ಆ್ಯಪ್ನಗರ

ವಿಶ್ವಸಂಸ್ಥೆಯಲ್ಲಿ ನಾವು ನಿಮ್ಮ ಜೊತೆಗಿರ್ತೇವೆ: ಪ್ರಧಾನಿಗೆ ಕಾಂಗ್ರೆಸ್ ನಾಯಕ ಶಶಿ ತರೂರ್ ಭರವಸೆ

ಪ್ರಧಾನಿ ಮೋದಿ ಪರ ಹೇಳಿಕೆಗಳನ್ನು ನೀಡಿ ಗಮನ ಸೆಳೆಯುತ್ತಿರುವ ಕಾಂಗ್ರೆಸ್ ನಾಯಕ ಶಶಿ ತರೂರ್ ಇದೀಗ ವಿಶ್ವಸಂಸ್ಥೆಯಲ್ಲೂ ನಾವು ಪ್ರಧಾನಿ ಜೊತೆಗಿರ್ತೇವೆ ಎಂದಿದ್ದಾರೆ. ಅಷ್ಟೇ ಅಲ್ಲ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾಷಣ ಮಾಡಲು ಆಹ್ವಾನಿಸುವ ಮೂಲಕ ಮೋದಿ ಅವರಿಗೆ ಗೌರವ ನೀಡಲಾಗಿದೆ ಎಂದಿದ್ದಾರೆ.

TIMESOFINDIA.COM 9 Sep 2019, 6:46 pm
ಹೊಸ ದಿಲ್ಲಿ: ಜಮ್ಮು-ಕಾಶ್ಮೀರ ವಿಚಾರದಲ್ಲಿ ಪಾಕಿಸ್ತಾನದ ನೀತಿಯನ್ನು ಖಂಡಿಸಿರುವ ಕಾಂಗ್ರೆಸ್ ನಾಯಕ ಶಶಿ ತರೂರ್, ಇದೇ ವಿಚಾರಕ್ಕೆ ಸಂಬಂಧಿಸಿದಂತೆ ವಿಶ್ವಸಂಸ್ಥೆಯಲ್ಲಿ ನಡೆಯುವ ಚರ್ಚೆ ವೇಳೆಯಲ್ಲೂ ಭಾರತದ ವಿರೋಧ ಪಕ್ಷಗಳೆಲ್ಲಾ ಪ್ರಧಾನಿ ಜೊತೆಗೆ ನಿಲ್ಲುತ್ತವೆ ಎಂದು ಘೋಷಿಸಿದ್ದಾರೆ.
Vijaya Karnataka Web shashi taroor modi


ಕಾಶ್ಮೀರ ಭಾರತದ ಆಂತರಿಕ ವಿಚಾರವಾಗಿದ್ದು, ಈ ಬಗ್ಗೆ ಮಾತನಾಡಲು ಪಾಕಿಸ್ತಾನಕ್ಕೆ ಅಧಿಕಾರವಿಲ್ಲ ಎಂದಿರುವ ಶಶಿ ತರೂರ್, ನಾವು ಕೇಂದ್ರದಲ್ಲಿ ವಿರೋಧ ಪಕ್ಷದ ಸ್ಥಾನದಲ್ಲಿದ್ದು ಮೋದಿಯವರ ಹಲವು ನೀತಿಗಳನ್ನು ಖಂಡಿಸುತ್ತೇವೆ, ಆದರೆ ಕಾಶ್ಮೀರ ವಿಚಾರ ಬಂದಾಗ, ಭಾರತದ ಹೊರಗಿನ ಶಕ್ತಿಗಳನ್ನು ಎದುರಿಸುವಾಗ ಒಗ್ಗಟ್ಟಾಗಿರುತ್ತೇವೆ ಎಂದಿದ್ದಾರೆ. ಅಷ್ಟೇ ಅಲ್ಲ, ಪಾಕಿಸ್ತಾನಕ್ಕೆ ನಮ್ಮ ನೆಲದ ಒಂದು ಇಂಚು ಜಾಗವನ್ನೂ ಬಿಟ್ಟುಕೊಡೋದಿಲ್ಲ ಎಂದು ಆವೇಶದ ಮಾತುಗಳನ್ನಾಡಿದ್ದಾರೆ.

ಜಿನೆವಾದಲ್ಲಿ ನಡೆಯುತ್ತಿರುವ ವಿಶ್ವಸಂಸ್ಥೆ ಮಾನವಹಕ್ಕು ಮಂಡಳಿಯ 42ನೇ ಅಧಿವೇಶನದಲ್ಲಿ ಭಾಗವಹಿಸಿರುವ ಪಾಕಿಸ್ತಾನದ ವಿದೇಶಾಂಗ ಸಚಿವ ಶಾ ಮೊಹಮ್ಮದ್ ಖುರೇಷಿ ಕಾಶ್ಮೀರ ವಿಚಾರವನ್ನು ಪ್ರಸ್ತಾಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ಶಶಿ ತರೂರ್ ತಮ್ಮ ಹೇಳಿಕೆ ನೀಡಿದ್ಧಾರೆ. ಪಾಕಿಸ್ತಾನ ತಾನು ಆಕ್ರಮಿಸಿಕೊಂಡಿರುವ ಕಾಶ್ಮೀರದ ಭಾಗದಲ್ಲಿ ಭಾರೀ ಬದಲಾವಣೆಗಳನ್ನು ಮಾಡಿದೆ ಎಂದೂ ಶಶಿ ತರೂರ್ ಆರೋಪಿಸಿದ್ಧಾರೆ.

ಪ್ರಧಾನಿ ಮೋದಿಯನ್ನು ಹೊಗಳಿದ್ದೇಕೆ? : ದಿಟ್ಟ ಉತ್ತರ ಕೊಟ್ಟ ಶಶಿ ತರೂರ್!

ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದುಗೊಳಿಸಿರುವುದನ್ನು ಈಗ ಪ್ರಸ್ತಾಪಿಸುತ್ತಿರುವ ಪಾಕಿಸ್ತಾನ, ತಾನು ಆಕ್ರಮಿಸಿಕೊಂಡಿರುವ ಕಾಶ್ಮೀರದಲ್ಲಿ ಏನೆಲ್ಲಾ ಬದಲಾವಣೆ ಮಾಡಿದೆ ಎಂದು ಪ್ರಶ್ನಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ವಿಶ್ವಸಂಸ್ಥೆಯ ಸಾಮಾನ್ಯ ಅಧಿವೇಶನದಲ್ಲಿ ಭಾಷಣ ಮಾಡಲಿರುವ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಶಶಿ ತರೂರ್, ನಾವು ಮೋದಿ ಜೊತೆಗಿದ್ದೇವೆ, ಅವರಿಗೆ ವಿಶ್ವಸಂಸ್ಥೆಯಲ್ಲಿ ಗೌರವ ಸಿಕ್ಕಿದೆ, ಅವರು ಮಾತನಾಡಲೇ ಬೇಕು ಎಂದಿದ್ದಾರೆ.

'ಮೈ ಎಚ್' ಎಂದು ಬರೆದು ಟ್ವಿಟ್ಟಿಗರ ತಲೆಯಲ್ಲಿ ಹುಳಬಿಟ್ಟ ಶಶಿ ತರೂರ್!

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ