ಅಮೇಠಿ: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಭದ್ರಕೋಟೆ ಅಮೇಠಿಯಲ್ಲಿ ಪರಾಭವ ಅನುಭವಿಸಿದ ಬಳಿಕ ಇದೇ ಮೊದಲ ಬಾರಿಗೆ ರಾಹುಲ್ ಗಾಂಧಿ ಬುಧವಾರ ಕ್ಷೇತ್ರಕ್ಕೆ ಭೇಟಿ ನೀಡಿ, ಪಕ್ಷದ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳ ಜತೆ ಮಾತುಕತೆ ನಡೆಸಿದರು. ಕಳೆದ ಜೂನ್ 25ರಂದು ತಿಲೋಯಿ ವಿಧಾನಸಭಾ ಕ್ಷೇತ್ರದ ಪ್ರಭಾರಿ ಮಾತಾ ಪ್ರಸಾದ್ ವೈಶ್ ಅವರ ನಿಕಟ ಸಂಬಂಧಿಕರೊಬ್ಬರು ನಿಧನ ಹೊಂದಿದ ಹಿನ್ನೆಲೆಯಲ್ಲಿ ರಾಹುಲ್, ವೈಶ್ ಅವರ ಮನೆಗೆ ಭೇಟಿ ನೀಡಿ ದುಃಖತಪ್ತ ಕುಟುಂಬಕ್ಕೆ ಸಾಂತ್ವನ ಹೇಳಿದರು. ಅನಂತರ ಗೌರೀಗಂಜ್ನಲ್ಲಿರುವ ನಿರ್ಮಲಾ ದೇವಿ ಶಿಕ್ಷಣ ಸಂಸ್ಥೆಯಲ್ಲಿ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರನ್ನು ಭೇಟಿ ಮಾಡಿ ಪಕ್ಷ ಬಲವರ್ಧನೆಗೊಳಿಸುವಂತೆ ಕರೆ ನೀಡಿದರು. ರಾಹುಲ್ ಸೋಲಿನ ಬಳಿಕ ಅಮೇಠಿ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಯೋಗೇಂದ್ರ ಮಿಶ್ರಾ ರಾಜೀನಾಮೆ ನೀಡಿದ್ದರು. ಈ ಬಾರಿಯ ಚುನಾವಣೆಯಲ್ಲಿ ರಾಹುಲ್ ಅವರು ಕೇಂದ್ರ ಸಚಿವೆ ಬಿಜೆಪಿಯ ಸ್ಮೃತಿ ಇರಾನಿ ವಿರುದ್ಧ 52,000 ಮತಗಳ ಅಂತರದಲ್ಲಿ ಸೋಲು ಕಂಡಿದ್ದರು. ಆದರೆ ಕೇರಳದ ವಯನಾಡ್ ಕ್ಷೇತ್ರದಲ್ಲಿ ಗೆದ್ದು ಸಂಸದರಾದರು.
ಸೋಲಿನ ಬಳಿಕ ಅಮೇಠಿಗೆ ರಾಹುಲ್ ಭೇಟಿ
ಕಳೆದ ಜೂನ್ 25ರಂದು ತಿಲೋಯಿ ವಿಧಾನಸಭಾ ಕ್ಷೇತ್ರದ ಪ್ರಭಾರಿ ಮಾತಾ ಪ್ರಸಾದ್ ವೈಶ್ ಅವರ ನಿಕಟ ಸಂಬಂಧಿಕರೊಬ್ಬರು ನಿಧನ ಹೊಂದಿದ ಹಿನ್ನೆಲೆಯಲ್ಲಿ ರಾಹುಲ್, ವೈಶ್ ಅವರ ಮನೆಗೆ ಭೇಟಿ ನೀಡಿ ದುಃಖತಪ್ತ ಕುಟುಂಬಕ್ಕೆ ಸಾಂತ್ವನ ಹೇಳಿದರು.
PTI 11 Jul 2019, 5:00 am