾಂಧಿ ಅವರ ಜತೆ ಎರಡು ತಾಸುಗಳ ಕಾಲ ಉತ್ತಮ ಮಾತುಕತೆ ನಡೆಸಿದೆವು. ನಮ್ಮ ಭಾವನೆಗಳನ್ನು ಅವರ ಮುಂದೆ ಅರುಹಿದೆವು. ಮನ ಬಿಚ್ಚಿ ಮಾತಾಡಿದ್ದೇವೆ. ಪಕ್ಷದ ಕಾರ್ಯಕರ್ತರಾರಿಗೂ ಅವರು ಅಧ್ಯಕ್ಷ ಸ್ಥಾನ ತ್ಯಜಿಸುವುದು ಇಷ್ಟ ಇಲ್ಲ. ಇದೆಲ್ಲವನ್ನೂ ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದೇವೆ. ಅವರಿಂದ ಸಕಾರಾತ್ಮಕ ನಿರ್ಧಾರ ಹೊರ ಬೀಳುವ ನಿರೀಕ್ಷೆ ಇದೆ,'' ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ತಿಳಿಸಿದ್ದಾರೆ.

ಸಭೆಯಲ್ಲಿ ಮುಖ್ಯಮಂತ್ರಿಗಳಾದ ಪಂಜಾಬ್‌ನ ಕ್ಯಾ.ಅಮರೀಂದರ್‌ ಸಿಂಗ್‌, ಛತ್ತೀಸ್‌ಗಢದ ಭೂಪೇಶ್‌ ಭಗೇಲ್‌ ಮತ್ತು ಪಾಂಡಿಚೇರಿಯ ನಾರಾಯಣಸ್ವಾಮಿ ಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ