ಹೊಸ ದಿಲ್ಲಿ: ಕೊರೊನಾ ವೈರಸ್ ಅಬ್ಬರ ಮಧ್ಯೆಯೂ, ಪ್ರಧಾನಿ ನರೇಂದ್ರ ಮೋದಿ ತಮ್ಮ ಕ್ಷೇತ್ರದ ಮತದಾರರೊಂದಿಗೆ ಸಂಪರ್ಕ ಸಾಧಿಸುವಲ್ಲಿ ಯಶಸ್ವಿಯಾಗಿದ್ದರೆ. ವಾರಣಾಸಿ ಲೋಕಸಭಾ ಕ್ಷೇತ್ರದ ಆಯ್ದ ಮತದಾರರೊಂದಿಗೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ದೇಶಾದ್ಯಂತ ಲಾಕ್ಡೌನ್ ಘೋಷಣೆಯಾದ ಬಳಿಕ, ಪ್ರಧಾನಿ ಮೋದಿ ನಡೆಸುತ್ತಿರುವ ಮೊದಲ ವಿಡಿಯೋ ಕಾನ್ಫರೆನ್ಸ್ ಇದಾಗಿದೆ. ಈ ವೇಳೆ ಮಾತನಾಡಿದ ಪ್ರಧಾನಿ ಮೋದಿ, ಮಹಾಭಾರತ ಯುದ್ಧ 18 ದಿನ ನಡೆಯಿತು, ಈ ಸಮರ 12 ದಿನ ನಡೆಯಬೇಕಿದೆ, ದೇಶ ಗೆಲ್ಲೋದೇ ನಮ್ಮ ಗುರಿ ಎಂದು ಪ್ರಧಾನಿ ಹೇಳಿದ್ಧಾರೆ.
ಮಾರ್ಚ್ 25 ರಿಂದ ಚೈತ್ರ ನವರಾತ್ರಿ ಆರಂಭವಾಗಿದೆ. ಈ ಸಂದರ್ಭದಲ್ಲಿ ಉತ್ತರ ಭಾರತದಾದ್ಯಂತ ಜನರು ಪೂಜಾ ಕೈಂಕರ್ಯಗಳಲ್ಲಿ ತೊಡಗುತ್ತಾರೆ. ಆದ್ರೆ, ಈ ಬಾರಿ ಆ ರೀತಿ ಮಾಡಲು ಸಾಧ್ಯವಾಗುತ್ತಿಲ್ಲ. ದೇವರು ನಿಮಗೆ ಒಳ್ಳೆಯದನ್ನು ಮಾಡಲಿ, ದೇಶವು ಕೊರೊನಾ ವೈರಸ್ ವಿರುದ್ಧ ಗೆಲುವು ಸಾಧಿಸಲಿ ಎಂದು ಬೇಡಿಕೊಳ್ತೇನೆ ಎಂದು ಪ್ರಧಾನಿ ಮೋದಿ ಈ ವೇಳೆ ತಮ್ಮ ಕ್ಷೇತ್ರದ ಮತದಾರರಿಗೆ ಹೇಳಿದರು.
ಈ ಸಂದರ್ಭದಲ್ಲಿ ನಾನು ನಿಮ್ಮೊಂದಿಗೆ ಇರಬೇಕಿತ್ತು ಎಂದು ಹೇಳಿದ ಪ್ರಧಾನಿ ಮೋದಿ, ದಿಲ್ಲಿಯಲ್ಲಿ ಸಾಕಷ್ಟು ಕೆಲಸ ಕಾರ್ಯಗಳಿವೆ. ಆದ್ರೂ ವಾರಣಾಸಿ ವಿಚಾರವಾಗಿ ತಮ್ಮ ಸಹೋದ್ಯೋಗಿಗಳಿಂದ ನಿರಂತರವಾಗಿ ಮಾಹಿತಿ ಪಡೆಯುತ್ತಿರುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿದರು.
ಕೊರೊನಾ ವೈರಸ್ನಿಂದ ದೇಶವೇ ಸ್ತಬ್ಧ: ಬಡವರಿಗೆ ಉಚಿತ ಊಟ ವಿತರಿಸುತ್ತಿದ್ದಾರೆ ಪೊಲೀಸರು..!
ಅಫ್ಘಾನಿಸ್ತಾನದ ಕಾಬೂಲ್ನಲ್ಲಿ ಗುರುದ್ವಾರದ ಮೇಲೆ ನಡೆದ ಉಗ್ರಗಾಮಿಗಳ ದಾಳಿ ಬಗ್ಗೆ ಪ್ರಸ್ತಾಪಿಸಿದ ಪ್ರಧಾನಿ ಮೋದಿ, ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದರು.
ಕೊರೊನಾ ಎಫೆಕ್ಟ್: ರೇಷ್ಮೆ ಬೆಳೆಗಾರರ ನೆರವಿಗೆ ಬರಲು ಬಿಎಸ್ವೈಗೆ ಡಿಕೆಶಿ ಪತ್ರ
ಮಾರ್ಚ್ 25 ರಿಂದ ಚೈತ್ರ ನವರಾತ್ರಿ ಆರಂಭವಾಗಿದೆ. ಈ ಸಂದರ್ಭದಲ್ಲಿ ಉತ್ತರ ಭಾರತದಾದ್ಯಂತ ಜನರು ಪೂಜಾ ಕೈಂಕರ್ಯಗಳಲ್ಲಿ ತೊಡಗುತ್ತಾರೆ. ಆದ್ರೆ, ಈ ಬಾರಿ ಆ ರೀತಿ ಮಾಡಲು ಸಾಧ್ಯವಾಗುತ್ತಿಲ್ಲ. ದೇವರು ನಿಮಗೆ ಒಳ್ಳೆಯದನ್ನು ಮಾಡಲಿ, ದೇಶವು ಕೊರೊನಾ ವೈರಸ್ ವಿರುದ್ಧ ಗೆಲುವು ಸಾಧಿಸಲಿ ಎಂದು ಬೇಡಿಕೊಳ್ತೇನೆ ಎಂದು ಪ್ರಧಾನಿ ಮೋದಿ ಈ ವೇಳೆ ತಮ್ಮ ಕ್ಷೇತ್ರದ ಮತದಾರರಿಗೆ ಹೇಳಿದರು.
ಈ ಸಂದರ್ಭದಲ್ಲಿ ನಾನು ನಿಮ್ಮೊಂದಿಗೆ ಇರಬೇಕಿತ್ತು ಎಂದು ಹೇಳಿದ ಪ್ರಧಾನಿ ಮೋದಿ, ದಿಲ್ಲಿಯಲ್ಲಿ ಸಾಕಷ್ಟು ಕೆಲಸ ಕಾರ್ಯಗಳಿವೆ. ಆದ್ರೂ ವಾರಣಾಸಿ ವಿಚಾರವಾಗಿ ತಮ್ಮ ಸಹೋದ್ಯೋಗಿಗಳಿಂದ ನಿರಂತರವಾಗಿ ಮಾಹಿತಿ ಪಡೆಯುತ್ತಿರುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿದರು.
ಕೊರೊನಾ ವೈರಸ್ನಿಂದ ದೇಶವೇ ಸ್ತಬ್ಧ: ಬಡವರಿಗೆ ಉಚಿತ ಊಟ ವಿತರಿಸುತ್ತಿದ್ದಾರೆ ಪೊಲೀಸರು..!
ಅಫ್ಘಾನಿಸ್ತಾನದ ಕಾಬೂಲ್ನಲ್ಲಿ ಗುರುದ್ವಾರದ ಮೇಲೆ ನಡೆದ ಉಗ್ರಗಾಮಿಗಳ ದಾಳಿ ಬಗ್ಗೆ ಪ್ರಸ್ತಾಪಿಸಿದ ಪ್ರಧಾನಿ ಮೋದಿ, ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದರು.
ಕೊರೊನಾ ಎಫೆಕ್ಟ್: ರೇಷ್ಮೆ ಬೆಳೆಗಾರರ ನೆರವಿಗೆ ಬರಲು ಬಿಎಸ್ವೈಗೆ ಡಿಕೆಶಿ ಪತ್ರ