ಆ್ಯಪ್ನಗರ

ಡಿಕೆ ಶಿವಕುಮಾರ್‌ ಜಾಮೀನು ಅರ್ಜಿ ವಿಚಾರಣೆ ಗುರುವಾರಕ್ಕೆ ಮುಂದೂಡಿಕೆ

ಮಾಜಿ ಸಚಿವ ಡಿಕೆ ಶಿವಕುಮಾರ್‌ ಕಚೇರಿ, ನಿವಾಸದ ಮೇಲೆ ದಾಳಿ ನಡೆಸಿದಾಗ 300 ಕೋಟಿ ರೂ. ಗಳಿಗೂ ಅಧಿಕ ಅಕ್ರಮ ಆಸ್ತಿ ಪತ್ತೆಯಾಗಿತ್ತು ಎಂದು ಆದಾಯ ತೆರಿಗೆ ಇಲಾಖೆ ಮೂಲಗಳು ಮಾಹಿತಿ ನೀಡಿದ್ದವು.

Vijaya Karnataka Web 18 Sep 2019, 4:18 pm
ಹೊಸದಿಲ್ಲಿ: ಅಕ್ರಮ ಆಸ್ತಿ ಪತ್ತೆ ಪ್ರಕರಣ ಸಂಬಂಧ ಮಾಜಿ ಡಿಕೆ ಶಿವಕುಮಾರ್‌ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆಯನ್ನು ವಿಶೇಷ ನ್ಯಾಯಾಲಯ ಗುರುವಾರಕ್ಕೆ ಮುಂದೂಡಲಾಗಿದೆ.
Vijaya Karnataka Web ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್


ಜಾರಿ ನಿರ್ದೇಶನಾಲಯದ ಪರ ವಕೀಲರು ಆಗಮಿಸದ ಹಿನ್ನೆಲೆಯಲ್ಲಿ ಹೊಸದಿಲ್ಲಿಯ ರೋಸ್ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಾಧೀಶ ಅಜಯ್‌ ಕುಮಾರ್‌ ಕುಹರ್‌ ಜಾಮೀನು ಅರ್ಜಿ ವಿಚಾರಣೆಯನ್ನು ಗುರವಾರಕ್ಕೆ ಮುಂದೂಡಿದರು.

ಜಾರಿ ನಿರ್ದೇಶನಾಲಯದ ಪರ ಕಿರಿಯ ವಕೀಲರು ಮನವಿ ಮಾಡಿದ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಮುಂದೂಡಲಾಯಿತು. ವಿಚಾರಣೆ ಮುಂದೂಡಿದ ಬಳಿಕ ಜಾರಿ ನಿರ್ದೇಶನಾಲಯ ಪರ ವಕೀಲರಾದ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ನಟರಾಜ್‌ ಆಗಮಿಸಿದರು.

ಡಿಕೆ ಶಿವಕುಮಾರ್‌ ಪರ ವಾದ ಮಂಡಿಸಿದ ಅಭಿಷೇಕ್‌ ಮನು ಸಿಂಘ್ವಿ, 7 ಬಾರಿ ಶಾಸಕರಾಗಿರುವ ಡಿಕೆಶಿ. ಅವರನ್ನು ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ ಎಂದು ತಿಳಿಸಿದರು.

ಡಿಕೆ ಶಿವಕುಮಾರ್‌ ಅವರು ಅಫಿಡವಿಟ್‌ನಲ್ಲಿ ಸಂಪೂರ್ಣ ಮಾಹಿತಿ ನೀಡಿದ್ದಾರೆ. ತಪ್ಪು ಮಾಹಿತಿ ನೀಡಿದ್ದರೆ ಅವರು ಅನರ್ಹರಾಗುತ್ತಾರೆ ಎಂದು ಡಿಕೆಶಿ ಪರ ವಕೀಲರು ವಾದಿಸಿದರು.

ಅಫಿಡವಿಟ್‌ನಲ್ಲಿ ಘೋಷಣೆ ಮಾಡಿರುವ ಆಸ್ತಿ ಅಕ್ರಮ ಎಂದು ಬಿಂಬಿಸಲಾಗುತ್ತಿದೆ. ಘೋಷಣೆ ಮಾಡಿರುವ 800 ಕೋಟಿ ರೂ. ಆಸ್ತಿ ಅಕ್ರಮ ಆಸ್ತಿ ಎಂದು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಿಂಬಿಸುತ್ತಿದ್ದಾರೆ ಎಂದು ಸಿಂಘ್ವಿ ವಾದಿಸಿದರು.

ಶರ್ಮಾ ಟ್ರಾವೆಲ್ಸ್‌ ಶರ್ಮಾ ಅವರು ಡಿಕೆ ಶಿವಕುಮಾರ್‌ ಸ್ನೇಹಿತರು. ಅವರ ಬಳಿ ಸಾವಿರಾರು ಬಸ್‌ಗಳಿವೆ. ಅವರು ಪ್ರತಿದಿನ ಕೋಟ್ಯಂತರ ರೂ. ವಹಿವಾಟು ನಡೆಸುತ್ತಿದ್ದಾರೆ. ಇವರ ಖಾತೆಯಿಂದ ಪ್ರತಿದಿನವೂ ಬ್ಯಾಂಕ್‌ ಖಾತೆಗಳಿಂದ ಹಣ ವರ್ಗಾವಣೆ ನಡೆಯುತ್ತದೆ. ಅದನ್ನು ಡಿಕೆ ಶಿವಕುಮಾರ್‌ ಅವರ ಜತೆ ನಂಟು ಹಾಕಿದರೆ ಹೇಗೆ ಎಂದು ವಕೀಲರು ಪ್ರಶ್ನಿಸಿದರು.

ಡಿಕೆ ಶಿವಕುಮಾರ್ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಮಂಗಳವಾರ ವಿಚಾರಣೆ ನಡೆಸಿದ್ದ ವಿಶೇಷ ನ್ಯಾಯಾಲಯ ಡಿಕೆ ಶಿವಕುಮಾರ್ ಅವರರನ್ನು 14 ದಿನಗಳ ಕಾಲ (ಅಕ್ಟೋಬರ್‌ 1ರವರೆಗೆ) ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿತ್ತು.

ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದವರು. ಈ ಸಮುದಾಯದವರು ಕೃಷಿಯನ್ನೇ ಹೆಚ್ಚು ಅವಲಂಬಿತರಾಗಿರುತ್ತಾರೆ. ಹೀಗಾಗಿ ಜಮೀನು ಹೆಚ್ಚು ಮಾಡಿಕೊಂಡಿರುತ್ತಾರೆ ಎಂದು ಜಾತಿ ಆಧಾರದ ವಾದವನ್ನೂ ಅಭಿಷೇಕ್‌ ಮನು ಸಿಂಘ್ವಿ ಮಂಡಿಸಿದರು.

ಡಿಕೆ ಶಿವಕುಮಾರ್‌ ಅವರ ನಿವಾಸ, ಕಚೇರಿಗಳ ಮೇಲೆ ಆಗಸ್ಟ್‌ 1, 2017ರಲ್ಲಿ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿತ್ತು. ಡಿಕೆಶಿಗೆ ಸೇರಿದ್ದ ಒಟ್ಟು 50ಕ್ಕೂ ಹೆಚ್ಚು ಸ್ಥಳಗಳಲ್ಲಿ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿತ್ತು. ಹೊಸದಿಲ್ಲಿಯ ಡಿಕೆಶಿ ನಿವಾಸದ ಮೇಲೂ ದಾಳಿ ನಡೆಸಲಾಗಿತ್ತು. ಈ ಸಂದರ್ಭದಲ್ಲಿ 8.9 ಕೋಟಿ ರೂ. ನಗದು ಪತ್ತೆಯಾಗಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ