ಆ್ಯಪ್ನಗರ

ಜೈಲಿಂದ ಬಿಡುಗಡೆಗೊಂಡ ಬೆನ್ನಲ್ಲೇ ಸೋನಿಯಾ ಗಾಂಧಿ ಭೇಟಿಯಾದ ಡಿಕೆಶಿ

ಅಕ್ರಮ ಹಣಕಾಸು ವರ್ಗಾವಣೆಯಡಿಯಲ್ಲಿ ತಿಹಾರ್ ಜೈಲಿನಲ್ಲಿದ್ದು ಜಾಮೀನಿನ ಮೇಲೆ ಬಿಡುಗಡೆಗೊಂಡ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು

Vijaya Karnataka Web 24 Oct 2019, 7:35 pm
ಹೊಸದೆಹಲಿ: ಅಕ್ರಮ ಹಣಕಾಸು ವರ್ಗಾವಣೆ ಆರೋಪದಡಿಯಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿ ತಿಹಾರ್ ಜೈಲು ಸೇರಿದ್ದ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರಿಗೆ ಜಾಮೀನು ಸಿಕ್ಕ ಬೆನ್ನಲ್ಲೇ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಭೇಟಿ ಮಾಡಿ ಮಾತುಕತೆ ನಡೆಸಿದರು.
Vijaya Karnataka Web dks sonia vesit


ಗುರುವಾರದಂದು ದೆಹಲಿಯ ಸೋನಿಯಾಗಾಂಧಿ ನಿವಾಸಕ್ಕೆ ತೆರಳಿದ ಡಿಕೆ ಶಿವಕುಮಾರ್ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಮಾಜಿ ಎಐಸಿಸಿ ಅಧ್ಯಕ್ಷರಾದ ರಾಹುಲ್ ಗಾಂಧಿ ಅವರನ್ನುಭೇಟಿ ಮಾಡಿ ಧನ್ಯವಾದ ಅರ್ಪಿಸಿದರು.

ತಿಹಾರ್ ಜೈಲಿನಲ್ಲಿ ಬಂಧನದಲ್ಲಿದ್ದ ಡಿಕೆ ಶಿವಕುಮಾರ್ ಅವರನ್ನು ಬುಧವಾರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಭೇಟಿ ಮಾಡಿದ್ದರು. ಅಲ್ಲದೆ ಡಿಕೆ ಶಿವಕುಮಾರ್ ಅವರ ಪರವಾಗಿ ಪಕ್ಷ ನಿಲ್ಲುತ್ತದೆ ಎಂಬ ಭರವಸೆಯನ್ನು ನೀಡಿದ್ದರು.

ರಾಜಕೀಯ ಸನ್ಯಾಸತ್ವ ಅಥವಾ ಉದ್ಯಮ ಮಾಡಿ ಡಿಕೆಶಿಗೆ ಸ್ನೇಹಿತರ ಡಿಫ್ರೆಂಟ್ ಐಡಿಯಾ

ಈ ಹಿನ್ನಲೆಯಲ್ಲಿ ಜೈಲಿಂದ ಬಿಡುಗಡೆಗೊಂಡ ಬಳಿಕ ಡಿಕೆಶಿ ಸೋನಿಯಾಗಾಂಧಿ ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಸಂಸದ ಡಿ. ಕೆ. ಸುರೇಶ್, ವಿಧಾನ ಪರಿಷತ್ ಸದಸ್ಯರಾದ ಎಸ್. ರವಿ, ಶಾಸಕ ಡಾ. ರಂಗನಾಥ್ ಇದ್ದರು. ಇದಕ್ಕೂ ಮುನ್ನ ಡಿಕೆಶಿ ಕಾಂಗ್ರೆಸ್ ಕರ್ನಾಟಕ ಉಸ್ತುವಾರಿ ಕೆಸಿ ವೇಣುಗೋಪಾಲ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಡಿಕೆಶಿ ಜೈಲುವಾಸ ಅಂತ್ಯ: ಜಾಮೀನಿಗೆ ಎಚ್‌ಡಿಕೆ, ಡಿಕೆ ಸುರೇಶ್ ಸಂತಸ

ಅಕ್ರಮ ಹಣಕಾಸು ವರ್ಗಾವಣೆ ಆರೋಪದಡಿಯಲ್ಲಿ ಜಾರಿ ನಿರ್ದೇಶನಾಲಯ( ಇಡಿ) ಯಿಂದ ಬಂಧನಕ್ಕೆ ಒಳಗಾಗಿದ್ದ ಡಿಕೆ ಶಿವಕುಮಾರ್ ಅವರಿಗೆ ದೆಹಲಿ ಹೈ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ. ಸೆಪ್ಟಂಬರ್ 3 ರಂದು ಬಂಧಕ್ಕೊಳಗಾದ ಡಿಕೆಶಿ 48 ದಿನಗಳ ಕಾಲ ಬಂಧನದಲ್ಲಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ