ಆ್ಯಪ್ನಗರ

ಸೈನಿಕರ ಮನೋಬಲ ವೃದ್ಧಿ: ಮೋದಿ ಲಡಾಖ್ ಭೇಟಿಗೆ ರಾಜನಾಥ್ ಸಿಂಗ್ ಪ್ರಶಂಸೆ!

ಪ್ರಧಾನಿ ಮೋದಿ ಅವರ ಅಚ್ಚರಿಯ ಲಡಾಖ್ ಭೇಟಿಗೆ ಪ್ರಶಂಸೆ ವ್ಯಕ್ತಪಡಿಸಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಪ್ರಧಾನಿ ಮೋದಿ ಭೇಟಿಯಿಂದ ಸೈನಿಕರ ಮನೋಬಲ ವೃದ್ಧಿಯಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

Vijaya Karnataka Web 3 Jul 2020, 1:22 pm
ನವದೆಹಲಿ: ಪ್ರಧಾನಿ ಮೋದಿ ಅವರ ಅಚ್ಚರಿಯ ಲಡಾಖ್ ಭೇಟಿಗೆ ಪ್ರಶಂಸೆ ವ್ಯಕ್ತಪಡಿಸಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಪ್ರಧಾನಿ ಮೋದಿ ಭೇಟಿಯಿಂದ ಸೈನಿಕರ ಮನೋಬಲ ವೃದ್ಧಿಯಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
Vijaya Karnataka Web Modi
ಪ್ರಧಾನಿ ಮೋದಿ ಲಡಾಖ್ ಭೇಟಿ


ಲಡಾಖ್ ಮುಂಚೂಣಿ ಸೇನಾ ನೆಲೆಗೆ ಭೇಟಿ ನೀಡಿದ ಪ್ರಧಾನಿ ಮೋದಿ, ಸೈನಿಕರೊಂದಿಗೆ ಉಭಯ ಕುಶೋಲಪರಿ ನಡೆಸಿರುವುದು ಅತ್ಯಂತ ಶ್ಲಾಘನೀಯ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.

ಪ್ರಧಾನಿ ಮೋದಿ ಲಡಾಖ್ ಭೇಟಿ ಗೌಪ್ಯವಾಗಿ ಇಟ್ಟಿದ್ದೇಕೆ?: ಅಚ್ಚರಿಯಲ್ಲಿ ಮುಳುಗಿದ ಚೀನಾ!

ಲಡಾಖ್ ಗಡಿ ಘರ್ಷಣೆ ಬಳಿಕ ಸೈನಿಕರಲ್ಲಿ ದು:ಖ ಮತ್ತು ಆಕ್ರೋಶ ಮಡುಗಟ್ಟಿತ್ತು. ಆದರೆ ಪ್ರಧಾನಿ ಮೋದಿ ಅವರ ಭೇಟಿಯಿಂದಾಗಿ ಹೊಸ ಚೈತನ್ಯ ಎದ್ದು ಕಾಣುತ್ತಿದೆ ಎಂದು ರಾಜನಾಥ್ ಸಿಂಗ್ ಸಂತಸ ವ್ಯಕ್ತಪಡಿಸಿದ್ದಾರೆ.


ಲಡಾಖ್‌ಗೆ ಅಚ್ಚರಿಯ ಭೇಟಿ ನೀಡಿದ ಪ್ರಧಾನಿ ಮೋದಿ: ಗಡಿ ವಸ್ತುಸ್ಥಿತಿ ಅವಲೋಕನ!

ಪ್ರಧಾನಿ ಮೋದಿ ಇಂದು(ಶುಕ್ರವಾರ) ಲಡಾಖ್ ಮುಂಚೂಣಿ ಸೇನಾ ನೆಲೆಗಳಿಗೆ ಅಚ್ಚರಿಯ ಭೇಟಿ ನೀಡಿದ್ದು, ಹಿರಿಯ ಸೇನಾಧಿಕಾರಿಗಳೊಂದಿಗೆ ಗಡಿ ವಸ್ತುಸ್ಥಿತಿ ಮತ್ತು ಸೇನಾ ಕಾರ್ಯತಂತ್ರಗಳ ಕುರಿತು ಚರ್ಚಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ