ಆ್ಯಪ್ನಗರ

ಸಿಎಂ ಪರಿಕ್ಕರ್ ಆಸ್ಪತ್ರೆಯಲ್ಲಿ: ಗೋವಾದಲ್ಲಿ ಸರಕಾರ ರಚನೆಗೆ ಹಕ್ಕು ಮಂಡಿಸಿದ ಕಾಂಗ್ರೆಸ್

ಕರ್ನಾಟಕದಲ್ಲಿ ಸರಕಾರ ರಚನೆಗೆ ಬಿಜೆಪಿ ಯತ್ನಿಸುತ್ತಿದ್ದರೆ ಅತ್ತ ನೆರೆರಾಜ್ಯ ಗೋವಾದಲ್ಲಿ ಬಿಜೆಪಿ ಸರಕಾರದ ವಿರುದ್ಧ ಸಮರ ಸಾರಿರುವ ಕಾಂಗ್ರೆಸ್, ಸರಕಾರ ರಚನೆಗೆ ರಾಜ್ಯಪಾಲರ ಮೊರೆ ಹೋಗಿದೆ.

Vijaya Karnataka Web 17 Sep 2018, 4:57 pm
ಪಣಜಿ: ಕರ್ನಾಟಕದಲ್ಲಿ ಸರಕಾರ ರಚನೆಗೆ ಬಿಜೆಪಿ ಯತ್ನಿಸುತ್ತಿದ್ದರೆ ಅತ್ತ ನೆರೆರಾಜ್ಯ ಗೋವಾದಲ್ಲಿ ಬಿಜೆಪಿ ಸರಕಾರದ ವಿರುದ್ಧ ಸಮರ ಸಾರಿರುವ ಕಾಂಗ್ರೆಸ್, ಸರಕಾರ ರಚನೆಗೆ ರಾಜ್ಯಪಾಲರ ಮೊರೆ ಹೋಗಿದೆ.
Vijaya Karnataka Web Goa Congress


ಬಿಜೆಪಿ ನೇತೃತ್ವದ ಸರಕಾರ ಯಾವುದೇ ಕೆಲಸ ಮಾಡುತ್ತಿಲ್ಲ. ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ದೆಹಲಿ ಏಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗಾಗಿ ಬಿಜೆಪಿ ಸರಕಾರವನ್ನು ವಿಸರ್ಜಿಸಿ, ನೂತನ ಸರಕಾರ ರಚಿಸಲು ನಮಗೆ ಅವಕಾಶ ನೀಡಬೇಕು ಎಂದು 16 ಶಾಸಕರ ಕಾಂಗ್ರೆಸ್‌ ನಿಯೋಗ ರಾಜಭವನಕ್ಕೆ ಮನವಿ ಸಲ್ಲಿಸಿದೆ.

ವಿಪಕ್ಷ ನಾಯಕ ಕಾಂಗ್ರೆಸ್‌ನ ಬಾಬು ಕವಳೇಕರ್ ನೇತೃತ್ವದಲ್ಲಿ ರಾಜ್ಯಪಾಲರ ಕಾರ್ಯದರ್ಶಿಗೆ ಮನವಿ ಸಲ್ಲಿಸಿ, ಅತಿದೊಡ್ಡ ಪಕ್ಷ ಕಾಂಗ್ರೆಸ್ ಸರಕಾರ ರಚಿಸಲು ಶಕ್ತವಾಗಿದೆ ಎಂದಿದ್ದಾರೆ.

ಗೋವಾ ವಿಧಾನಸಭೆಯಲ್ಲಿ 40 ಸ್ಥಾನವಿದ್ದು, ಕಾಂಗ್ರೆಸ್ 16 ಸದಸ್ಯ ಬಲ ಹೊಂದಿದೆ. ಬಿಜೆಪಿ 14 ಸ್ಥಾನ ಮತ್ತು ಅದರ ಮಿತ್ರಪಕ್ಷಗಳಾದ ಗೋವಾ ಫಾರ್ವರ್ಡ್ ಪಾರ್ಟಿ ಮತ್ತು ಎಂಜಿಪಿ ತಲಾ 3 ಸ್ಥಾನ ಹೊಂದಿವೆ. ನ್ಯಾಷನಲಿಸ್ಟ್‌ ಕಾಂಗ್ರೆಸ್‌ ಪಾರ್ಟಿಯ ಓರ್ವ ಶಾಸಕ ಕೂಡ ಬಿಜೆಪಿ ಬೆಂಬಲಿಸಿದ್ದಾರೆ.

ಗೋವಾದಲ್ಲಿ ಕಾಂಗ್ರೆಸ್‌ಗೆ ಜನರು ಬೆಂಬಲ ನೀಡಿದ್ದಾರೆ. ಆದರೆ ಬಿಜೆಪಿ ಅಲ್ಲಿ ಅಧಿಕಾರ ಹಿಡಿದಿದೆ. ಗೋವಾದಲ್ಲಿ ಸಿಎಂ ಇಲ್ಲ, ಸಚಿವರು ಕೂಡ ಕಾಣಿಸುತ್ತಿಲ್ಲ. ಗವರ್ನರ್‌ ರಜೆಯಲ್ಲಿದ್ದಾರೆ. ಹೀಗಾಗಿ ಸರಕಾರ ಕಾರ್ಯನಿರ್ವಹಿಸುತ್ತಿಲ್ಲ, ಆದ್ದರಿಂದ ಗೋವಾಕ್ಕೆ ಪೂರ್ಣ ಪ್ರಮಾಣದ ಸಮರ್ಥ ಸರಕಾರ ಬೇಕಿದೆ. ಕಾಂಗ್ರೆಸ್ ಸರಕಾರ ರಚಿಸಲು ಸಿದ್ಧವಾಗಿದ್ದು, ರಾಜ್ಯಪಾಲರು ಸೂಕ್ತ ಅವಕಾಶ ಕಲ್ಪಿಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.

ಕ್ಯಾನ್ಸರ್‌ಗೆ ತುತ್ತಾಗಿರುವ ಸಿಎಂ ಮನೋಹರ್ ಪರಿಕ್ಕರ್ ದೆಹಲಿ ಆಸ್ಪತ್ರೆಗೆ ದಾಖಲಾದ ಬೆನ್ನಲ್ಲೇ ಕಾಂಗ್ರೆಸ್ ಸರಕಾರ ರಚನೆಗೆ ಶ್ರಮಿಸುತ್ತಿದ್ದು, ಬಿಜೆಪಿ ಸಿಎಂ ಹುದ್ದೆಗೆ ಸೂಕ್ತ ಅಭ್ಯರ್ಥಿಯ ಹುಡುಕಾಟದಲ್ಲಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ