ಆ್ಯಪ್ನಗರ

ಅಕ್ರಮ ಕಲ್ಲಿದ್ದಲು ಗಣಿಗಾರಿಕೆ ಪ್ರಕರಣ, 4 ರಾಜ್ಯಗಳ 45 ಸ್ಥಳಗಳಲ್ಲಿ ಸಿಬಿಐ ದಾಳಿ

​​ಕಲ್ಲಿದ್ದಲು ಮಾಫಿಯಾ ಜೋರಾಗಿರುವ ಪ್ರದೇಶಗಳನ್ನು ಗುರುತಿಸಿ ಅಲ್ಲಿನ ಪ್ರಮುಖ ನಾಯಕರ ನಿವಾಸ ಮತ್ತು ಕಚೇರಿಗಳ ಮೇಲೆ ಸಿಬಿಐ ಶನಿವಾರ ದಾಳಿ ನಡೆಸಿದೆ. ಪಶ್ಚಿಮ ಬಂಗಾಳ-ಜಾರ್ಖಂಡ್‌ ಗಡಿಯಲ್ಲಿನ ಹೆಚ್ಚಿನ ಸ್ಥಳಗಳಲ್ಲಿ ದಾಳಿ ನಡೆದಿದೆ.

Agencies 28 Nov 2020, 7:23 pm
ಕೋಲ್ಕೊತಾ: ಕಲ್ಲಿದ್ದಲು ಅಕ್ರಮ ಗಣಿಗಾರಿಕೆ ಪ್ರಕರಣದ ಬೆನ್ನತ್ತಿರುವ ಸಿಬಿಐ ಅಧಿಕಾರಿಗಳು ಶನಿವಾರ ಪಶ್ಚಿಮ ಬಂಗಾಳ, ಬಿಹಾರ, ಜಾರ್ಖಂಡ್‌ ಮತ್ತು ಉತ್ತರ ಪ್ರದೇಶದ 40 ಕಡೆಗಳಲ್ಲಿ ದಾಳಿ ನಡೆಸಿದ್ದಾರೆ. ಪ್ರಮುಖವಾಗಿ ಈಸ್ಟ್‌ ಕೋಲ್‌ ಫೀಲ್ಡ್ಸ್‌ ಲಿಮಿಟೆಡ್‌ (ಇಸಿಎಲ್‌) ಅಧಿಕಾರಿಗಳು ಮತ್ತು ಇತರ ಗಣ್ಯರ ಕೈವಾಡದ ಬಗ್ಗೆ ಅಧಿಕಾರಿಗಳಿಂದ ತೀವ್ರ ಶೋಧ ಕಾರ್ಯ ನಡೆಯುತ್ತಿದೆ.
Vijaya Karnataka Web coal-mining
ಸಾಂದರ್ಭಿಕ ಚಿತ್ರ


ಕಲ್ಲಿದ್ದಲು ಮಾಫಿಯಾ ಜೋರಾಗಿರುವ ಪ್ರದೇಶಗಳನ್ನು ಗುರುತಿಸಿ ಅಲ್ಲಿನ ಪ್ರಮುಖ ನಾಯಕರ ನಿವಾಸ ಮತ್ತು ಕಚೇರಿಗಳ ಮೇಲೆ ಸಿಬಿಐ ದಾಳಿ ನಡೆಸಿದೆ. ಈ ಪೈಕಿ ಅನೂಪ್‌ ಮಾಝಿ ಅಲಿಯಾಸ್‌ ಲಾಲಾನ ಸಾಮ್ರಾಜ್ಯ ಇರುವ ಅಸಾನ್‌ಸೊಲ್‌, ದುರ್ಗಾಪುರ್‌, ರಾಣಿಗಂಜ್‌, ಬಿಷ್ಣುಪುರದಲ್ಲಿ ತೀವ್ರ ಶೋಧ ಕಾರ್ಯಾಚರಣೆ ನಡೆದಿದೆ. ಪಶ್ಚಿಮ ಬಂಗಾಳ-ಜಾರ್ಖಂಡ್‌ ಗಡಿಯಲ್ಲಿ ಕಲ್ಲಿದ್ದಲು ಅಕ್ರಮ ಸಾಗಣೆ ಮಾಫಿಯಾದ ನಾಯಕ ಈ ಅನೂಪ್‌ ಅಲಿಯಾಸ್‌ ಲಾಲಾ.

ಇಸಿಎಲ್‌ನ ಇಬ್ಬರು ಪ್ರಧಾನ ವ್ಯವಸ್ಥಾಪಕರು, ಭದ್ರತಾ ಸಿಬ್ಬಂದಿ ಮುಖ್ಯಸ್ಥರ ವಿರುದ್ಧ ಅಕ್ರಮ ಗಣಿಗಾರಿಕೆ ಆರೋಪದ ಮೇರೆಗೆ ಸಿಬಿಐ ಈಗಾಗಲೇ ಪ್ರಕರಣ ದಾಖಲಿಸಿದೆ. ಜತೆಗೆ ಹಗರಣದಲ್ಲಿ ಶಾಮೀಲಾಗಿದ್ದಾರೆ ಎನ್ನಲಾದ ಕೆಲವು ರೈಲ್ವೆ ಅಧಿಕಾರಿಗಳು, ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್‌) ಸಿಬ್ಬಂದಿ ವಿರುದ್ಧವೂ ವಿವಿಧ ರಾಜ್ಯಗಳಲ್ಲಿ ಪ್ರಕರಣ ಹೂಡಲಾಗಿದೆ.

ಇಸಿಎಲ್‌ ಕಚೇರಿಗಳ ಮೇಲೆ ಸಿಬಿಐ ದಾಳಿ ನಡೆಯುತ್ತಿದ್ದ ವೇಳೆಯೇ ಕಂಪನಿಯ ಭದ್ರತಾ ವಿಭಾಗದ ಇನ್ಸ್‌ಪೆಕ್ಟರ್‌ ಧನಂಜಯ್‌ ರಾಯ್‌ ಅವರು ಅಸ್ವಸ್ಥರಾಗಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅವರು ಬದುಕುಳಿಯಲಿಲ್ಲ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ