ಆ್ಯಪ್ನಗರ

ಸುಪ್ರೀಂ ಕೋರ್ಟ್‌ಗೆ ನ್ಯಾ.ಜೋಸೆಫ್‌; ಮರುಶಿಫಾರಸಿಗೆ ಒಮ್ಮತದ ತೀರ್ಮಾನ

ಉತ್ತರಾಖಂಡ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಕೆ.ಎಂ. ಜೋಸೆಫ್‌ ಅವರನ್ನು ಸುಪ್ರಿಂ ಕೋರ್ಟ್‌ ನ್ಯಾಯಮೂರ್ತಿಯಾಗಿ ಪದೋನ್ನತಿ ಮಾಡುವ ಸಂಬಂಧ ಕೇಂದ್ರ ಸರಕಾರಕ್ಕೆ ಮರುಶಿಫಾರಸು ಮಾಡಲು ಕೊಲಿಜಿಯಂ ಒಕ್ಕೊರಲಿನ ನಿರ್ಧಾರ ತೆಗೆದುಕೊಂಡಿದೆ.

Vijaya Karnataka Web 11 May 2018, 9:28 pm
ಹೊಸದಿಲ್ಲಿ: ಉತ್ತರಾಖಂಡ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಕೆ.ಎಂ. ಜೋಸೆಫ್‌ ಅವರನ್ನು ಸುಪ್ರಿಂ ಕೋರ್ಟ್‌ ನ್ಯಾಯಮೂರ್ತಿಯಾಗಿ ಪದೋನ್ನತಿ ಮಾಡುವ ಸಂಬಂಧ ಕೇಂದ್ರ ಸರಕಾರಕ್ಕೆ ಮರುಶಿಫಾರಸು ಮಾಡಲು ಕೊಲಿಜಿಯಂ ಒಕ್ಕೊರಲಿನ ನಿರ್ಧಾರ ತೆಗೆದುಕೊಂಡಿದೆ. ಸಿಜೆಐ ದೀಪಕ್‌ ಮಿಶ್ರಾ ಮತ್ತು ನ್ಯಾಯಮೂರ್ತಿಗಳಾದ ಜೆ. ಚೆಲಮೇಶ್ವರ್‌, ರಂಜನ್‌ ಗೊಗೋಯ್‌, ಎಂ.ಬಿ. ಲೋಕುರ್‌ ಮತ್ತು ಕುರಿಯನ್‌ ಜೋಸೆಫ್‌ ಅವರನ್ನೊಳಗೊಂಡ ಪಂಚ ಸದಸ್ಯರ ಕೊಲಿಜಿಯಂ ಶುಕ್ರವಾರ ಸುಮಾರು 1 ಗಂಟೆ ಕಾಲ ಸಭೆ ನಡೆಸಿ ಈ ಕುರಿತು ಚರ್ಚಿಸಿತು.
Vijaya Karnataka Web k m joseph


ಸಭೆಯಲ್ಲಿ ಎಲ್ಲ ಸದಸ್ಯರೂ ಜೋಸೆಫ್‌ ಅವರ ಹೆಸರನ್ನು ಮರುಶಿಫಾರಸು ಮಾಡುವುದಾಗಿ ಪುನರುಚ್ಛರಿಸಿದರು. ಇದೇ ವೇಳೆ, ಕೇಂದ್ರಕ್ಕೆ ಇತರರ ಹೆಸರುಗಳನ್ನು ಶಿಫಾರಸು ಮಾಡುವ ವಿಚಾರದಲ್ಲೂ ಚರ್ಚೆ ಅಗತ್ಯವಿದ್ದು, ಮೇ 16ರಂದು ಸಭೆ ಸೇರಿ ಈ ಬಗ್ಗೆ ಸಮಾಲೋಚನೆ ನಡೆಸಬೇಕೆಂದು ಕೊಲಿಜಿಯಂ ನಿರ್ಣಯ ಕೈಗೊಂಡಿದೆ. ನ್ಯಾ. ಜೋಸೆಫ್‌ ಹೆಸರನ್ನು ಸೂಚಿಸಿ ಕೊಲಿಜಿಯಂ ಮಾಡಿರುವ ಶಿಫಾರಸನ್ನು ಕೇಂದ್ರ ಸರಕಾರ ತಿರಸ್ಕರಿಸಿದ್ದು, ನ್ಯಾಯಾಂಗ ಮತ್ತು ಕಾರ್ಯಾಂಗದ ನಡುವೆ ಜಟಾಪಟಿ ನಡೆಯುತ್ತಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ