ಆ್ಯಪ್ನಗರ

Amit Shah: ರಾಜ್ಯದ ಜನತೆಯ ಶಾಪದಿಂದಾಗಿ ಅಮಿತ್‌ ಶಾಗೆ ಹಂದಿ ಜ್ವರ - ಕಾಂಗ್ರೆಸ್ ಸಂಸದ ಬಿ.ಕೆ.ಹರಿಪ್ರಸಾದ್ ಟೀಕೆ

ಕಾಂಗ್ರೆಸ್ ನಾಯಕ ಹಾಗೂ ರಾಜ್ಯಸಭೆ ಸಂಸದ ಬಿ.ಕೆ.ಹರಿಪ್ರಸಾದ್ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಧ್ಯಕ್ಷ ಅಮಿತ್‌ ಶಾ ಆರೋಗ್ಯದ ಬಗ್ಗೆ ಮಾತನಾಡಿ ವಿವಾದ ಹುಟ್ಟುಹಾಕಿದ್ದಾರೆ. ಕರ್ನಾಟಕದ ಜನತೆ ಅಮಿತ್‌ ಶಾಗೆ ಶಾಪ ಹಾಕಿದ್ದಾರೆ. ಹೀಗಾಗಿ, ಅವರಿಗೆ ಹಂದಿಯ ಜ್ವರ ಬಂದಿದೆ ಎಂದು ಹೇಳಿದ್ದಾರೆ.

Times Now 17 Jan 2019, 5:43 pm

ಹೈಲೈಟ್ಸ್‌:

  • ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಅನಾರೋಗ್ಯದ ಬಗ್ಗೆ ಟೀಕೆ
  • ಕಾಂಗ್ರೆಸ್ ನಾಯಕ, ರಾಜ್ಯಸಭಾ ಸಂಸದ ಹರಿಪ್ರಸಾದ್ ಟೀಕೆ
  • ಸರಕಾರವನ್ನು ಕೆಡವಲು ಮತ್ತೆ ಯತ್ನಿಸಿದ್ರೆ ಇನ್ನೂ ದೊಡ್ಡ ರೋಗ ಬರಬಹುದು
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
ಹೊಸದಿಲ್ಲಿ: ಇತ್ತೀಚೆಗೆ ರಾಜಕೀಯ ವಿಚಾರಗಳ ಬಗ್ಗೆ ಚರ್ಚೆ ನಡೆಯುವ ವೇಳೆ ಕೆಲವೊಮ್ಮೆ ತೀರಾ ಕೆಳಮಟ್ಟದ ಭಾಷೆ ಹಾಗೂ ವೈಯಕ್ತಿಕ ನಿಂದನೆಗಳು ಹೆಚ್ಚಾಗುತ್ತಿವೆ. ಇದಕ್ಕೆ ಮತ್ತೊಂದು ಉದಾಹರಣೆ ಎಂಬಂತೆ ಕಾಂಗ್ರೆಸ್‌ನ ಸಂಸದರೊಬ್ಬರು ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಅನಾರೋಗ್ಯದ ಬಗ್ಗೆ ಟೀಕೆ ಮಾಡಿದ್ದಾರೆ. ಹಂದಿ ಜ್ವರದ ಚಿಕಿತ್ಸೆಗೆ ಏಮ್ಸ್ ಆಸ್ಪತ್ರೆಗೆ ದಾಖಲಾಗಿರುವ ಅಮಿತ್‌ ಶಾ ಅನಾರೋಗ್ಯದ ಕುರಿತು ಕಾಂಗ್ರೆಸ್ ಸಂಸದ ಬಿ.ಕೆ.ಹರಿಪ್ರಸಾದ್ ಟೀಕೆ ಮಾಡಿದ್ದಾರೆ.
54 ವರ್ಷದ ಅಮಿತ್ ಶಾ 'ಸುವ್ವರ್ ಕಾ ಝುಕಮ್' ( ಹಂದಿ ಜ್ವರ) ರೋಗದಿಂದ ಬಳಲುತ್ತಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಕರ್ನಾಟಕದ ಜನತೆಯ ಶಾಪಕ್ಕೆ ಗುರಿಯಾಗಿದ್ದಾರೆ ಎಂದು ಹರಿಪ್ರಸಾದ್ ಟೀಕಿಸಿದ್ದಾರೆ.

ಅಲ್ಲದೆ, ಕರ್ನಾಟಕ ಸರಕಾರವನ್ನು ಅವರು ಅಸ್ಥಿರಗೊಳಿಸುವುದನ್ನು ಮುಂದುವರಿಸಿದರೆ, ಅಮಿತ್‌ ಶಾಗೆ ಇನ್ನೂ ದೊಡ್ಡ ಕಾಯಿಲೆ ಬರಬಹುದು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ರಾಜ್ಯದ ಸಮ್ಮಿಶ್ರ ಸರಕಾರವನ್ನು ಕೆಡವಲು ಬಿಜೆಪಿ ಆಪರೇಷನ್ ಕಮಲ ನಡೆಸುತ್ತಿದೆ ಎಂಬ ಆರೋಪದ ಬಗ್ಗೆ ಮಾತನಾಡುವಾಗ ಕಾಂಗ್ರೆಸ್ ರಾಜ್ಯಸಭಾ ಸಂಸದ ಹರಿಪ್ರಸಾದ್ ಈ ಮಾತುಗಳನ್ನಾಡಿದ್ದಾರೆ.

'ನನಗೆ ಎಚ್‌1ಎನ್‌1 ಕಾಯಿಲೆ ಇದೆ ಎಂಬುದು ವೈದ್ಯರ ಪರೀಕ್ಷೆ ವೇಳೆ ಬಯಲಾಗಿದೆ. ದೇವರ ಅನುಗ್ರಹ ಹಾಗೂ ನಿಮ್ಮೆಲ್ಲರ ಶುಭ ಹಾರೈಕೆಗಳಿಂದ, ನಾನು ಶೀಘ್ರದಲ್ಲೇ ಚೇತರಿಸಿಕೊಳ್ಳುತ್ತೇನೆ'' ಎಂದು ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದರು.

ಹೊಸದಿಲ್ಲಿಯ ಏಮ್ಸ್ ಆಸ್ಪತ್ರೆಯ ಹಳೆಯ ಖಾಸಗಿ ವಾರ್ಡ್‌ನಲ್ಲಿ ದಾಖಲಾಗಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಆರೋಗ್ಯದ ಮೇಲೆ ಏಮ್ಸ್‌ ನಿರ್ದೇಶಕ ರಣದೀಪ್ ಗುಲೇರಿಯಾ ನೇತೃತ್ವದ ವೈದ್ಯರ ತಂಡ ನಿಗಾ ವಹಿಸಿದೆ.

null
ಇನ್ನೊಂದೆಡೆ, ಬಿಜೆಪಿ ಅಧ್ಯಕ್ಷ ಶೀಘ್ರದಲ್ಲೇ ಏಮ್ಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಬಿಜೆಪಿ ಟ್ವೀಟ್‌ ಮೂಲಕ ಮಾಹಿತಿ ನೀಡಿದೆ. ಅಮಿತ್ ಶಾ ಚಿಕಿತ್ಸೆಗೆ ವೇಗವಾಗಿ ಸ್ಪಂದಿಸುತ್ತಿದ್ದಾರೆ ಎಂದು ವೈದ್ಯರು ಇಂದು ಬೆಳಗ್ಗೆ ಪರೀಕ್ಷೆ ನಡೆಸಿದ ಬಳಿಕ ಮಾಹಿತಿ ನೀಡಿದ್ದಾರೆ. ನಿಮ್ಮ ಶುಭ ಹಾರೈಕೆಗಳು ಹಾಗೂ ಸಂದೇಶಗಳಿಗೆ ಧನ್ಯವಾದ. ನಿಮ್ಮ ಪ್ರೀತಿ, ಅಭಿಮಾನಕ್ಕೆ ನಾವು ಆಭಾರಿಯಾಗಿದ್ದೇವೆ ಎಂದು ಸಹ ಬಿಜೆಪಿ ಟ್ವೀಟ್ ಮಾಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ