ಆ್ಯಪ್ನಗರ

ಕಾಂಗ್ರೆಸ್‌ ಮುಖಂಡ ಗುರುದಾಸ್‌ ಕಾಮತ್‌ ನಿಧನ

ಕಾಂಗ್ರೆಸ್‌ನ ಹಿರಿಯ ಮುಖಂಡ ಗುರುದಾಸ್‌ ಕಾಮತ್‌(63) ಚಾಣಕ್ಯಪುರಿಯ ಆಸ್ಪತ್ರೆಯಲ್ಲಿ ನಿಧನರಾದರು.

THE ECONOMIC TIMES 22 Aug 2018, 10:53 am
ಹೊಸದಿಲ್ಲಿ: ಕಾಂಗ್ರೆಸ್‌ನ ಹಿರಿಯ ಮುಖಂಡ ಗುರುದಾಸ್‌ ಕಾಮತ್‌(63) ಚಾಣಕ್ಯಪುರಿಯ ಆಸ್ಪತ್ರೆಯಲ್ಲಿ ನಿಧನರಾದರು.
Vijaya Karnataka Web kamat.


ಈಶಾನ್ಯ ಮುಂಬಯಿ ಲೋಕಸಭೆಯಿಂದ ಕಾಮತ್‌ ಅವರು ಐದು ಬಾರಿ ಕಾಂಗ್ರೆಸ್‌ ಸಂಸದರಾಗಿ ಆಯ್ಕೆಯಾಗಿದ್ದರು.

ಗೃಹ ಸಚಿವಾಲಯ, ಮಾಹಿತಿ ಸಚಿವಾಲಯಗಳಲ್ಲಿ ಸಹಾಯಕ ಸಚಿವರಾಗಿ ಕಾರ್ಯ ನಿರ್ವಹಿಸಿದ್ದ ಅವರು ಮಾಹಿತಿ ತಂತ್ರಜ್ಞಾನ ಸಚಿವರಾಗಿಯೂ ಕೆಲಸ ಮಾಡಿದ್ದರು. ಮುಂಬಯಿ ರೀಜನಲ್‌ ಕಾಂಗ್ರೆಸ್‌ ಕಮಿಟಿಯ ಮಾಜಿ ಅಧ್ಯಕ್ಷರಾಗಿದ್ದರು.

ಮುಂಬಯಿನ ಆರ್‌.ಎ. ಪೊದಾರ್‌ ಕಾಲೇಜಿನಲ್ಲಿ ವಾಣಿಜ್ಯ ಮತ್ತು ಸರಕಾರಿ ಲಾ ಕಾಲೇಜಿನಲ್ಲಿ ಕಾನೂನು ಪದವಿ ಪಡೆದಿದ್ದ ಕಾಮತ್‌ ವಕೀಲರೂ ಆಗಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ