ಆ್ಯಪ್ನಗರ

ಭಾರತದಲ್ಲಿ ಕಥೆ ಹೇಳುವ ಶ್ರೀಮಂತ ಪರಂಪರೆ ಇದೆ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ!

ಮನ್ ಕಿ ಬಾತ್ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಮಕ್ಕಳಿಗೆ ಕಥೆಗಳನ್ನು ಹೇಳುವ ಸಂಪ್ರದಾಯವನ್ನು ನಾವು ಮರೆಯಬಾರದು ಎಂದು ಕಿವಿಮಾತು ಹೇಳಿದರು. ಮೋದಿ ತಮ್ಮ ಭಾಷಣದಲ್ಲಿ ಕೃಷಿ ವಿಧೇಯಕವನ್ನು ಪ್ರಸ್ತಾಪಿಸಿದರು.

Vijaya Karnataka Web 27 Sep 2020, 2:09 pm
ಹೊಸದಿಲ್ಲಿ: ಭಾರತದಲ್ಲಿ ಮಕ್ಕಳಿಗೆ ಕಥೆ ಹೇಳುವ ಶ್ರೀಮಂತ ಸಂಪ್ರದಾಯ ಶತಮಾನಗಳಿಂದ ಬೇರೂರಿದ್ದು, ಈ ಸಂಪ್ರದಾಯ ಪೀಳಿಗೆಯಿಂದ ಪೀಳಿಗೆಗೆ ವರ್ಗಾವಣೆ ಆಗುತ್ತಲೇ ಇದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
Vijaya Karnataka Web PM Modi
ಪ್ರಧಾನಿ ಮೋದಿ ಮನ್ ಕಿ ಬಾತ್


ತಮ್ಮ ಮನ್ ಕಿ ಬಾತ್ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಮಕ್ಕಳಿಗೆ ಕಥೆಗಳನ್ನು ಹೇಳುವ ಸಂಪ್ರದಾಯವನ್ನು ನಾವು ಮರೆಯಬಾರದು ಎಂದು ಕಿವಿಮಾತು ಹೇಳಿದರು.

ಕಥೆಗಳು ಮಕ್ಕಳ ವ್ಯಕ್ತಿತ್ವ ವಿಕಸನದಲ್ಲಿ ಅತ್ಯಂತ ಮಹತ್ವದ ಪಾತ್ರ ನಿರ್ವಹಿಸುತ್ತವೆ. ಹೀಗಾಗಿ ಮಕ್ಕಳ ಜ್ಞಾನ ವಿಕಸನಕ್ಕಾಗಿ ಹಿರಿಯರು ಕಥೆಗಳನ್ನು ಹೇಳುತ್ತಿರಬೇಕು ಎಂದು ಪ್ರಧಾನಿ ಮೋದಿ ಮನವಿ ಮಾಡಿದರು.

ಮನ್‌ ಕಿ ಬಾತ್‌ನಲ್ಲಿ ಮುಧೋಳ ತಳಿ ನಾಯಿ ಪ್ರಸ್ತಾಪ..! ವಿಶೇಷ ಶ್ವಾನದ ಬಗ್ಗೆ ಪ್ರಧಾನಿ ಮೋದಿ ಮೆಚ್ಚುಗೆ

ಕಥೆಗಳ ಹಲವಾರು ಪ್ರಕಾರಗಳು ನಮ್ಮಲ್ಲಿದ್ದು, ಇವುಗಳು ಮಕ್ಕಳ ವ್ಯಕ್ತಿತ್ವವನ್ನು ರೂಪಿಸುತ್ತವೆ ಎಂದು ಪ್ರಧಾನಿ ಮೋದಿ ನುಡಿದರು.


ಕೃಷಿ ವಿಧೇಯಕ ಪ್ರಸ್ತಾಪಿಸಿದ ಪ್ರಧಾನಿ:
ಇನ್ನು ತಮ್ಮ ಭಾಷಣದಲ್ಲಿ ಕೇಂದ್ರ ಸರ್ಕಾರದ ಉದ್ದೇಶಿತ ಕೃಷಿ ವಿಧೇಯಕವನ್ನು ಸಮರ್ಥಿಸಿಕೊಂಡ ಪ್ರಧಾನಿ ಮೋದಿ, ನೂತನ ಮಸೂದೆ ದೇಶದ ಕೃಷಿ ವಲಯದ ಚಹರೆ ಬದಲಿಸಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.

ಕೊರೊನಾ ಹೋರಾಟ ಸರಿಯಾದ ಮಾರ್ಗದಲ್ಲಿ ಸಾಗುತ್ತಿದೆ: ಪ್ರಧಾನಿ ಮನ್ ಕಿ ಬಾತ್!

ಕೃಷಿ ವಿಧೇಯಕಗಳು ರೈತರ ಪರವಾಗಿದ್ದು, ಇವುಗಳ ಲಾಭವನ್ನು ದೇಶದ ರೈತ ಸಮುದಾಯ ಅರಿಯಬೇಕಿದೆ ಎಂದು ಪ್ರಧಾನಿ ಮೋದಿ ಮನವಿ ಮಾಡಿದರು.

ಭಗತ್ ಸಿಂಗ್ ನೆನೆದ ಪ್ರಧಾನಿ:
ಇನ್ನು ತಮ್ಮ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಶಹೀದ್ ಭಗತ್ ಸಿಂಗ್ ಅವರನ್ನು ನೆನೆದರು. ನಾಳೆ(ಸೋಮವಾರ) ಭಗತ್ ಸಿಂಗ್ ಅವರ 113ನೇ ಜನ್ಮ ಜಯಂತಿ ಇದ್ದು, ಈ ವೇಳೆ ಸಮಸ್ತ ಭಾರತ ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಪ್ರಾಣವನ್ನು ಅರ್ಪಿಸಿದ ವೀರನನ್ನು ಸ್ಮರಿಸಲಿದೆ ಎಂದು ಹೇಳಿದರು.

ಇನ್ನು ಕೊರೊನಾ ಕಾಲದಲ್ಲಿ ಎಲ್ಲರೂ ಮಾಸ್ಕ್ ಧರಿಸಬೇಕು ಎಂದು ಪ್ರಧಾನಿ ಮೋದಿ ಈ ವೇಳೆ ದೇಶವಾಸಿಗಳಲ್ಲಿ ಮನವಿ ಮಾಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ