ಆ್ಯಪ್ನಗರ

ಸಿಪಿಎಂ-ಕಾಂಗ್ರೆಸ್‌ ಘರ್ಷಣೆ: ಇಬ್ಬರ ಕೊಲೆ

ಕೆಲವು ದಿನಗಳಿಂದ ಕಾಂಗ್ರೆಸ್‌ -ಸಿಪಿಎಂ ಕಾರ‍್ಯಕರ್ತರ ಮಧ್ಯೆ ಘರ್ಷಣೆ ನಡೆದಿತ್ತು.

Vijaya Karnataka Web 18 Feb 2019, 7:43 am
ಕಾಸರಗೋಡು: ಪೆರಿಯಾ ಕಲ್ಕೋಟ್‌ ಬಳಿ ಭಾನುವಾರ ಸಂಜೆ ಸಿಪಿಎಂ ಹಾಗೂ ಕಾಂಗ್ರೆಸ್‌ ಕಾರ‍್ಯಕರ್ತರ ಮಧ್ಯೆ ನಡೆದ ಘರ್ಷಣೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರು ಕೊಲೆಯಾಗಿದ್ದಾರೆ. ಕೃಪೇಶ್‌ (24) ಮತ್ತು ಶರತ್‌ (21) ಮೃತರು.
Vijaya Karnataka Web Murder


ಗಂಭೀರವಾಗಿ ಗಾಯಗೊಂಡಿದ್ದ ಶರತ್‌ನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ.

ಕೃಪೇಶ್‌ ಮೃತದೇಹವನ್ನು ಕಾಸರಗೋಡು ಜನರಲ್‌ ಆಸ್ಪತ್ರೆಗೆ ಸಾಗಿಸಲಾಗಿದೆ. ಬೇಕಲ್‌ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕೆಲವು ದಿನಗಳಿಂದ ಕಾಂಗ್ರೆಸ್‌ -ಸಿಪಿಎಂ ಕಾರ‍್ಯಕರ್ತರ ಮಧ್ಯೆ ಘರ್ಷಣೆ ನಡೆದಿತ್ತು. ಘಟನೆ ಹಿನ್ನೆಲೆಯಲ್ಲಿ, ಸೋಮವಾರ ಕಾಸರಗೋಡು 'ಜಿಲ್ಲಾ ಬಂದ್‌'ಗೆ ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌ ಕರೆ ನೀಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ