ಆ್ಯಪ್ನಗರ

ಜನವರಿ ವೇಳೆಗೆ ಸಂಪೂರ್ಣ ವಿದ್ಯುದೀಕರಣ

ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ 'ಪ್ರಧಾನ ಮಂತ್ರಿ ಸಹಜ್‌ ಬಿಜ್ಲಿ ಹರ್‌ ಘರ್‌ ಯೋಜನೆ' ಬಹುತೇಕ ಅಂತಿಮ ಹಂತದಲ್ಲಿದ್ದು, ಜನವರಿ 25ರ ವೇಳೆಗೆ ಗುರಿ ಸಾಧನೆ ಸಾಧ್ಯವಾಗಲಿದೆ ಎಂದು ಕೇಂದ್ರ ವಿದ್ಯುತ್‌ ಸಚಿವ ಆರ್‌.ಕೆ.ಸಿಂಗ್‌ ತಿಳಿಸಿದ್ದಾರೆ.

Vijaya Karnataka Web 25 Dec 2018, 5:00 am
ಹೊಸದಿಲ್ಲಿ: ಜನವರಿ ಅಂತ್ಯದೊಳಗಾಗಿ ದೇಶದ ಪ್ರತಿ ಮನೆಗೂ ವಿದ್ಯುತ್‌ ಸಂಪರ್ಕ ದೊರೆಯಲಿದೆ.
Vijaya Karnataka Web complete electrifying within january
ಜನವರಿ ವೇಳೆಗೆ ಸಂಪೂರ್ಣ ವಿದ್ಯುದೀಕರಣ


ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ 'ಪ್ರಧಾನ ಮಂತ್ರಿ ಸಹಜ್‌ ಬಿಜ್ಲಿ ಹರ್‌ ಘರ್‌ ಯೋಜನೆ' ಬಹುತೇಕ ಅಂತಿಮ ಹಂತದಲ್ಲಿದ್ದು, ಜನವರಿ 25ರ ವೇಳೆಗೆ ಗುರಿ ಸಾಧನೆ ಸಾಧ್ಯವಾಗಲಿದೆ ಎಂದು ಕೇಂದ್ರ ವಿದ್ಯುತ್‌ ಸಚಿವ ಆರ್‌.ಕೆ.ಸಿಂಗ್‌ ತಿಳಿಸಿದ್ದಾರೆ.

ಸಂಪೂರ್ಣ ವಿದ್ಯುದೀಕರಣಕ್ಕಾಗಿ 2019ರ ಮಾರ್ಚ್‌ 31ರ ಗಡುವು ನಿಗದಿ ಪಡಿಸಲಾಗಿತ್ತು. ಆದರೆ ಈ ಗಡುವನ್ನು ನಾವು ಡಿಸೆಂಬರ್‌ 31ರ ಒಳಗೆ ತಲುಪಲು ನಿರ್ಧರಿಸಿದ್ದೇವೆ. ದಿನಕ್ಕೆ ಸರಾಸರಿ 1 ಲಕ್ಷ ಮನೆಗಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸಲಾಗುತ್ತಿದೆ. ಡಿಸೆಂಬರ್‌ ಅಂತ್ಯದೊಳಗೆ ರಾಜಸ್ಥಾನ, ಮೇಘಾಲಯ, ಅಸ್ಸಾಂ ಮತ್ತು ಅರುಣಾಚಲ ಪ್ರದೇಶ ಹೊರತು ಪಡಿಸಿ ಉಳಿದೆಲ್ಲ ರಾಜ್ಯಗಳಲ್ಲಿ ಗುರಿ ಸಾಧನೆಯಾಗಲಿದೆ. ಈ ನಾಲ್ಕು ರಾಜ್ಯಗಳಲ್ಲಿ ಜ.25ರ ವೇಳೆಗೆ ಗುರಿ ತಲುಪಲಾಗುವುದು ಎಂದು ಅವರು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ