ಆ್ಯಪ್ನಗರ

ರಾಜ್ಯಪಾಲರಿಗೆ ರಾಜೀನಾಮೆ ನೀಡಿದ ಫಡ್ನವಿಸ್‌: ಇಂದು ಸಂಜೆ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ?

ದೇವೇಂದ್ರ ಫಡ್ನವೀಸ್‌ ಅವರು ಮಂಗಳವಾರ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ನೀಡಿದರು. ಮಹಾರಾಷ್ಟ್ರ ರಾಜ್ಯಪಾಲ ಭಗತ್‌ ಸಿಂಗ್‌ ಕೋಶ್ಯಾರ್‌ ಅವರು ಫಡ್ನವೀಸ್‌ ರಾಜೀನಾಮೆಯನ್ನು ಸ್ವೀಕರಿಸಿದರು.

Vijaya Karnataka Web 26 Nov 2019, 5:15 pm
ಮುಂಬಯಿ: ದೇವೇಂದ್ರ ಫಡ್ನವೀಸ್‌ ಅವರು ಮಂಗಳವಾರ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ನೀಡಿದರು. ಮಹಾರಾಷ್ಟ್ರ ರಾಜ್ಯಪಾಲ ಭಗತ್‌ ಸಿಂಗ್‌ ಕೋಶ್ಯಾರ್‌ ಅವರು ಫಡ್ನವೀಸ್‌ ರಾಜೀನಾಮೆಯನ್ನು ಸ್ವೀಕರಿಸಿದರು. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಕುರಿತು ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದ ನಂತರ ರಾಜಭವನಕ್ಕೆ ತೆರಳಿದ ಫಡ್ನವಿಸ್‌ ರಾಜೀನಾಮೆ ನೀಡಿದರು.
Vijaya Karnataka Web devendra fadnavis resigns as maharashtra cm
ರಾಜ್ಯಪಾಲರಿಗೆ ರಾಜೀನಾಮೆ ನೀಡಿದ ಫಡ್ನವಿಸ್‌: ಇಂದು ಸಂಜೆ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ?


ಇಂದು ಸಂಜೆ ತ್ರಿವಳಿ ಮೈತ್ರಿಕೂಟ ನಾಯಕನ ಆಯ್ಕೆ:
ಮಂಗಳವಾರ ಸಂಜೆ ಶಿವಸೇನೆ- ಕಾಂಗ್ರೆಸ್‌ ಮತ್ತು ಎನ್‌ಸಿಪಿ ಮೈತ್ರಿ ಕೂಟ ಪತ್ರಿಕಾಗೋಷ್ಠಿ ನಡೆಸಲಿದೆ. ಇದರಲ್ಲಿ ಜಂಟಿ ಶಾಸಕಾಂಗ ಪಕ್ಷದ ನಾಯಕ ಯಾರೆಂಬುದು ಅನಾವರಣಗೊಳ್ಳಲಿದೆ. ಉದ್ಧವ್‌ ಠಾಕ್ರೆ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗುವ ಎಲ್ಲ ಸಾಧ್ಯತೆಗಳೂ ಇವೆ.




ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ, ಫಡ್ನವಿಸ್‌ ಮತ್ತು ಅಜಿತ್‌ ಪವಾರ್‌ ಇಬ್ಬರೂ ಮಹಾರಾಷ್ಟ್ರ ಜನತೆಯಲ್ಲಿ ಕ್ಷಮೆ ಯಾಚಿಸಬೇಕು ಎಂದು ಕಾಂಗ್ರಸ್‌ ಪಟ್ಟು ಹಿಡಿದಿದೆ. ಬಹುಮತ ಸಾಭೀತುಪಡಿಸಲು ಸಂಖ್ಯಾಬಲ ಇಲ್ಲದಿದ್ದರೂ, ಇವರಿಬ್ಬರೂ ಸುಳ್ಳು ಹೇಳುವ ಮೂಲಕ ಜನತೆಯನ್ನು ವಂಚಿಸಿದ್ದಾರೆ. ಇವರು ಕ್ಷಮೆ ಯಾಚಿಸಬೇಕು ಎಂದು ಕಾಂಗ್ರೆಸ್‌ ಪಕ್ಷದ ವಕ್ತಾರ ರಣದೀಪ್‌ ಸುರ್ಜಾವಾಲಾ ಹೇಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ