ಆ್ಯಪ್ನಗರ

ಪ್ರೊ.ನಿರ್ಮಲಾಗೆ ಜಾಮೀನು ಸಿಕ್ಕಿಲ್ಲ

ಲೈಂಗಿಕ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ಅರುಪ್ಪುಕೊಟ್ಟೈನ ದೇವಾಂಗ ಕಲಾ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ನಿರ್ಮಲಾ ದೇವಿ ಅವರ ಜಾಮೀನು ಅರ್ಜಿಯಲ್ಲಿ ಇಲ್ಲಿನ ಸೆಷನ್ಸ್‌ ಕೋರ್ಟ್‌ ತಿರಸ್ಕರಿಸಿದೆ.

Vijaya Karnataka 12 May 2018, 8:29 am
ಚೆನ್ನೈ: ಲೈಂಗಿಕ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ಅರುಪ್ಪುಕೊಟ್ಟೈನ ದೇವಾಂಗ ಕಲಾ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ನಿರ್ಮಲಾ ದೇವಿ ಅವರ ಜಾಮೀನು ಅರ್ಜಿಯಲ್ಲಿ ಇಲ್ಲಿನ ಸೆಷನ್ಸ್‌ ಕೋರ್ಟ್‌ ತಿರಸ್ಕರಿಸಿದೆ.
Vijaya Karnataka Web P Nirmala


''ಹೆಚ್ಚಿನ ಅಂಕ ಹಾಗೂ ಹಣ ಪಡೆಯಲು ಕಾಲೇಜಿನ ವಿವಿಧ ಇಲಾಖೆಯ ಮುಖ್ಯಸ್ಥರ ಜತೆಗೆ ಅಡ್ಜೆಸ್ಟ್‌ ಮಾಡ್ಕೊಳ್ಳಿ, ಪ್ರಾಧ್ಯಾಪಕರ ಜೊತೆಗೆ ಲೈಂಗಿಕ ಅವಕಾಶಗಳನ್ನು ಬಳಸಿಕೊಳ್ಳಿ,'' ಎಂಬ ಹೀನಾತಿಹೀನ ಸಲಹೆಕೊಟ್ಟು ವಿದ್ಯಾರ್ಥಿನಿಯರ ತಲೆಕೆಡಿಸಿದ ಆರೋಪ ನಿರ್ಮಲಾ ದೇವಿ ಅವರ ಮೇಲಿದೆ.
ವಿದ್ಯಾರ್ಥಿನಿಯರಿಗೆ ಇಂತಹ ಕೆಟ್ಟ ಸಲಹೆ ನೀಡಿದ ಅವರ ಭಾಷಣದ ತುಣುಕುಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆದ ಬೆನ್ನಲ್ಲೇ ಏಪ್ರಿಲ್‌ 16ರಂದು ನಿರ್ಮಲಾ ಅವರನ್ನು ಬಂಧಿಸಲಾಗಿತ್ತು. ಇವರ ಜಾಮೀನು ಅರ್ಜಿ ವಜಾಗೊಳಿಸಿದ ಸೆಷನ್ಸ್‌ ಕೋರ್ಟ್‌, ಇದೇ ಪ್ರಕರಣದಲ್ಲಿ ಬಂಧಿತರಾಗಿರುವ ವಿ.ಮುರುಗನ್‌ ಮತ್ತು ಕುರುಪ್ಪುಸ್ವಾಮಿಯವರ ಜಾಮೀನು ಅರ್ಜಿಯನ್ನು ಮೇ 18ಕ್ಕೆ ಮುಂದೂಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ