ಹೊಸದಿಲ್ಲಿ: ಮೇ.3 ರ ನಂತರ ಕೋವಿಡ್-19 ಲಾಕ್ಡೌನ್ ಅನ್ನು ವಿಸ್ತರಿಸಬೇಕೆಂದು ಆಗ್ರಹಿಸಿರುವ ಮೇಘಾಲಯಕ್ಕೆ ಒಡಿಶಾ ಹಾಗೂ ಗೋವಾ ರಾಜ್ಯಗಳು ಬೆಂಬಲ ಸೂಚಿಸಿವೆ. ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫೆರೆನ್ಸ್ ಮೂಲಕ ಕೊರೊನಾ ವೈರಸ್ ಕುರಿತು ಚರ್ಚೆ ಮಾಡುವ ವೇಳೆ ಮೇಘಾಲಯ ಈ ಬೇಡಿಕೆಯನ್ನು ಇಟ್ಟಿದೆ. "ಕೊರೊನಾ ವೈರಸ್ ಲಾಕ್ಡೌನ್ ಅನ್ನು ವಿಸ್ತರಿಸಬೇಕು. ಇಲ್ಲವಾದಲ್ಲಿ ಒಡಿಶಾದಲ್ಲಿ ಮಾರಣಾಂತಿಕ ವೈರಸ್ ಅನ್ನು ನಿಯಂತ್ರಿಸಲು ಸಾಧ್ಯವಾಗುವುದಿಲ್ಲ. ಇನ್ನೂ ಒಂದು ತಿಂಗಳು ಲಾಕ್ಡೌನ್ ಮುಂದುವರಿಸಿದರೆ ಮಾರಣಾಂತಿಕ ಸೋಂಕಿನ ಬಗ್ಗೆ ಒಂದು ಸ್ಪಷ್ಟ ಚಿತ್ರಣ ಮೂಡಲಿದೆ," ಎಂದು ಒಡಿಶಾ ಆರೋಗ್ಯ ಸಚಿವ ನಬಾ ದಾಸ್ ಅವರು ಮುಖ್ಯಮಂತ್ರಿ ನವೀನ್ ಪಾಟ್ನಯಾಕ್ ಅವರೊಂದಿಗೆ ವಿಡಿಯೋ ಕಾನ್ಫೆರೆನ್ಸ್ನಲ್ಲಿ ಆಗ್ರಹಿಸಿದ್ದಾರೆ.
ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವತ್ ಕೂಡ ಲಾಕ್ಡೌನ್ ವಿಸ್ತರಿಸಬೇಕು ಎಂದು ಹೇಳಿದ್ದು, ಇದರ ನಡುವೆ ರಾಜ್ಯದ ವ್ಯಾಪ್ತಿಯಲ್ಲಿ ಆರ್ಥಿಕ ಚಟುವಟಿಕೆಗಳಿಗೆ ವಿನಾಯಿತಿ ನೀಡಬೇಕು ಎಂದು ಪಟ್ಟು ಹಿಡಿದಿದ್ದಾರೆ. ಇವರ ಮಾತಿಗೆ ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಧನಿಗೂಡಿದ್ದಾರೆ.
ಕೊರೊನಾ ವಿರುದ್ಧದ ಹೋರಾಟ ಜನತಾ ಚಳುವಳಿಯಾಗಿ ಮಾರ್ಪಟ್ಟಿದೆ: ಪ್ರಧಾನಿ ಮೋದಿ
"ಲಾಕ್ಡೌನ್ ವಿಸ್ತರಣೆಯಾಗಲಿದೆ ಎಂಬ ಬಗ್ಗೆ ನಂಬಿಕೆ ಇದೆ. ಸದ್ಯದಲ್ಲೇ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆಯಲಾಗುವುದು. ಆರ್ಥಿಕ ಚಟುವಟಿಕೆಗಳು ರಾಜ್ಯದ ವ್ಯಾಪ್ತಿಯಲ್ಲಿ ನಡೆಯಬೇಕು. ಆದರೆ, ಖಂಡಿತವಾಗಿಯೂ ರಾಜ್ಯದ ಗಡಿಭಾಗವನ್ನು ಸೀಲ್ಡೌನ್ ಮಾಡಲೇಬೇಕು," ಎಂದು ಪ್ರಮೋದ್ ಸಾವತ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಮೇಘಾಲಯ ಮುಖ್ಯಮಂತ್ರಿ ಕೊರ್ನಾಡ್ ಸಂಗ್ಮಾ ಅವರು ಕೂಡ ಮೇ.3ರ ಬಳಿಕ ಲಾಕ್ಡೌನ್ ವಿಸ್ತರಿಸಲು ಬೆಂಬಲ ವ್ಯಕ್ತಪಡಿಸಿದ್ದಾರೆ. ಆದರೆ, ರಾಜ್ಯದಲ್ಲಿ ಕೊರೊನಾ ವೈರಸ್ ಪ್ರಕರಣಗಳ ಆಧಾರದ ಮೇಲೆ ಜಿಲ್ಲೆಗಳಲ್ಲಿ ಚಟುವಟಿಕೆಗಳಿಗೆ ಅವಕಾಶ ಕಲ್ಪಿಸಬೇಕು ಎಂದಿದ್ದಾರೆ.
ದೇಶದಲ್ಲಿ ಸ್ವಲ್ಪ ಮಟ್ಟಿಗೆ ತಣ್ಣಗಾದ ಕೊರೊನಾ, ಸೋಂಕು ಹೆಚ್ಚಳ ಶೇ. 6ಕ್ಕೆ ಇಳಿಕೆ
"ವಿಡಿಯೋ ಕಾನ್ಫೆರೆನ್ಸ್ನಲ್ಲಿ ಗೌರವಾನ್ವಿತ ಪ್ರಧಾನ ಮಂತಿ ನರೇಂದ್ರ ಮೋದಿ ಜೀ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಜೀ ಮೇ.3 ರ ಬಳಿಕ ಲಾಕ್ಡೌನ್ ವಿಸ್ತರಿಸಬೇಕು. ಜತೆಗೆ, ಗ್ರೀನ್ ಝೋನ್ ಅಥವಾ ಕೊರೊನಾ ವೈರಸ್ ಇಲ್ಲದ ಜಿಲ್ಲೆಗಳಿಗೆ ಆರ್ಥಿಕ ಚಟುವಟಿಕೆಗಳಿಗೆ ವಿನಾಯಿತಿ ನೀಡಬೇಕೆಂದು ಒತ್ತಾಯ ಮಾಡಿದ್ದರು," ಇದನ್ನು ಸಂಗ್ಮಾ ಟ್ವೀಟ್ ಮಾಡಿದ್ದಾರೆ.
ಎರಡನೇ ಬಾರಿ ವಿಧಿಸಿದ್ದ ಲಾಕ್ಡೌನ್ ಮುಕ್ತಾಯವಾಗಲು ಇನ್ನೂ ಒಂದು ವಾರ ಬಾಕಿ ಇರುವಾಗಲೇ ಪ್ರಧಾನ ಮೋದಿ, ಕೊರೊನಾ ವೈರಸ್ ಬಗ್ಗೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫೆರೆನ್ಸ್ ಮೂಲಕ ಚರ್ಚೆ ನಡೆಸಿದ್ದಾರೆ.
ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವತ್ ಕೂಡ ಲಾಕ್ಡೌನ್ ವಿಸ್ತರಿಸಬೇಕು ಎಂದು ಹೇಳಿದ್ದು, ಇದರ ನಡುವೆ ರಾಜ್ಯದ ವ್ಯಾಪ್ತಿಯಲ್ಲಿ ಆರ್ಥಿಕ ಚಟುವಟಿಕೆಗಳಿಗೆ ವಿನಾಯಿತಿ ನೀಡಬೇಕು ಎಂದು ಪಟ್ಟು ಹಿಡಿದಿದ್ದಾರೆ. ಇವರ ಮಾತಿಗೆ ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಧನಿಗೂಡಿದ್ದಾರೆ.
ಕೊರೊನಾ ವಿರುದ್ಧದ ಹೋರಾಟ ಜನತಾ ಚಳುವಳಿಯಾಗಿ ಮಾರ್ಪಟ್ಟಿದೆ: ಪ್ರಧಾನಿ ಮೋದಿ
"ಲಾಕ್ಡೌನ್ ವಿಸ್ತರಣೆಯಾಗಲಿದೆ ಎಂಬ ಬಗ್ಗೆ ನಂಬಿಕೆ ಇದೆ. ಸದ್ಯದಲ್ಲೇ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆಯಲಾಗುವುದು. ಆರ್ಥಿಕ ಚಟುವಟಿಕೆಗಳು ರಾಜ್ಯದ ವ್ಯಾಪ್ತಿಯಲ್ಲಿ ನಡೆಯಬೇಕು. ಆದರೆ, ಖಂಡಿತವಾಗಿಯೂ ರಾಜ್ಯದ ಗಡಿಭಾಗವನ್ನು ಸೀಲ್ಡೌನ್ ಮಾಡಲೇಬೇಕು," ಎಂದು ಪ್ರಮೋದ್ ಸಾವತ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಮೇಘಾಲಯ ಮುಖ್ಯಮಂತ್ರಿ ಕೊರ್ನಾಡ್ ಸಂಗ್ಮಾ ಅವರು ಕೂಡ ಮೇ.3ರ ಬಳಿಕ ಲಾಕ್ಡೌನ್ ವಿಸ್ತರಿಸಲು ಬೆಂಬಲ ವ್ಯಕ್ತಪಡಿಸಿದ್ದಾರೆ. ಆದರೆ, ರಾಜ್ಯದಲ್ಲಿ ಕೊರೊನಾ ವೈರಸ್ ಪ್ರಕರಣಗಳ ಆಧಾರದ ಮೇಲೆ ಜಿಲ್ಲೆಗಳಲ್ಲಿ ಚಟುವಟಿಕೆಗಳಿಗೆ ಅವಕಾಶ ಕಲ್ಪಿಸಬೇಕು ಎಂದಿದ್ದಾರೆ.
ದೇಶದಲ್ಲಿ ಸ್ವಲ್ಪ ಮಟ್ಟಿಗೆ ತಣ್ಣಗಾದ ಕೊರೊನಾ, ಸೋಂಕು ಹೆಚ್ಚಳ ಶೇ. 6ಕ್ಕೆ ಇಳಿಕೆ
"ವಿಡಿಯೋ ಕಾನ್ಫೆರೆನ್ಸ್ನಲ್ಲಿ ಗೌರವಾನ್ವಿತ ಪ್ರಧಾನ ಮಂತಿ ನರೇಂದ್ರ ಮೋದಿ ಜೀ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಜೀ ಮೇ.3 ರ ಬಳಿಕ ಲಾಕ್ಡೌನ್ ವಿಸ್ತರಿಸಬೇಕು. ಜತೆಗೆ, ಗ್ರೀನ್ ಝೋನ್ ಅಥವಾ ಕೊರೊನಾ ವೈರಸ್ ಇಲ್ಲದ ಜಿಲ್ಲೆಗಳಿಗೆ ಆರ್ಥಿಕ ಚಟುವಟಿಕೆಗಳಿಗೆ ವಿನಾಯಿತಿ ನೀಡಬೇಕೆಂದು ಒತ್ತಾಯ ಮಾಡಿದ್ದರು," ಇದನ್ನು ಸಂಗ್ಮಾ ಟ್ವೀಟ್ ಮಾಡಿದ್ದಾರೆ.
ಎರಡನೇ ಬಾರಿ ವಿಧಿಸಿದ್ದ ಲಾಕ್ಡೌನ್ ಮುಕ್ತಾಯವಾಗಲು ಇನ್ನೂ ಒಂದು ವಾರ ಬಾಕಿ ಇರುವಾಗಲೇ ಪ್ರಧಾನ ಮೋದಿ, ಕೊರೊನಾ ವೈರಸ್ ಬಗ್ಗೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫೆರೆನ್ಸ್ ಮೂಲಕ ಚರ್ಚೆ ನಡೆಸಿದ್ದಾರೆ.