ಗುವಾಹಟಿ: ದೇಶದಲ್ಲಿ ಕೊರೊನಾ ವೈರಸ್ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಉತ್ತರ ಪೂರ್ವ ರಾಜ್ಯವಾಗಿರುವ ಅಸ್ಸಾಂನಲ್ಲಿ ಕೊರೊನಾ ವೈರೈಸ್ ಸೋಂಕಿಗೆ ಮೊದಲ ವ್ಯಕ್ತಿ ಬಲಿಯಾಗಿದ್ದಾರೆ. ಇದನ್ನು ಅಸ್ಸಾಂ ಸಚಿವ ಹಿಮಾಂತ ಬಿಸ್ವ ಶರ್ಮಾ ಖಚಿತಪಡಿಸಿದ್ದಾರೆ. ಸಿಲ್ಚಾರ್ ವೈದ್ಯಕೀಯ ಕಾಲೇಜ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹೈಲಕಂಡಿ ಜಿಲ್ಲೆಯ ವ್ಯಕ್ತಿ ಸಾವಿಗೆ ಶರಣಾಗಿದ್ದಾರೆ ಎಂದವರು ತಿಳಿಸಿದರು.
ಮೃತರ ಅಂತ್ಯಕ್ರಿಯೆಯನ್ನು ಕೋವಿಡ್ 19 ಮಾನದಂಡಗಳ ಪ್ರಕಾರ ನಡೆಸಲಾಗುವುದು ಎಂಬುದನ್ನು ತಿಳಿಸಲಾಗಿದೆ.
ದೇಶದಲ್ಲಿ ದಿನವೊಂದರಲ್ಲೇ ಗರಿಷ್ಠ 781 ಕೊರೊನಾ ಪ್ರಕರಣ ದಾಖಲು
ತಾಜಾ ವರದಿಗಳ ಪ್ರಕಾರ ಅಸ್ಸಾಂನಲ್ಲಿ ಇದುವರೆಗೆ 28 ಮಂದಿಗೆ ಕೊರೊನಾ ಸೋಂಕು ತಗುಲಿದೆ. ಬಿಎಸ್ಎಫ್ ನಿವೃತ್ತ 65ರ ಹರೆಯದ ಯೋಧನ ಪರಿಸ್ಥಿತಿ ಚಿಂತಾಜನಕವಾಗಿದ್ದು, ಎಸ್ಎಂಸಿಎಚ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ.
ಮಂಗಳವಾರ ದಾಖಲಾದ ಕೊರೊನಾ ವೈರಸ್ ಸೋಂಕಿತ ವ್ಯಕ್ತಿ ತಬ್ಲಿಘಿ ಜಮಾತ್ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ್ದರು ಎಂಬುದನ್ನು ಖಚಿತಪಡಿಸಲಾಗಿದೆ. ಇದಕ್ಕೂ ಮೊದಲು ಸೌದಿ ಅರೇಬಿಯಾಗೆ ತೆರಳಿದ್ದರು.
ಕೊರೊನಾ ಲೈವ್ ಅಪ್ಡೇಟ್ಸ್: ದೇಶದಲ್ಲಿ 6700ರ ಗಡಿದಾಟಿದ ಸೋಂಕಿತರ ಸಂಖ್ಯೆ
ಅಂದ ಹಾಗೆ ಕೋವಿಡ್ 19 ವ್ಯಾಪಕವಾಗಿ ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಅಸ್ಸಾಂನಲ್ಲೂ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವ ಮೂಲಕ ಕೋವಿಡ್ 19 ವೈರಸ್ ಹರಡುವುದನ್ನು ತಡೆಹಿಡಿಯಬಹುದಾಗಿದೆ.
ಮೃತರ ಅಂತ್ಯಕ್ರಿಯೆಯನ್ನು ಕೋವಿಡ್ 19 ಮಾನದಂಡಗಳ ಪ್ರಕಾರ ನಡೆಸಲಾಗುವುದು ಎಂಬುದನ್ನು ತಿಳಿಸಲಾಗಿದೆ.
ದೇಶದಲ್ಲಿ ದಿನವೊಂದರಲ್ಲೇ ಗರಿಷ್ಠ 781 ಕೊರೊನಾ ಪ್ರಕರಣ ದಾಖಲು
ತಾಜಾ ವರದಿಗಳ ಪ್ರಕಾರ ಅಸ್ಸಾಂನಲ್ಲಿ ಇದುವರೆಗೆ 28 ಮಂದಿಗೆ ಕೊರೊನಾ ಸೋಂಕು ತಗುಲಿದೆ. ಬಿಎಸ್ಎಫ್ ನಿವೃತ್ತ 65ರ ಹರೆಯದ ಯೋಧನ ಪರಿಸ್ಥಿತಿ ಚಿಂತಾಜನಕವಾಗಿದ್ದು, ಎಸ್ಎಂಸಿಎಚ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ.
ಮಂಗಳವಾರ ದಾಖಲಾದ ಕೊರೊನಾ ವೈರಸ್ ಸೋಂಕಿತ ವ್ಯಕ್ತಿ ತಬ್ಲಿಘಿ ಜಮಾತ್ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ್ದರು ಎಂಬುದನ್ನು ಖಚಿತಪಡಿಸಲಾಗಿದೆ. ಇದಕ್ಕೂ ಮೊದಲು ಸೌದಿ ಅರೇಬಿಯಾಗೆ ತೆರಳಿದ್ದರು.
ಕೊರೊನಾ ಲೈವ್ ಅಪ್ಡೇಟ್ಸ್: ದೇಶದಲ್ಲಿ 6700ರ ಗಡಿದಾಟಿದ ಸೋಂಕಿತರ ಸಂಖ್ಯೆ
ಅಂದ ಹಾಗೆ ಕೋವಿಡ್ 19 ವ್ಯಾಪಕವಾಗಿ ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಅಸ್ಸಾಂನಲ್ಲೂ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವ ಮೂಲಕ ಕೋವಿಡ್ 19 ವೈರಸ್ ಹರಡುವುದನ್ನು ತಡೆಹಿಡಿಯಬಹುದಾಗಿದೆ.