ಆ್ಯಪ್ನಗರ

ಬಿಜೆಪಿಯ ಶಾಸಕರನ್ನು ಸೆಳೆಯಲು ಆಮಿಷ, ಸಿಎಂ ಎಚ್‌ಡಿಕೆಯಿಂದ ಕುದುರೆ ವ್ಯಾಪಾರ: ಯಡಿಯೂರಪ್ಪ

ಬಿಜೆಪಿ ಶಾಸಕರು ನಮ್ಮ ಟಚ್‌ನಲ್ಲಿದ್ದಾರೆ ಎಂದು ಖುದ್ದು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರೇ ಹೇಳಿಕೊಂಡಿದ್ದಾರೆ. ಕುದುರೆ ವ್ಯಾಪಾರದಲ್ಲಿ ಇಡೀ ಸರಕಾರವೇ ಮುಂದಾಗಿದೆ ಎಂದು ಯಡಿಯೂರಪ್ಪ ಆರೋಪಿಸಿದ್ದಾರೆ.

Vijaya Karnataka Web 14 Jan 2019, 5:20 pm
ಹೊಸದಿಲ್ಲಿ: ರಾಜ್ಯದಲ್ಲಿ ಆಪರೇಷನ್‌ ಕಮಲ ನಡೆಯುತ್ತಿದೆ ಎಂಬ ವದಂತಿಗಳ ಬಗ್ಗೆ ಮಾಧ್ಯಮಗಳಲ್ಲಿ ಕೇಳಿದ್ದೇನೆ. ಆದರೆ ಕಾಂಗ್ರೆಸ್‌, ಜೆಡಿಎಸ್‌ ನವರೇ ನಮ್ಮ ಶಾಸಕರನ್ನು ಸೆಳೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
Vijaya Karnataka Web ಯಡಿಯೂರಪ್ಪ
ಯಡಿಯೂರಪ್ಪ


ಈ ಕುರಿತು ಹೊಸದಿಲ್ಲಿಯಲ್ಲಿ ಸುದ್ದಿಗಾರರೊಂದಿಗೆ ಯಡಿಯೂರಪ್ಪ ಮಾತನಾಡಿದರು.

ಬಿಜೆಪಿ ಶಾಸಕರು ನಮ್ಮ ಟಚ್‌ನಲ್ಲಿದ್ದಾರೆ ಎಂದು ಖುದ್ದು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರೇ ಹೇಳಿಕೊಂಡಿದ್ದಾರೆ. ಕುದುರೆ ವ್ಯಾಪಾರದಲ್ಲಿ ಇಡೀ ಸರಕಾರವೇ ಮುಂದಾಗಿದೆ ಎಂದರು.

ಗುಲ್ಬರ್ಗದ ನಮ್ಮ ಶಾಸಕರೊಬ್ಬರನ್ನು ಸೆಳೆಯಲು ಆಮಿಷ ಒಡ್ಡಲಾಗಿದೆ. ಸಚಿವರನ್ನು ಮಾಡುತ್ತೇವೆ. ಕಾಣಿಕೆಗಳನ್ನು ನೀಡುತ್ತೇವೆ ಎಂಬ ಆಮಿಷಗಳನ್ನು ಒಡ್ಡಲಾಗುತ್ತಿದೆ ಎಂಬುದು ನಮಗೂ ಗೊತ್ತಾಗಿದೆ ಎಂದು ಯಡಿಯೂರಪ್ಪ ಹೇಳಿದರು.

ನಾವು ಪ್ರಬಲ ಪ್ರತಿಪಕ್ಷವಾಗಿ ಕಾರ್ಯ ನಿರ್ವಹಿಸುತ್ತೇವೆ. ಮುಂಬರುವ ಲೋಕಸಭಾ ಚುನಾವಣೆಗಾಗಿ ಯಾವ ರೀತಿ ಕಾರ್ಯಾಚರಣೆನಡೆಸಬೇಕು ಎಂಬ ಬಗ್ಗೆ ಬಿಜೆಪಿ ರಾಷ್ಟ್ರಾಧ್ಯಕ್ಷರಾದ ಅಮಿತ್‌ ಶಾ ಸಲಹೆ-ಸೂಚನೆಗಳನ್ನು ನೀಡಿದ್ದಾರೆ ಎಂದರು.

ಬೆಂಗಳೂರಿನಲ್ಲಿರುವ ಕೆಲವು ಶಾಸಕರು ದಿಲ್ಲಿಗೆ ಬರಲಿದ್ದಾರೆ. ಸೋಮವಾರ, ಮಂಗಳವಾರ ದಿಲ್ಲಿಯಲ್ಲೇ ಇದ್ದು ಇಲ್ಲಿನ ಕೆಲಸ ಕಾರ್ಯ ಮುಗಿಸಿಕೊಂಡು ನಂತರ ಬೆಂಗಳೂರಿಗೆ ವಾಪಸಾಗುತ್ತೇವೆ ಎಂದು ಬಿಎಸ್‌ವೈ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ