ಆ್ಯಪ್ನಗರ

ಡಿಕೆ ಶಿವಕುಮಾರ್‌ಗೆ ಅಧಿಕ ರಕ್ತದೊತ್ತಡ, ಭೇದಿ: ಆಸ್ಪತ್ರೆಗೆ ದಾಖಲು

ಮಾಜಿ ಸಚಿವ ಡಿಕೆ ಶಿವಕುಮಾರ್‌ಗೆ ಸಂಕಷ್ಟಗಳ ಮೇಲೆ ಸಂಕಷ್ಟ ಎದುರಾಗುತ್ತಿದೆ. ಕಳೆದ 10 ದಿನಗಳಿಂದ ಜಾರಿ ನಿರ್ದೇಶನಾಲಯದ ಕಸ್ಟಡಿಯಲ್ಲಿರುವ ಡಿಕೆಶಿ ಈಗ ಅನಾರೋಗ್ಯಪೀಡಿತರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

Vijaya Karnataka Web 12 Sep 2019, 7:21 pm
ಹೊಸದಿಲ್ಲಿ: ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಕಸ್ಟಡಿಯಲ್ಲಿರುವ ಮಾಜಿ ಸಚಿವ ಡಿಕೆ ಶಿವಕುಮಾರ್‌ ಅನಾರೋಗ್ಯಕ್ಕೊಳಗಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
Vijaya Karnataka Web DKShivakumar New


ಒಂದು ಕಡೆ ಪುತ್ರಿ ಐಶ್ವರ್ಯಾರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದರೆ, ಮತ್ತೊಂದೆಡೆ ಖುದ್ದು ಡಿಕೆಶಿ ಅಸ್ವಸ್ಥಗೊಂಡಿದ್ದಾರೆ.

ಸತತ 9ನೇ ದಿನವೂ ಡಿಕೆಶಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಫುಲ್‌ ಡ್ರಿಲ್‌ ಮಾಡಿಸಿದರು. ಬೆಳಗ್ಗೆಯಿಂದ ವಿಚಾರಣೆಗೊಳಪಡಿಸಿದರು.

ಸಂಜೆಯಾಗುತ್ತಿದ್ದಂತೆ ಡಿಕೆ ಶಿವಕುಮಾರ್‌ ರಕ್ತದೊತ್ತಡ ಹೆಚ್ಚಾಯಿತು. ಅಲ್ಲದೇ ಭೇದಿಯಿಂದ ಬಳಲಿದರು. ತೀವ್ರ ಅಸ್ವಸ್ಥಗೊಂಡ ಡಿಕೆ ಶಿವಕುಮಾರ್‌ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕೂಡಲೇ ರಾಮ್‌ ಮನೋಹರ್‌ ಲೋಹಿಯಾ ಆಸ್ಪತ್ರೆಗೆ ಕರೆದೊಯ್ದರು.

ಡಿಕೆಶಿ ಅವರ ಆರೋಗ್ಯ ತಪಾಸಣೆ ಮಾಡಿದ ವೈದ್ಯರು ಸೂಕ್ತ ಚಿಕಿತ್ಸೆ ನೀಡಿ, ವಿಶ್ರಾಂತಿ ತೆಗೆದುಕೊಳ್ಳಲು ಸಲಹೆ ನೀಡಿದರು.

ಡಿಕೆ ಶಿವಕುಮಾರ್‌ ಅವರ ನಿವಾಸ, ಕಚೇರಿಗಳ ಮೇಲೆ ಆಗಸ್ಟ್‌ 1, 2017ರಲ್ಲಿ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿತ್ತು. ಡಿಕೆಶಿಗೆ ಸೇರಿದ್ದ ಒಟ್ಟು 50ಕ್ಕೂ ಹೆಚ್ಚು ಸ್ಥಳಗಳಲ್ಲಿ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿತ್ತು. ಹೊಸದಿಲ್ಲಿಯ ಡಿಕೆಶಿ ನಿವಾಸದ ಮೇಲೂ ದಾಳಿ ನಡೆಸಲಾಗಿತ್ತು. ಈ ಸಂದರ್ಭದಲ್ಲಿ 8.9 ಕೋಟಿ ರೂ. ನಗದು ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಡಿಕೆಶಿ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕಸ್ಟಡಿಗೆ ಪಡೆದ ವಿಚಾರಣೆ ನಡೆಸುತ್ತಿದ್ದಾರೆ.

ಡಿಕೆಶಿ ಕಚೇರಿ, ನಿವಾಸದ ಮೇಲೆ ದಾಳಿ ನಡೆಸಿದಾಗ 300 ಕೋಟಿ ರೂ. ಗಳಿಗೂ ಅಧಿಕ ಅಕ್ರಮ ಆಸ್ತಿ ಪತ್ತೆಯಾಗಿತ್ತು ಎಂದು ಆದಾಯ ತೆರಿಗೆ ಇಲಾಖೆ ಮೂಲಗಳು ಮಾಹಿತಿ ನೀಡಿದ್ದವು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ