ಆ್ಯಪ್ನಗರ

ರಾಷ್ಟ್ರೀಯ ವಿಧಿವಿಜ್ಞಾನ ವಿವಿ ಆರಂಭಿಸಲು ಕೇಂದ್ರ ನಿರ್ಧಾರ

ಬಿಪಿಆರ್‌ಡಿ ಈ ಕುರಿತು ವಿವರವಾದ ಪ್ರಸ್ತಾವ ಸಲ್ಲಿಸಿದೆ. ಸದ್ಯದಲ್ಲಿಯೇ ಅದನ್ನು ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ, ಸಂಪುಟದ ಒಪ್ಪಿಗೆ ಪಡೆಯಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಪ್ರಕಟಿಸಿದರು.

PTI 29 Aug 2019, 5:00 am
ಹೊಸದಿಲ್ಲಿ: ಪೊಲೀಸರು ವೈಜ್ಞಾನಿಕ ತನಿಖಾ ವಿಧಾನ ಅಳವಡಿಸಿಕೊಳ್ಳಲು ನೆರವಾಗುವ ನಿಟ್ಟಿನಲ್ಲಿ ರಾಷ್ಟ್ರಮಟ್ಟದಲ್ಲಿ ಪೊಲೀಸ್‌ ವಿಶ್ವವಿದ್ಯಾಲಯ ಮತ್ತು ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯ ಆರಂಭಿಸಲು ಕೇಂದ್ರ ಸರಕಾರ ತೀರ್ಮಾನಿಸಿದೆ.
Vijaya Karnataka Web shah

ಗೃಹ ಸಚಿವಾಲಯದ ಅಧೀನದಲ್ಲಿರುವ ಪೊಲೀಸ್‌ ಸಂಶೋಧನೆ ಮತ್ತು ಅಭಿವೃದ್ಧಿ ಘಟಕ (ಬಿಪಿಆರ್‌ಡಿ)ದ 49ನೇ ದಿನದ ಸಂಸ್ಥಾಪನಾ ದಿನದ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಈ ವಿಷಯ ಪ್ರಕಟಿಸಿದರು.
''ಪ್ರತಿ ರಾಜ್ಯದಲ್ಲಿಯೂ ಈ ವಿಶ್ವವಿದ್ಯಾಲಯಗಳಿಗೆ ಸಂಯೋಜಿತವಾದ ಕಾಲೇಜುಗಳಿರುತ್ತವೆ. ಪೊಲೀಸ್‌ ಇಲಾಖೆಗೆ ಸೇರುವ ಕನಸು ಹೊತ್ತಿರುವ ದ್ವಿತೀಯ ಪಿಯುಸಿ ಅಥವಾ 12ನೇ ತರಗತಿ ಉತ್ತೀರ್ಣರಾದ ವಿದ್ಯಾರ್ಥಿಗಳು ಈ ಕಾಲೇಜುಗಳಲ್ಲಿ ಆರಂಭಿಕ ತರಬೇತಿ ಪಡೆಯಬಹುದು. ಅವರು ಪೊಲೀಸ್‌ ಪರೀಕ್ಷೆ ಎದುರಿಸುವಾಗ ಹೆಚ್ಚುವರಿ ಅಂಕಗಳನ್ನು ನೀಡಲಾಗುವುದು,'' ಎಂದು ವಿವರಿಸಿದರು.
ಬಿಪಿಆರ್‌ಡಿ ಈ ಕುರಿತು ವಿವರವಾದ ಪ್ರಸ್ತಾವ ಸಲ್ಲಿಸಿದೆ. ಸದ್ಯದಲ್ಲಿಯೇ ಅದನ್ನು ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ, ಸಂಪುಟದ ಒಪ್ಪಿಗೆ ಪಡೆಯಲಾಗುವುದು. ಅಪರಾಧಿಗಳು ಮತ್ತು ಅಪರಾಧ ಮನೋಭಾವಗಳ ಕುರಿತು ಅಧ್ಯಯನ ನಡೆಸಲು ನ್ಯಾಷನಲ್‌ ಮೋಡಸ್‌ ಅಪರೆಂಡಿ ಬ್ಯೂರೊ ಆರಂಭಿಸುವ ಬಗ್ಗೆ ಪ್ರಧಾನಿಯವರ ಜತೆ ಸಮಾಲೋಚನೆ ನಡೆಸಲಾಗುವುದು ಎಂದು ಶಾ ತಿಳಿಸಿದರು.

ದೇಶದಲ್ಲಿ ಅಪರಾಧ ಪ್ರಕರಣಗಳಲ್ಲಿ ಶಿಕ್ಷೆಗೆ ಗುರಿಯಾಗುವವರ ಪ್ರಮಾಣ ತೀರಾ ಕಡಿಮೆ ಇದೆ. ಶಂಕಿತರಿಂದ ಬಾಯಿ ಬಿಡಿಸಲು ಥರ್ಡ್‌ ಡಿಗ್ರಿ ಶಿಕ್ಷೆ ನೀಡುವುದು, ಫೋನ್‌ ಟ್ಯಾಪಿಂಗ್‌ ಎಲ್ಲ ಓಬೀರಾಯನ ಕಾಲದ ತನಿಖಾ ವಿಧಾನಗಳಾಗಿವೆ. ಆ ವಿಧಾನಗಳು ಈಗ ಯಾವುದೇ ಫಲ ನೀಡುವುದಿಲ್ಲ. ಹೀಗಾಗಿ ವೈಜ್ಞಾನಿಕ ತನಿಖಾ ವಿಧಾನಗಳನ್ನು ಅಳವಡಿಸಿಕೊಳ್ಳುವುದು ಅಗತ್ಯವಾಗಿದೆ. ತಂತ್ರಜ್ಞಾನವನ್ನೂ ತನಿಖೆಗೆ ಪೂರಕವಾಗಿ ಬಳಸಿಕೊಳ್ಳಬೇಕು ಎಂದು ಪೊಲೀಸ್‌ ಅಧಿಕಾರಿಗಳಿಗೆ ಸಲಹೆ ಮಾಡಿದರು.
.........
ಭಾರತವನ್ನು 5 ಟ್ರಿಲಿಯನ್‌ ಡಾಲರ್‌ ಆರ್ಥಿಕತೆಯ ದೇಶವಾಗಿ ರೂಪಿಸುವ ಗುರಿಯೊಂದಿಗೆ ಕೇಂದ್ರ ಸರಕಾರ ಕಾರ್ಯಪ್ರವೃತ್ತವಾಗಿದೆ. ದೇಶದ ಭದ್ರತೆ ಬಲವಾಗಿರದಿದ್ದರೆ ಆರ್ಥಿಕ ಪ್ರಗತಿ ಸಾಧ್ಯವಿಲ್ಲ. ಪೊಲೀಸ್‌ ಮತ್ತು ಭದ್ರತಾ ಸಿಬ್ಬಂದಿಯ ಹೊಣೆ ಬಹಳ ದೊಡ್ಡದು.
- ಅಮಿತ್‌ ಶಾ, ಕೇಂದ್ರ ಗೃಹ ಸಚಿವ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ