ಆ್ಯಪ್ನಗರ

ಬಿಜೆಪಿ ಆಯ್ತು ಈಗ ಕಾಂಗ್ರೆಸ್‌ ಶಾಸಕನಿಂದ ಅಧಿಕಾರಿ ಮೇಲೆ ಹಲ್ಲೆ

ಬಿಜೆಪಿ ಸಂಸದರ ಪುತ್ರನೊಬ್ಬ ಸರಕಾರಿ ಅಧಿಕಾರಿ ಮೇಲೆ ಹಲ್ಲೆ ನಡೆಸಿದ ಘಟನೆ ಇನ್ನೂ ಮಾಸಿಲ್ಲ ಆಗಲೇ ಮತ್ತೊಬ್ಬ ಜನಪ್ರತಿನಿಧಿ ಆರ್ಭಟ ಹೆಚ್ಚಾಗಿದೆ. ಎಂಜಿನಿಯರ್‌ ಮೇಲೆ ಹಲ್ಲೆ ನಡೆಸಿದ್ದಾರೆ.

Vijaya Karnataka Web 4 Jul 2019, 7:01 pm
ಮುಂಬಯಿ: ಸರಕಾರಿ ಅಧಿಕಾರಿ ಮೇಲೆ ಬಿಜೆಪಿ ಸಂಸದ ಪುತ್ರ ಬ್ಯಾಟ್‌ನಿಂದ ಹಲ್ಲೆ ಮಾಡಿದ್ದ ಘಟನೆ ಮಾಸುವ ಮುನ್ನವೇ ಮತ್ತೊಂದು ಪ್ರಕರಣ ವರದಿಯಾಗಿದೆ.
Vijaya Karnataka Web ಎಂಜಿನಿಯರ್ ಮೇಲೆ ಹಲ್ಲೆ
ಎಂಜಿನಿಯರ್ ಮೇಲೆ ಹಲ್ಲೆ


ಈ ಬಾರಿ ಕಾಂಗ್ರೆಸ್‌ ಮಾಜಿ ಮುಖ್ಯಮಂತ್ರಿ ಪುತ್ರ ಸರಕಾರಿ ಎಂಜಿನಿಯರ್ ಮೇಲೆ ಕೆಸರು ಚೆಲ್ಲಿ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಮಹಾರಾಷ್ಟ್ರದಲ್ಲಿ ಈ ಘಟನೆ ನಡೆದಿದೆ.

ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ನಾರಾಯಣ ರಾಣೆ ಪುತ್ರ ಕಾಂಗ್ರೆಸ್‌ ಶಾಸಕ ನಿತೀಶ್‌ ರಾಣೆ ಎಂಜಿನಿಯರ್‌ ಮೇಲೆ ಕೆಸರು ಹಾಕಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ. ಅಲ್ಲದೇ ಬ್ರಿಡ್ಜ್‌ಗೆ ಕಟ್ಟಿ ಹಾಕಿ ಹಲ್ಲೆ ಮಾಡಿದ್ದಾರೆ.



ಎಂಜಿನಿಯರ್‌ ಮೇಲೆ ಹಲ್ಲೆ ನಡೆಸಿದ ನಿತೀಶ್‌ ರಾಣೆ ಪೊಲೀಸರ ಮುಂದೆ ಶರಣಾಗಿದ್ದಾರೆ.



ಮಹಾರಾಷ್ಟ್ರ-ಗೋವಾ ನಡುವಿನ ಹೆದ್ದಾರಿಯ ರಸ್ತೆ ಕಾಮಗಾರಿ ಪರಿಶೀಲಿಸಲು ಶಾಸಕ ನಿತೀಶ್‌ ತೆರಳಿದ್ದರು. ಈ ವೇಳೆ ಕಾಮಗಾರಿ ಪರಿಶೀಲಿಸಿ ಎಂಜಿನಿಯರ್ ಮೇಲೆ ಹಲ್ಲೆ ಮಾಡಿದ್ದರು. ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ