ಆ್ಯಪ್ನಗರ

Congress: ಕಾಂಗ್ರೆಸ್ ಅಧ್ಯಕ್ಷ ಚುನಾವಣೆಯಲ್ಲಿ ಸೋನಿಯಾ ಬೆಂಬಲ ಕೇವಲ ವದಂತಿ: ಖರ್ಗೆ ಸ್ಪಷ್ಟನೆ

Congress: ಚುನಾವಣೆಯ ಈ ಹಂತದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಗಾಂಧಿ ಪರಿವಾರದ ಶ್ರೀರಕ್ಷೆ ಇದೆ ಎಂಬ ಸುದ್ದಿ ಹರಡಿದೆ. ಇದನ್ನು ಖಂಡಿಸಿರುವ ಮಲ್ಲಿಕಾರ್ಜುನ ಖರ್ಗೆ, ಈ ರೀತಿಯ ವದಂತಿ ಹರಡಿ ಕಾಂಗ್ರೆಸ್ ಪಕ್ಷಕ್ಕೆ, ನನಗೆ ಹಾಗೂ ಸೋನಿಯಾ ಗಾಂಧಿ ಅವರಿಗೆ ಅಪಮಾನ ಮಾಡಲಾಗುತ್ತಿದೆ ಎಂದು ಕಿಡಿ ಕಾರಿದ್ದಾರೆ. ಸೋನಿಯಾ ಗಾಂಧಿ ಅವರು ತಾವು ಚುನಾವಣೆಯಲ್ಲಿ ಸ್ಪರ್ಧಿಸೋದಿಲ್ಲ ಎಂದಿದ್ದರು, ಅಷ್ಟೇ ಅಲ್ಲ, ಯಾವುದೇ ಅಭ್ಯರ್ಥಿಯನ್ನ ಬೆಂಬಲಿಸೋದಿಲ್ಲ ಅಂತಾನೂ ಹೇಳಿದ್ದರು ಎಂದು ಖರ್ಗೆ ಪುನರುಚ್ಚರಿಸಿದ್ದಾರೆ.

Authored byದಿಲೀಪ್ ಡಿ. ಆರ್. | Vijaya Karnataka Web 12 Oct 2022, 11:15 am

ಹೈಲೈಟ್ಸ್‌:

  • ಚುನಾವಣೆಯಲ್ಲಿ ಸ್ಪರ್ಧೆ ಮಾಡುವಂತೆ ನನ್ನ ಹೆಸರನ್ನು ಸೋನಿಯಾ ಪ್ರಸ್ತಾಪ ಮಾಡಿರಲಿಲ್ಲ
  • ಸೋನಿಯಾ ಗಾಂಧಿ ಅವರು ನನಗೆಬೆಂಬಲಿಸುವುದಾಗಿಯೂ ಹೇಳಿಲ್ಲ
  • ಈ ಕುರಿತಾದ ಎಲ್ಲಾ ವದಂತಿಗಳಿಗೂ ತೆರೆ ಎಳೆದ ಮಲ್ಲಿಕಾರ್ಜುನ ಖರ್ಗೆ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web Sonia Gandhi and Mallikarjun Kharge
ಕಾಂಗ್ರೆಸ್ ಅಧ್ಯಕ್ಷ ಚುನಾವಣೆಯಲ್ಲಿ ಸೋನಿಯಾ ಬೆಂಬಲ ಕೇವಲ ವದಂತಿ: ಖರ್ಗೆ ಸ್ಪಷ್ಟನೆ
ಲಖನೌ (ಉತ್ತರ ಪ್ರದೇಶ): ಕಾಂಗ್ರೆಸ್ ಪಕ್ಷದ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧೆ ಮಾಡುವಂತೆ ತಮ್ಮ ಹೆಸರನ್ನು ಪಕ್ಷದ ವರಿಷ್ಠೆ ಸೋನಿಯಾ ಗಾಂಧಿ ಅವರು ಮುಂದಿಟ್ಟಿರಲಿಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಅಷ್ಟೇ ಅಲ್ಲ, ಸೋನಿಯಾ ಗಾಂಧಿ ತಮಗೆ ಬೆಂಬಲಿಸುವುದಾಗಿಯೂ ಹೇಳಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ಕುರಿತಾದ ಎಲ್ಲಾ ವದಂತಿಗಳಿಗೂ ಖರ್ಗೆ ತೆರೆ ಎಳೆದಿದ್ದಾರೆ.
ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಸೋನಿಯಾ ಗಾಂಧಿ ಅವರು ನನ್ನ ಹೆಸರನ್ನೂ ಎಂದಿಗೂ ಮುಂದಿಟ್ಟಿರಲಿಲ್ಲ, ಈ ಕುರಿತಾಗಿ ವದಂತಿ ಹರಡಿದೆ ಅಷ್ಟೇ ಎಂದು ಖರ್ಗೆ ಸ್ಪಷ್ಟನೆ ನೀಡಿದ್ಧಾರೆ.

Congress: ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ‘ದೊಡ್ಡ ನಾಯಕರ’ ಬೆಂಬಲ ಬಯಸಿಲ್ಲ: ಶಶಿ ತರೂರ್
ಸೋನಿಯಾ ಗಾಂಧಿ ಅವರು ಪಕ್ಷದ ಅಧ್ಯಕ್ಷ ಹುದ್ದೆಗೆ ನನ್ನ ಹೆಸರನ್ನು ಮುಂದಿಟ್ಟಿದ್ದಾರೆ ಎಂದು ನಾನೂ ಕೂಡಾ ಎಲ್ಲೂ ಹೇಳಿಲ್ಲ, ಈ ಕುರಿತಾಗಿ ಹರಡಿರುವುದೆಲ್ಲವೂ ವದಂತಿ ಎಂದು ಖರ್ಗೆ ಹೇಳಿದ್ದಾರೆ. ಗಾಂಧಿ ಪರಿವಾರದ ಯಾವುದೇ ಸದಸ್ಯ ಅಧ್ಯಕ್ಷೀಯ ಚುನಾವಣೆಗೆ ನಿಲ್ಲೋದಿಲ್ಲ ಹಾಗೂ ಅಧ್ಯಕ್ಷೀಯ ಚುನಾವಣೆಯ ಯಾವುದೇ ಅಭ್ಯರ್ಥಿಗೆ ಬೆಂಬಲ ನೀಡೋದಿಲ್ಲ ಎಂದು ತಿಳಿಸಿದ್ದಾರೆ ಎಂದು ಖರ್ಗೆ ಹೇಳಿದರು.

ಸದ್ಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷೀಯ ಚುನಾವಣಾ ರಣ ಕಣ ರಂಗೇರಿದ್ದು, ಶಶಿ ತರೂರ್ ಹಾಗೂ ಮಲ್ಲಿಕಾರ್ಜುನ ಖರ್ಗೆ ಅಖಾಡದಲ್ಲಿದ್ದಾರೆ.

ಚುನಾವಣೆಯ ಈ ಹಂತದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಗಾಂಧಿ ಪರಿವಾರದ ಶ್ರೀರಕ್ಷೆ ಇದೆ ಎಂಬ ಸುದ್ದಿ ಹರಡಿದೆ. ಇದನ್ನು ಖಂಡಿಸಿರುವ ಮಲ್ಲಿಕಾರ್ಜುನ ಖರ್ಗೆ, ಈ ರೀತಿಯ ವದಂತಿ ಹರಡಿ ಕಾಂಗ್ರೆಸ್ ಪಕ್ಷಕ್ಕೆ, ನನಗೆ ಹಾಗೂ ಸೋನಿಯಾ ಗಾಂಧಿ ಅವರಿಗೆ ಅಪಮಾನ ಮಾಡಲಾಗುತ್ತಿದೆ ಎಂದು ಕಿಡಿ ಕಾರಿದ್ದಾರೆ. ಸೋನಿಯಾ ಗಾಂಧಿ ಅವರು ತಾವು ಚುನಾವಣೆಯಲ್ಲಿ ಸ್ಪರ್ಧಿಸೋದಿಲ್ಲ ಎಂದಿದ್ದರು, ಅಷ್ಟೇ ಅಲ್ಲ, ಯಾವುದೇ ಅಭ್ಯರ್ಥಿಯನ್ನ ಬೆಂಬಲಿಸೋದಿಲ್ಲ ಅಂತಾನೂ ಹೇಳಿದ್ದರು ಎಂದು ಖರ್ಗೆ ಪುನರುಚ್ಚರಿಸಿದ್ದಾರೆ.

Congress President Poll: ನಾನು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಬೇಕೆಂದು ರಾಹುಲ್ ಗಾಂಧಿ ಹೇಳಿದ್ದರು: ಶಶಿ ತರೂರ್
ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ದೇಶಾದ್ಯಂತ ಒಟ್ಟು 9,300 ಪ್ರತಿನಿಧಿಗಳನ್ನು ಆಯ್ಕೆ ಮಾಡಿದ್ದಾರೆ. ಈ ಪ್ರತಿನಿಧಿಗಳು ಅಧ್ಯಕ್ಷೀಯ ಚುನಾವಣೆಯಲ್ಲಿ ಮತದಾನ ಮಾಡಲಿದ್ದಾರೆ. ಹೆಚ್ಚಿನ ವೋಟು ಪಡೆದ ಅಭ್ಯರ್ಥಿ ಗೆಲುವು ಸಾಧಿಸಿ ಅಧ್ಯಕ್ಷರಾಗಲಿದ್ದಾರೆ.

ಇನ್ನು ಉತ್ತರ ಪ್ರದೇಶ ರಾಜ್ಯವೊಂದರಲ್ಲೇ ಒಟ್ಟು 1,250 ಪ್ರತಿನಿಧಿಗಳಿದ್ದಾರೆ. ಹೀಗಾಗಿ, ಉತ್ತರ ಪ್ರದೇಶ ಕಾಂಗ್ರೆಸ್ ಪಕ್ಷಕ್ಕೆ ನಿರ್ಣಾಯಕ ಎನಿಸಿದೆ. ಈ ಕುರಿತು ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ನಾನು ಈ ಚುನಾವಣೆಯಲ್ಲಿ ಗೆಲುವು ಸಿಗುತ್ತಾ ಎಂದು ಕಾದು ಕುಳಿತಿಲ್ಲ. ಏಕೆಂದರೆ ನನ್ನನ್ನು ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಪ್ರೇರೇಪಿಸಿದವರೇ ನನ್ನನ್ನು ಗೆಲ್ಲಿಸಬೇಕಿದೆ ಎಂದು ಹೇಳಿದ್ದಾರೆ.


ಕಾಂಗ್ರೆಸ್ ಪಕ್ಷದ ನಾಯಕ, ಸಂಸದ ಶಶಿ ತರೂರ್ ಕೂಡಾ ಚುನಾವಣಾ ಕಣದಲ್ಲಿದ್ದು, ಅವರೂ ಕೂಡಾ ಬಿರುಸಿನ ಪ್ರಚಾರದಲ್ಲಿ ನಿರತರಾಗಿದ್ಧಾರೆ. ಈ ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷದೊಳಗೇ ಕಿತ್ತಾಟ ನಡೆಸಬೇಕಿಲ್ಲ. ನಾವೆಲ್ಲರೂ ಒಂದಾಗಿ ಭವಿಷ್ಯದ ಸವಾಲುಗಳ ವಿರುದ್ಧ ಹೋರಾಟ ನಡೆಸಬೇಕು ಎಂದು ಈ ಹಿಂದೆ ಶಶಿ ತರೂರ್ ಹೇಳಿದ್ದರು.
ಲೇಖಕರ ಬಗ್ಗೆ
ದಿಲೀಪ್ ಡಿ. ಆರ್.
ವಿಜಯ ಕರ್ನಾಟಕದ ಡಿಜಿಟಲ್ ಪತ್ರಕರ್ತನಾಗಿ 2019ರ ಆಗಸ್ಟ್‌ನಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡ ಟಿವಿ ನ್ಯೂಸ್ ವಾಹಿನಿಗಳಲ್ಲಿ 14 ವರ್ಷಕ್ಕೂ ಹೆಚ್ಚು ಕಾಲ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. ರಾಜಕೀಯ, ವಿಜ್ಞಾನ-ತಂತ್ರಜ್ಞಾನ ರಂಗಗಳು ಇವರ ಆಸಕ್ತಿಯ ವಿಷಯಗಳು. ಇದಲ್ಲದೆ ಹಾಸ್ಯ, ವಿಡಂಬನಾತ್ಮಕ ಬರಹ, ವ್ಯಕ್ತಿ ಚಿತ್ರ, ಜೀವ ಪರ ನಿಲುವಿನ ಸಂವೇದನಾತ್ಮಕ ಲೇಖನಗಳನ್ನು ಹೆಚ್ಚಾಗಿ ಬರೆಯುತ್ತಾರೆ. ಕಾಡು, ಹಸಿರು, ಬೆಟ್ಟ ಗುಡ್ಡಗಳ ಚಾರಣ ಮಾಡುವುದು ಇವರ ಹವ್ಯಾಸ.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ