ಆ್ಯಪ್ನಗರ

ಐಎನ್‌ಎಕ್ಸ್‌ ಮೀಡಿಯಾ ಹಗರಣ: ಚಿದಂಬರಂ ನ್ಯಾಯಾಂಗ ಬಂಧನ ಅವಧಿ ಅ.17ರವರೆಗೆ ವಿಸ್ತರಣೆ

ಐಎನ್‌ ಎಕ್ಸ್‌ ಮೀಡಿಯಾ ಹೌಸ್‌ ಪ್ರಕರಣದಲ್ಲಿ ಕಾನೂನು ಕಟಕಟೆಯೊಳಗೆ ಸಿಲುಕಿರುವ ಕಾಂಗ್ರೆಸ್‌ ಹಿರಿಯ ನಾಯಕ ಪಿ. ಚಿದಂಬರಂಗೆ ಮತ್ತೆ ಸಂಕಷ್ಟ ಎದುರಾಗಿದೆ. ಚಿದಂಬರಂ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ ವಿಸ್ತರಿಸಲಾಗಿದೆ.

Vijaya Karnataka Web 3 Oct 2019, 3:42 pm
ಹೊಸದಿಲ್ಲಿ: ಐಎನ್‌ಎಕ್ಸ್‌ ಮೀಡಿಯಾ ಪ್ರಕರಣ ಸಂಬಂಧ ಸಿಬಿಐ ವಶದಲ್ಲಿರುವ ಹಿರಿಯ ಕಾಂಗ್ರೆಸ್‌ ನಾಯಕ ಪಿ. ಚಿದಂಬರಂ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 17ರವರೆಗೆ ವಿಸ್ತರಿಸಲಾಗಿದೆ.
Vijaya Karnataka Web ಚಿದಂಬರಂ
ಚಿದಂಬರಂ


ಅರ್ಜಿ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯ ಚಿದಂಬರಂ ಅವರ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಣೆ ಮಾಡಿ ಆದೇಶ ಹೊರಡಿಸಿತು.

ಇದರೊಂದಿಗೆ ಚಿದಂಬರಂ ಇನ್ನಷ್ಟು ದಿನಗಳ ಕಾಲ ತಿಹಾರ್‌ ಜೈಲಿನಲ್ಲಿಯೇ ಕಾಲ ಕಳೆಯಬೇಕಾಗಿದೆ.

ಐಎನ್‌ಎಕ್ಸ್‌ ಮೀಡಿಯಾ ಹಗರಣಕ್ಕೆ ಸಂಬಂಧಿಸಿದಂತೆ ಪಿ. ಚಿದಂಬರಂ ಅವರನ್ನು ಕಳೆದ ಆಗಸ್ಟ್‌ 21ರಂದು ಚಿದಂಬರಂ ಅವರನ್ನು ಬಂಧಿಸಲಾಗಿತ್ತು.

ಚಿದಂಬರಂ ಅವರು ಸೆಪ್ಟಂಬರ್‌ 5ನೇ ತಾರೀಖಿರಿಂದಲೂ ತಿಹಾರ್‌ ಜೈಲಿನಲ್ಲಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ