ಆ್ಯಪ್ನಗರ

ಹಣ ವರ್ಗಾವಣೆ: ದಿನಕರನ್‌ ವಿಚಾರಣೆ ನಡೆಸಿದ ಕ್ರೈಂ ಬ್ರ್ಯಾಂಚ್‌

ಎರಡು ಎಲೆ ವಿಚಾರದಲ್ಲಿ ಚುನಾವಣಾ ಆಯೋಗ ಅಧಿಕಾರಿಗೆ ಲಂಚ ನೀಡಲು ಮುಂದಾದ ಪಕ್ಷದ ನಾಯಕ ಟಿಟಿವಿ ದಿನಕರನ್‌ ವಿಚಾರಣೆಗೆ ಹಾಜರಾಗಿದ್ದಾರೆ.

ಟೈಮ್ಸ್ ಆಫ್ ಇಂಡಿಯಾ 22 Apr 2017, 9:52 pm
ಹೊಸದಿಲ್ಲಿ: ಎಐಎಡಿಎಂಕೆ ಪಕ್ಷದ ಚಿಹ್ನೆ 'ಎರಡು ಎಲೆ' ವಿಚಾರದಲ್ಲಿ ಚುನಾವಣಾ ಆಯೋಗದ ಅಧಿಕಾರಿಗೆ ಲಂಚ ನೀಡಲು ಮುಂದಾದ ಪಕ್ಷದ ನಾಯಕ ಟಿಟಿವಿ ದಿನಕರನ್‌ ವಿಚಾರಣೆಗೆ ಹಾಜರಾಗಿದ್ದಾರೆ.
Vijaya Karnataka Web dhinakaran appears before delhi police in bribery case
ಹಣ ವರ್ಗಾವಣೆ: ದಿನಕರನ್‌ ವಿಚಾರಣೆ ನಡೆಸಿದ ಕ್ರೈಂ ಬ್ರ್ಯಾಂಚ್‌


ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಶಶಿಕಲಾ ಸಂಬಂಧಿ ದಿನಕರನ್‌ನನ್ನು ಸಹಾಯಕ ಪೊಲೀಸ್ ಆಯುಕ್ತರ ನೇತೃತ್ವದ ತಂಡ ವಿಚಾರಣೆ ನಡೆಸಿದೆ.

'ವಿಚಾರಣೆಯಲ್ಲಿ ಹಣ ವರ್ಗಾವಣೆ, ಸುಕೇಶ್ ಚಂದ್ರಶೇಖರೊಂದಿಗಿನ ಸಂಬಂಧದ ಬಗ್ಗೆ ಹಾಗೂ ಚುನಾವಣಾ ಅಧಿಕಾರಿಗಳನ್ನು ಭೇಟಿ ಮಾಡಿದ ಬಗ್ಗೆ ದಿನಕರನ್‌ ಬಳಿ ಪ್ರಶ್ನಿಸಲಾಗಿದೆ. ಇದಾದ ಬಳಿಕ ಈ ಹೇಳಿಕೆಗಳನ್ನು ತಾಳೆ ಮಾಡಲಾಗುತ್ತದೆ' ಎಂದು ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.

ಮೂಲಗಳ ಪ್ರಕಾರ, ದಿನಕರನ್‌ ಅವರ ಫೋನ್‌ ಕರೆ, ಮೆಸೇಜ್‌, ವಾಟ್ಸಾಪ್‌ ಸೇರಿ ಸಂಪೂರ್ಣ ಮಾಹಿತಿಯನ್ನು ಪರಿಶೀಲಿಸಲಾಗುತ್ತಿದೆ. ಅಲ್ಲದೇ ವಿಚಾರಣೆ ವೇಳೆ ದಿನಕರನ್‌ ವಕೀಲರಿಗೂ ಪ್ರವೇಶ ನಿರಾಕರಿಸಲಾಗುತ್ತದೆ.

ಶನಿವಾರ ವಿಚಾರಣೆಗೆ ಹಾಜರಾಗುವಂತೆ ದಿನಕರನ್ ಅವರಿಗೆ ದೆಹಲಿ ಪೊಲೀಸ್‌ ನೋಟಿಸ್ ನೀಡಿದ್ದರು. ಈ ಹಿನ್ನೆಲೆಯಲ್ಲಿ ದಿನಕರನ್ ದೆಹಲಿಗೆ ಆಗಮಿಸಿದ್ದಾರೆ.

ಈ ಹಿಂದೆ ದಿನಕರನ್​ ವಿಚಾರಣೆಗೆ ಹಾಜರಾಗಲು 4 ದಿನಗಳ ಕಾಲಾವಕಾಶ ಕೋರಿದ್ದರು. ಆದರೆ, ಇದನ್ನು ತಳ್ಳಿ ಹಾಕಿರುವ ಪೊಲೀಸರು ದಿನಕರನ್​ ವಿಚಾರಣೆ ನಡೆಸುತ್ತಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ