ಆ್ಯಪ್ನಗರ

ಶೀಲಾ ದೀಕ್ಷಿತ್‌ ನಿಧನಕ್ಕೆ ಗಣ್ಯರ ಸಂತಾಪ

ದಿಲ್ಲಿ ಮಾಜಿ ಸಿಎಂ, ಕಾಂಗ್ರೆಸ್‌ ಹಿರಿಯ ನಾಯಕಿ ಹಠಾತ್‌ ನಿಧನಕ್ಕೆ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಮೋದಿ, ರಾಷ್ಟ್ರಪತಿ ರಾಮ್‌ನಾಥ್‌ ಕೋವಿಂದ್‌, ರಾಹುಲ್‌ ಗಾಂಧಿ ಸೇರಿದಂತೆ ಕಾಂಗ್ರೆಸ್‌ ನಾಯಕರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

TIMESOFINDIA.COM 20 Jul 2019, 5:54 pm
ಹೊಸದಿಲ್ಲಿ: ದಿಲ್ಲಿ ಮಾಜಿ ಸಿಎಂ, ಕಾಂಗ್ರೆಸ್‌ನ ಹಿರಿಯ ನಾಯಕಿ ಶೀಲಾ ದೀಕ್ಷಿತ್‌ ನಿಧನಕ್ಕೆ ಅನೇಕ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
Vijaya Karnataka Web sheila2


ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌, ಪ್ರಧಾನಿ ನರೇಂದ್ರ ಮೋದಿ, ದಿಲ್ಲಿ ಸಿಎಂ ಅರವಿಂದ ಕೇಜ್ರಿವಾಲ್‌, ಕಾಂಗ್ರೆಸ್‌ ನಾಯಕರಾದ ಕೆಸಿ ವೇಣುಗೋಪಾಲ್‌, ರಾಹುಲ್‌ ಗಾಂಧಿ, ಗೃಹ ಸಚಿವ ಎಂ ಬಿ ಪಾಟೀಲ್‌ ಸೇರಿದಂತೆ ಅನೇಕ ನಾಯಕರು ಕಂಬನಿ ಮಿಡಿದಿದ್ದಾರೆ. ಅಷ್ಟೇ ಅಲ್ಲದೆ ಭಾರತ ಕ್ರಿಕೆಟ್‌ ತಂಡದ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್‌, ನಟ ಅಕ್ಷಯ್‌ ಕುಮಾರ್‌ ಸಂತಾಪ ವ್ಯಕ್ತಪಡಿಸಿದ್ದಾರೆ.

ಶೀಲಾ ದೀಕ್ಷಿತ್ ಅವರು ಈ ದೇಶ ಕಂಡ ಅಪ್ರತಿಮ ನಾಯಕಿ. ಅವರ ಆತ್ಮಕ್ಕೆ ಭಗವಂತ ಶಾಂತಿ ನೀಡಲಿ. ದೇವರು ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ತುಂಬಲಿ ಎಂದು ದೆಹಲಿಯ ಮಾಜಿ ಮುಖ್ಯ ಮಂತ್ರಿ ಶೀಲಾ ದೀಕ್ಷಿತ್ ಅವರ ನಿಧನಕ್ಕೆ ಮಾಜಿ ಪ್ರಧಾನಿ ಎಚ್ಡಿ.ದೇವೇಗೌಡ ಸಂತಾಪ ವ್ಯಕ್ತ ಪಡಿಸಿದ್ದಾರೆ.

ಹೃದಯಾಘಾತದಿಂದ ದಿಲ್ಲಿ ಮಾಜಿ ಸಿಎಂ, ಕಾಂಗ್ರೆಸ್‌ ಹಿರಿಯ ನಾಯಕಿ ಶೀಲಾ ದೀಕ್ಷಿತ್‌ ನಿಧನ




ದಿಲ್ಲಿಯ ಸರ್ವಾಂಗೀಣ ಅಭಿವೃದ್ಧಿಗೆ ಶೀಲಾ ದೀಕ್ಷಿತ್‌ ಅವರ ಪಾತ್ರ ಹಿರಿದು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬ ಹಾಗೂ ಬೆಂಬಲಿಗರಿಗೆ ದುಃಖ ತಡೆದುಕೊಳ್ಳುವ ಶಕ್ತಿ ಸಿಗಲಿ ಎಂದು ಮೋದಿ ಟ್ವೀಟ್‌ ಮಾಡಿದ್ದಾರೆ.

ಸಂಸದ ಗೌತಮ್‌ ಗಂಭೀರ್‌, ಬಿಜೆಪಿ ದಿಲ್ಲಿ ಅಧ್ಯಕ್ಷ ಮನೋಜ್‌ ತಿವಾರಿ, ಕೇಂದ್ರ ಗೃಹಸಚಿವ ರಾಜ್‌ನಾಥ್‌ ಸಿಂಗ್‌, ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌, ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವದ್ರಾ ಟ್ವಿಟರ್‌ನಲ್ಲಿ ಸಂತಾಪ ವ್ಯಕ್ತಪಡಿಸಿದ್ದಾರೆ.


ದಿಲ್ಲಿ ಜನತೆ ಶೀಲಾ ದೀಕ್ಷಿತ್‌ ಅವರನ್ನು ಎಂದಿಗೂ ನೆನಪಿನಲ್ಲಿಟ್ಟುಕೊಳ್ಳುತ್ತದೆ. ಅವರ ನಿಧನ ಕಾಂಗ್ರೆಸ್‌ಗೆ ತುಂಬಲಾರದ ನಷ್ಟ. ಅವರ ಸಾವು ಆಘಾತ ತಂದಿದೆ. ಮೂರು ಬಾರಿ ಅವರು ದಿಲ್ಲಿಯನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಿದಿದ್ದರು ಎಂದು ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಹೇಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ