ಭಾರತ ಮೇಲಿನ ದಾಳಿಕೋರನ್ನು ಒಪ್ಪಿಸುವಂತೆ ಇಮ್ರಾನ್ ಖಾನ್ಗೆ ಸಲಹೆ ನೀಡಿ ಸಿದ್ದು: ದಿಗ್ವಿಜಯ್ ಸಿಂಗ್
ದೇಶದ ಮೇಲಿನ ದಾಳಿಕೋರರನ್ನು ಭಾರತಕ್ಕೆ ಒಪ್ಪಿಸುವಂತೆ ನಿಮ್ಮ ಗೆಳೆಯ, ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ಗೆ ಸಲಹೆ ನೀಡಿ ಸಿಧು ಎಂದು ದಿಗ್ವಿಜಯ್ ಸಿಂಗ್ ತಿರುಗೇಟು ನೀಡಿದ್ದಾರೆ.
Vijaya Karnataka Web 19 Feb 2019, 7:26 pm
ಹೊಸದಿಲ್ಲಿ: ಪುಲ್ವಾಮಾ ಘಟನೆಯ ನಂತರ ಪಾಕಿಸ್ತಾನ ಪರವಾಗಿ ಮಾತನಾಡಿ ವಿವಾದಕ್ಕೆ ಸಿಲುಕಿರುವ ಕಾಂಗ್ರೆಸ್ನ ನವಜೋತ್ ಸಿಂಗ್ ಸಿಧುಗೆ ಅವರದೇ ಪಕ್ಷದ ಚಾಲಕರು ತರಾಟೆಗೆ ತೆಗೆದುಕೊಂಡಿದ್ದಾರೆ.
ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಸರಣಿ ಟ್ವೀಟ್ ಮಾಡಿ ಸಿಧುಗೆ ಚಾಟಿ ಬೀಸಿದ್ದಾರೆ.
ದೇಶದ ಮೇಲಿನ ದಾಳಿಕೋರರನ್ನು ಭಾರತಕ್ಕೆ ಒಪ್ಪಿಸುವಂತೆ ನಿಮ್ಮ ಗೆಳೆಯ, ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ಗೆ ಸಲಹೆ ನೀಡಿ ಸಿಧು ಎಂದು ದಿಗ್ವಿಜಯ್ ಸಿಂಗ್ ತಿರುಗೇಟು ನೀಡಿದ್ದಾರೆ.
ಪಾಕ್ ಪ್ರಧಾನಿ, ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ದಿಟ್ಟತನ ಪ್ರದರ್ಶಿಸುವ ಸಮಯ ಬಂದಿದೆ. ಭಾರತದ ಮೇಲೆ ಸಮರ ಸಾರಿರುವ ಹಫೀಜ್ ಸಯೀದ್, ಮಸೂದ್ ಅಜರ್ ಮೊದಲಾದ ಸಂಚುಕೋರರನ್ನು ಭಾರತಕ್ಕೆ ಒಪ್ಪಿಸಬೇಕು. ಇದಕ್ಕೆ ನೀವು ಸಲಹೆ ನೀಡಿ ಸಿಧು ಎಂದು ದಿಗ್ವಿಜಯ್ ಟ್ವೀಟ್ ಮಾಡಿದ್ದಾರೆ.
ಮುಂಬರುವ ದಿನಗಳಲ್ಲಿ ಕಾಶ್ಮೀರಿ ಮುಸ್ಲಿಮ್ ಮತ್ತು ಕಾಶ್ಮೀರಿ ಪಂಡಿತರ ನಡುವೆ ಭ್ರಾತೃತ್ವ ಮೂಡುವಂತೆ ನೋಡಿಕೊಳ್ಳಬೇಕಾದ ಜವಾಭ್ದಾರಿ ಬಿಜೆಪಿ, ಕಾಂಗ್ರೆಸ್, ಪಿಡಿಪಿ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಮೇಲಿದೆ ಎಂದು ಅವರು ಹೇಳಿದ್ದಾರೆ.
ಪುಲ್ವಾಮಾ ದಾಳಿಯ ನಂತರ ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ದೇಶಾದ್ಯಂತ ನಡೆಯುತ್ತಿರುವ ದಾಳಿ, ಕಿರುಕುಳ ಬಗ್ಗೆ ದಿಗ್ವಿಜಯ್ ಸಿಂಗ್ ಆತಂಕ ವ್ಯಕ್ತಪಡಿಸಿದ್ದಾರೆ.
ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಸರಣಿ ಟ್ವೀಟ್ ಮಾಡಿ ಸಿಧುಗೆ ಚಾಟಿ ಬೀಸಿದ್ದಾರೆ.
ದೇಶದ ಮೇಲಿನ ದಾಳಿಕೋರರನ್ನು ಭಾರತಕ್ಕೆ ಒಪ್ಪಿಸುವಂತೆ ನಿಮ್ಮ ಗೆಳೆಯ, ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ಗೆ ಸಲಹೆ ನೀಡಿ ಸಿಧು ಎಂದು ದಿಗ್ವಿಜಯ್ ಸಿಂಗ್ ತಿರುಗೇಟು ನೀಡಿದ್ದಾರೆ.
ಪಾಕ್ ಪ್ರಧಾನಿ, ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ದಿಟ್ಟತನ ಪ್ರದರ್ಶಿಸುವ ಸಮಯ ಬಂದಿದೆ. ಭಾರತದ ಮೇಲೆ ಸಮರ ಸಾರಿರುವ ಹಫೀಜ್ ಸಯೀದ್, ಮಸೂದ್ ಅಜರ್ ಮೊದಲಾದ ಸಂಚುಕೋರರನ್ನು ಭಾರತಕ್ಕೆ ಒಪ್ಪಿಸಬೇಕು. ಇದಕ್ಕೆ ನೀವು ಸಲಹೆ ನೀಡಿ ಸಿಧು ಎಂದು ದಿಗ್ವಿಜಯ್ ಟ್ವೀಟ್ ಮಾಡಿದ್ದಾರೆ.
ಮುಂಬರುವ ದಿನಗಳಲ್ಲಿ ಕಾಶ್ಮೀರಿ ಮುಸ್ಲಿಮ್ ಮತ್ತು ಕಾಶ್ಮೀರಿ ಪಂಡಿತರ ನಡುವೆ ಭ್ರಾತೃತ್ವ ಮೂಡುವಂತೆ ನೋಡಿಕೊಳ್ಳಬೇಕಾದ ಜವಾಭ್ದಾರಿ ಬಿಜೆಪಿ, ಕಾಂಗ್ರೆಸ್, ಪಿಡಿಪಿ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಮೇಲಿದೆ ಎಂದು ಅವರು ಹೇಳಿದ್ದಾರೆ.
ಪುಲ್ವಾಮಾ ದಾಳಿಯ ನಂತರ ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ದೇಶಾದ್ಯಂತ ನಡೆಯುತ್ತಿರುವ ದಾಳಿ, ಕಿರುಕುಳ ಬಗ್ಗೆ ದಿಗ್ವಿಜಯ್ ಸಿಂಗ್ ಆತಂಕ ವ್ಯಕ್ತಪಡಿಸಿದ್ದಾರೆ.