ಆ್ಯಪ್ನಗರ

ಕಾಂಗ್ರೆಸ್‌ ನಾಯಕನಿಂದ ಲಾಕ್‌ಡೌನ್‌ ಉಲ್ಲಂಘನೆ, ರೈತರನ್ನು ಸೇರಿಸಿ ಭಾಷಣ ಬಿಗಿದ ಸುರ್ಜೆವಾಲ

ಕೇಂದ್ರ ಸರಕಾರ ಕೊರೊನಾ ನಿಯಂತ್ರಣಕ್ಕೆ ಲಾಕ್‌ಡೌನ್‌ ಘೋಷಿಸಿದ್ದು, ಸಾಮಾಜಿಕ ಅಂತರ ನಿಯಮಗಳನ್ನು ಜಾರಿಗೆ ತಂದಿದೆ. ಜನಸಾಮಾನ್ಯರು ಈ ಲಾಕ್‌ಡೌನ್‌ನ್ನು ತಮಗೆ ಎಷ್ಟೇ ಕಷ್ಟ ಆದ್ರೂ ಪಾಲಿಸುತ್ತಿದ್ದಾರೆ. ಆದರೆ, ರಾಜಕೀಯ ನಾಯಕರು ಮಾತ್ರ ಲಾಕ್‌ಡೌನ್‌ಗೆ ಕ್ಯಾರೆ ಎನ್ನುತ್ತಿಲ್ಲ.

ANI 22 Apr 2020, 10:49 pm
ಚಂಡೀಗಡ: ಪ್ರಮುಖ ಘಟನೆಯೊಂದರಲ್ಲಿ ಕಾಂಗ್ರೆಸ್‌ ವಕ್ತಾರ ರಣದೀಪ್‌ ಸುರ್ಜೇವಾಲ ಲಾಕ್‌ಡೌನ್‌ ಉಲ್ಲಂಘಿಸಿದ್ದಾರೆ. ಹರಿಯಾಣದ ಜಿಂದ್‌ನಲ್ಲಿ ನೂರಾರು ರೈತರು ಸೇರಿದ್ದ ಕಾರ್ಯಕ್ರಮದಲ್ಲಿ ರಣದೀಪ್‌ ಸುರ್ಜೇವಾಲ ಬುಧವಾರ ಮಾತನಾಡಿ ಲಾಕ್‌ಡೌನ್‌ ಹಾಗೂ ಸಾಮಾಜಿಕ ಅಂತರದ ನಿಯಮ ಉಲ್ಲಂಘಿಸಿದ್ದಾರೆ. ಮಂಗಳವಾರ ಐಎನ್‌ಎಲ್‌ಡಿಯ ಅಭಯ್‌ ಚೌಟಾಲಾ ಕೂಡ ಫಥೇಬಾದ್‌ ಮಾರುಕಟ್ಟೆಯಲ್ಲಿ ಬಹಳಷ್ಟು ಸಂಖ್ಯೆಯಲ್ಲಿ ಸೇರಿದ್ದ ರೈತರನ್ನುದ್ದೇಶಿಸಿ ಮಾತನಾಡಿದ ಘಟನೆಯ ಮರುದಿನವೇ ಈ ಘಟನೆ ನಡೆದಿದೆ.
Vijaya Karnataka Web Randeep Surjewala


ಸುರ್ಜೇವಾಲ ಹರಿಯಾಣದ ಬಿಜೆಪಿ ಸರಕಾರದ ವಿರುದ್ಧ ತಮ್ಮ ಭಾಷಣದಲ್ಲಿ ಕಿಡಿಕಾರಿದ್ದಾರೆ. ಈ ಸರಕಾರ ರೈತರ ವಿರುದ್ಧವಾಗಿದೆ ಎಂದು ಲಾಕ್‌ಡೌನ್‌ ಉಲ್ಲಂಘಿಸಿ ಬಹಳಷ್ಟು ಸಂಖ್ಯೆಯಲ್ಲಿ ಸೇರಿದ್ದ ರೈತರಿಗೆ ಹೇಳಿರುವ ವಿಡಿಯೋ ಈಗ ವೈರಲ್‌ ಆಗಿದೆ.

ಬಿಜೆಪಿ ವಕ್ತಾರ ಗೌರವ್‌ ಭಾಟಿಯಾ ಘಟನೆಯನ್ನು ಖಂಡಿಸಿದ್ದು, ಸೋನಿಯಾ ಗಾಂಧಿ ಮಧ್ಯಪ್ರವೇಶಕ್ಕೆ ಒತ್ತಾಯಿಸಿದ್ದಾರೆ. “ಕಾಂಗ್ರೆಸ್‌ ನಾಯಕನ ಈ ಬೇಜವಾಬ್ದಾರಿ ನಡೆಯಿಂದ ಶಾಕ್‌ ಆಗಿದೆ. ಇದು ಖಂಡಿಸುವಂತದ್ದು, ಸೋನಿಯಾ ಗಾಂಧಿ ಮಧ್ಯ ಪ್ರವೇಶಿಸಿ ಸುರ್ಜೇವಾಲ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ನಾನು ಕೇಳುತ್ತೇನೆ” ಎಂದು ಅವರು ಹೇಳಿದ್ದಾರೆ.

ಸುಗ್ರೀವಾಜ್ಞೆ ಹೊರಡಿಸಿ ಕೆಲವೇ ಗಂಟೆಗಳಲ್ಲಿ ಮಧ್ಯಪ್ರದೇಶದಲ್ಲಿ ವೈದ್ಯರು, ಪೊಲೀಸರ ಮೇಲೆ ಹಲ್ಲೆ

ಇನ್ನು, ಐಎನ್‌ಎಲ್‌ಡಿ ನಾಯಕ ಅಭಯ್‌ ಚೌಟಾಲ ಕೂಡ ಮಂಗಳವಾರ ಫಥೇಬಾದ್‌ ಮಂಡಿಯಲ್ಲಿ ಬಹಳಷ್ಟು ಸಂಖ್ಯೆಯಲ್ಲಿ ಸೇರಿದ್ದ ರೈತರಿಗೆ ಭಾಷಣ ಮಾಡಿದ್ದರು. ಈ ಮೂಲಕ ಲಾಕ್‌ಡೌನ್‌ ಹಾಗೂ ಸಾಮಾಜಿಕ ಅಂತರದ ನಿಯಮಗಳನ್ನು ಸ್ಪಷ್ಟವಾಗಿ ಉಲ್ಲಂಘಿಸಿದ್ದರು. ಕೊರೊನಾ ಬಿಕ್ಕಟ್ಟಿನಲ್ಲಿ ರೈತರಿಗಾಗುವ ಸಮಸ್ಯೆಗಳನ್ನು ಸರಕಾರದ ಗಮನಕ್ಕೆ ತರಲಾಗುತ್ತದೆ ಎಂದು ಹೇಳುವುದಕ್ಕೆ ಅಷ್ಟೊಂದು ದೊಡ್ಡ ಸಭೆಯನ್ನು ಚೌಟಾಲ ಕರೆದಿದ್ದರು.

ಬೆಂಗಳೂರಿನಲ್ಲಿ ಕೊರೊನಾ ವಾರಿಯರ್ಸ್‌ ಮೇಲೆ ದಾಳಿ, ಪಾದರಾಯನಪುರದಲ್ಲಿ ಉದ್ವಿಗ್ನ ಪರಿಸ್ಥಿತಿ

ಚೌಟಾಲ ಭಾಷಣಕ್ಕೆ ಸಂಬಂಧಿಸಿದಂತೆ ಹರಿಯಾಣ ಮುಖ್ಯಮಂತ್ರಿ ಮನೋಹರ್‌ ಲಾಲ್‌ ಕಟ್ಟರ್‌ ವರದಿ ನೀಡುವಂತೆ ಸೂಚಿಸಿದ್ದಾರೆ. ಇದರ ಜೊತೆ ಅಲ್ಲಿನ ಗೃಹ ಸಚಿವ ಅನಿಲ್‌ ವಿಜು ಕೂಡ ಸ್ಥಳೀಯ ಆಡಳಿತದಿಂದ ವರದಿ ಕೇಳಿದ್ದು, ಕ್ರಮ ತೆಗೆದುಕೊಳ್ಳುವ ಮಾತುಗಳನ್ನು ಆಡಿದ್ದಾರೆ.

ಕೊರೊನಾ ನಿಯಂತ್ರಣದಲ್ಲಿ ಭಾರತ ಮುಂದೆ, ಮೋದಿ ಕಾರ್ಯವೈಖರಿಗೆ ಬಿಲ್‌ಗೇಟ್ಸ್‌ ಮೆಚ್ಚುಗೆ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ