ಆ್ಯಪ್ನಗರ

ನಾನು ಪ್ರಚಾರ ಮಾಡಿದರೆ ಕಾಂಗ್ರೆಸ್ ಸೋಲು ಖಚಿತ: ದಿಗ್ವಿಜಯ್ ಸಿಂಗ್

ದಿಗ್ವಿಜಯ್ ಹೇಳಿಕೆ ವೀಡಿಯೋ ವೈರಲ್ ಆಗಿದ್ದು, ಶಾಸಕ ಜಿತು ಪಟ್ವಾರಿ ಮನೆಯಲ್ಲಿ ಕಾರ್ಯಕರ್ತರ ಜತೆಗೆ ಮಾತನಾಡುವ ಸಂದರ್ಭದಲ್ಲಿ ನಾನು ಪ್ರಚಾರ ಕಾರ್ಯದಲ್ಲಿ ಭಾಗವಹಿಸುವುದಿಲ್ಲ, ಭಾಷಣ ಕೂಡ ಮಾಡುವುದಿಲ್ಲ ಎಂದು ಹೇಳಿದ್ದಾರೆ.

Vijaya Karnataka Web 16 Oct 2018, 6:55 pm
ಭೋಪಾಲ್: ನಾನು ಕಾಂಗ್ರೆಸ್ ಪರ ಪ್ರಚಾರ ಮಾಡಿದರೆ ಪಕ್ಷಕ್ಕೆ ಸೋಲು ಖಂಡಿತ. ಆದ್ದರಿಂದ ನಾನು ಕಾಂಗ್ರೆಸ್ ಪರ ಪ್ರಚಾರ ಮಾಡುವುದಿಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಹೇಳಿಕೆ ವೈರಲ್ ಆಗಿದೆ.

ಪಂಚರಾಜ್ಯ ಚುನಾವಣಾ ಕಾವು ಏರುತ್ತಿದ್ದು, ಮಧ್ಯ ಪ್ರದೇಶದಲ್ಲಿ ಕಾಂಗ್ರೆಸ್ ಪರ ಪ್ರಚಾರ ನಡೆಸುತ್ತಿದ್ದ ವೇಳೆ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಈ ಹೇಳಿಕೆ ನೀಡಿದ್ದಾರೆ. ದಿಗ್ವಿಜಯ್ ಹೇಳಿಕೆ ವೀಡಿಯೋ ವೈರಲ್ ಆಗಿದ್ದು, ಶಾಸಕ ಜಿತು ಪಟ್ವಾರಿ ಮನೆಯಲ್ಲಿ ಕಾರ್ಯಕರ್ತರ ಜತೆಗೆ ಮಾತನಾಡುವ ಸಂದರ್ಭದಲ್ಲಿ ನಾನು ಪ್ರಚಾರ ಕಾರ್ಯದಲ್ಲಿ ಭಾಗವಹಿಸುವುದಿಲ್ಲ, ಭಾಷಣ ಕೂಡ ಮಾಡುವುದಿಲ್ಲ ಎಂದು ಹೇಳಿದ್ದಾರೆ.

ಜತೆಗೆ ಕಾರ್ಯಕರ್ತರನ್ನು ಉದ್ದೇಶಿಸಿ, ನೀವು ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಬೇಕು, ಅಭ್ಯರ್ಥಿ ಯಾರೇ ಆಗಿರಲಿ, ಪಕ್ಷ ಆಯ್ಕೆ ಮಾಡಿದ ವ್ಯಕ್ತಿಯನ್ನು ನೀವು ಗೆಲ್ಲಿಸಬೇಕು. ಇನ್ನಷ್ಟು ಉತ್ಸಾಹದಿಂದ ಪ್ರಚಾರದಲ್ಲಿ ಭಾಗವಹಿಸಿ ಎಂದು ಹೇಳಿದ್ದಾರೆ.

ಕಳೆದ ಶನಿವಾರ ಈ ವೀಡಿಯೋ ಚಿತ್ರೀಕರಿಸಲಾಗಿದ್ದು, ಮಧ್ಯ ಪ್ರದೇಶದಲ್ಲಿ ರಾಹುಲ್ ಪ್ರಚಾರ ಕೈಗೊಳ್ಳುತ್ತಿರುವ ಬೆನ್ನಲ್ಲೇ ಮುನ್ನಲೆಗೆ ಬಂದಿದೆ.


ಮಧ್ಯ ಪ್ರದೇಶ ಸಿಎಂ ಆಗಿ ಎರಡು ಬಾರಿ ಕಾರ್ಯನಿರ್ವಹಿಸಿದ್ದ ದಿಗ್ವಿಜಯ್ ಸಿಂಗ್ ಅವರನ್ನು ಕಾಂಗ್ರೆಸ್ ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ. ಅಂತಹ ನಾಯಕನಿಗೆ ಗೌರವ ನೀಡುತ್ತಿಲ್ಲ, ಹೀಗಾಗಿ ಸಿಂಗ್ ಆ ರೀತಿ ಹೇಳಿಕೆ ನೀಡಿದ್ದಾರೆ ಎಂದು ಬಿಜೆಪಿ ಹೇಳಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ