ಆ್ಯಪ್ನಗರ

ಕರುಣಾನಿಧಿ ಆರೋಗ್ಯ ಯಥಾಸ್ಥಿತಿ: ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರ ಹರಸಾಹಸ

ಕಳೆದ ಮೂರು ದಿನಗಳಿಂದ ಚೆನ್ನೈನ ಕಾವೇರಿ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಡಿಎಂಕೆ ನಾಯಕ ಎಂ.ಕರುಣಾನಿಧಿ ಅವರ ಆರೋಗ್ಯ ಸೋಮವಾರವೂ ಸ್ಥಿರವಾಗಿದೆ.

Vijaya Karnataka 31 Jul 2018, 10:45 am
ಚೆನ್ನೈ: ಕಳೆದ ಮೂರು ದಿನಗಳಿಂದ ಚೆನ್ನೈನ ಕಾವೇರಿ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಡಿಎಂಕೆ ನಾಯಕ ಎಂ.ಕರುಣಾನಿಧಿ ಅವರ ಆರೋಗ್ಯ ಸೋಮವಾರವೂ ಸ್ಥಿರವಾಗಿದೆ.
Vijaya Karnataka Web karunanidhi fans


ಆದರೆ, ಭಾನುವಾರ ರಾತ್ರಿಯಿಂದ ಆಸ್ಪತ್ರೆ ಮುಂದೆ ಸೇರಿರುವ ಸಾವಿರಾರು ಅಭಿಮಾನಿಗಳನ್ನು ನಿಯಂತ್ರಿಸುವುದು ಪೊಲೀಸರಿಗೆ ಸವಾಲಾಗಿ ಪರಿಣಮಿಸಿದೆ. ಶಾಂತಿ ಕಾಪಾಡುವಂತೆ ಕುರಣಾನಿಧಿ ಪುತ್ರ ಎಂ.ಕೆ.ಸ್ಟಾಲಿನ್‌ ಜನತೆಯಲ್ಲಿ ಮನವಿ ಮಾಡಿಕೊಂಡಿದ್ದರೂ ಜನರ ನೂಕುನುಗ್ಗಲು ನಿಯಂತ್ರಣಕ್ಕೆ ಬಂದಿಲ್ಲ. ಈ ಬೆಳವಣಿಗೆಯ ಮಧ್ಯೆ ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ಹಾಗೂ ಉಪ ಮುಖ್ಯಮಂತ್ರಿ ಒ.ಪನ್ನೀರ್‌ಸೆಲ್ವಂ ಅವರು ಆಸ್ಪತ್ರೆಗೆ ಭೇಟಿಕೊಟ್ಟು ಕರುಣಾನಿಧಿ ಅವರ ಆರೋಗ್ಯ ಕುರಿತು ಕುಟುಂಬಸ್ಥರಿಂದ ಮಾಹಿತಿ ಪಡೆದುಕೊಂಡರು. ಭೇಟಿ ವೇಳೆ ಕರುಣಾನಿಧಿ ಪುತ್ರ ಎಂ.ಕೆ.ಸ್ಟಾಲಿನ್‌, ಪುತ್ರಿ ಕನಿಮೋಳಿ ಅವರು ಸಿಎಂ ಜತೆಗಿದ್ದರು.

ಆತಂಕ ಬೇಡ: ಜ್ವರ, ಮೂತ್ರಸೋಂಕು ಸೇರಿ ವಯೋ ಸಹಜ ಕಾಯಿಲೆಗಳಿಂದ ಬಳಲುತ್ತಿರುವ ಕರುಣಾನಿಧಿ ಅವರಿಗೆ ನುರಿತ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ. ಅವರ ಆರೋಗ್ಯ ಸ್ಥಿರವಾಗಿದೆ. ವದಂತಿಗಳಿಗೆ ಕಿವಿಗೊಟ್ಟು ಆತಂಕಕ್ಕೆ ಒಳಗಾಗಬೇಡಿ ಎಂದು ಸಿಎಂ ಪಳನಿಸ್ವಾಮಿ ಜನತೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ. ಭಾನುವಾರ ರಾತ್ರಿ ಕರುಣಾನಿಧಿ ಅವರ ಆರೋಗ್ಯ ಬಿಗಡಾಯಿಸಿದೆ ಎಂಬ ವದಂತಿಗಳ ಹಿನ್ನೆಲೆಯಲ್ಲಿ ಪಕ್ಷದ ಕಾರ‍್ಯಕರ್ತರು ಹಾಗೂ ಅಭಿಮಾನಿಗಳಲ್ಲಿ ಆತಂಕ ಹೆಚ್ಚಿತ್ತು. ಆಸ್ಪತ್ರೆ ಎದುರು 'ಯಮನೇ ಹಿಂದಿರುಗಿ ಹೋಗು' ಎಂದು ಪ್ರಾರ್ಥಿಸುತ್ತಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ