ಆ್ಯಪ್ನಗರ

ಕಾಂಗ್ರೆಸ್‌ಗೆ ತುರ್ತು ಆತ್ಮಾವಲೋಕನದ ಅಗತ್ಯವಿದೆ: ಜ್ಯೋತಿರಾದಿತ್ಯ ಸಿಂಧಿಯಾ

ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಹೀನಾಯ ಸೋಲಿನ ಬಳಿಕ ರಾಹುಲ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು. ಪಕ್ಷದ ವರಿಷ್ಠ ನೇತಾರರು ಎಷ್ಟೇ ಪ್ರಯತ್ನ ಪಟ್ಟರು ರಾಹುಲ್ ಮನವೊಲಿಸಲು ಸಾಧ್ಯವಾಗಲಿಲ್ಲ. ಜೂನ್ ಕೊನೆಯ ವಾರದಲ್ಲಿ ಅವರು ಅಧಿಕೃತವಾಗಿ ಅಧ್ಯಕ್ಷ ಸ್ಥಾನವನ್ನು ತ್ಯಜಿಸಿದ್ದರು.

TIMESOFINDIA.COM 10 Oct 2019, 2:30 pm
ಹೊಸದಿಲ್ಲಿ: ರಾಹುಲ್ ಪಲಾಯನವಾದಿ ಎಂದು ಕೈ ಹಿರಿಯ ನಾಯಕ ಸಲ್ಮಾನ್ ಖುರ್ಶಿದ್ ಹೇಳಿಕೆ ನೀಡಿದ ಬೆನ್ನಲ್ಲೇ ಯುವ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ, ಪಕ್ಷಕ್ಕೆ ತುರ್ತು ಆತ್ಮಾವಲೋಕನದ ಅಗತ್ಯವಿದೆ ಎಂದು ಹೇಳಿದ್ದಾರೆ.
Vijaya Karnataka Web ಜ್ಯೋತಿರಾದಿತ್ಯ ಸಿಂಧಿಯಾ


ಪಕ್ಷದಲ್ಲಿ ''ನೇತೃತ್ವ ಶೂನ್ಯ'' ಸ್ಥಿತಿ ಇದೆ ಎಂದು ಖುರ್ಶಿದ್ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಅವರು, ಬೇರೆಯವರ ಹೇಳಿಕೆಗೆ ನಾನು ಪ್ರತಿಕ್ರಿಯಿಸಲಾರೆ. ಆದರೆ ಕಾಂಗ್ರೆಸ್‌ನಲ್ಲಿ ತುರ್ತು ಆತ್ಮಾವಲೋಕನದ ಅಗತ್ಯವಿದೆ. ಪಕ್ಷದ ಸ್ಥಿತಿಗತಿಯನ್ನು ಮೌಲ್ಯಮಾಪನ ಮಾಡಿ ಸುಧಾರಿಸಿಕೊಳ್ಳಬೇಕಾಗಿದ್ದು ಇಂದಿನ ಅಗತ್ಯತೆ ಎಂದು ಅವರು ಹೇಳಿದರು.

ಅಧ್ಯಕ್ಷಗಿರಿಗೆ ರಾಹುಲ್ ವಿದಾಯ: ಪಲಾಯನ ಮಾಡಿದ್ದು ದೊಡ್ಡ ತಪ್ಪೆಂದ ಸಲ್ಮಾನ್ ಖುರ್ಶಿದ್

ರಾಹುಲ್ ಆಪ್ತ ಎಂದು ಗುರುತಿಸಿಕೊಂಡಿರುವ ಸಿಂಧಿಯಾ, ಮಧ್ಯಪ್ರದೇಶ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದರು. ಆದರೆ ಪಕ್ಷದ ಹಿರಿಯ ನಾಯಕರು ಅದಕ್ಕೆ ತಡೆ ಒಡ್ಡುತ್ತಲೇ ಬಂದಿದ್ದಾರೆ.

ಅಧ್ಯಕ್ಷ ಸ್ಥಾನ ಸಿಗದಿದ್ದರೆ ಸಿಂಧಿಯಾ ಬಿಜೆಪಿ ತೆಕ್ಕೆಗೆ ಜಾರುತ್ತಾರೆ ಎಂಬ ವದಂತಿಗಳು ಕಳೆದ ಎರಡು ತಿಂಗಳಿಂದ ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ. ಜಮ್ಮು ಮತ್ತು ಕಾಶ್ಮೀರ ವಿಷಯದಲ್ಲಿ ಕೇಂದ್ರದ ನಡೆಯನ್ನು ಅವರು ಸಮರ್ಥಿಸಿಕೊಂಡಿದ್ದು ಈ ವದಂತಿಗಳಿಗೆ ಪುಷ್ಟಿ ನೀಡಿತ್ತು. ಆದರೆ ಕಾಂಗ್ರೆಸ್ ಅವರ ಪಕ್ಷಾಂತರದಲ್ಲಿ ಹುರುಳಿಲ್ಲ, ಎಂದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ