ಆ್ಯಪ್ನಗರ

ಕರುಣಾನಿಧಿ ಆರೋಗ್ಯ ಸ್ಥಿರ

ವಯೋಸಹಜ ಕಾಯಿಲೆಗಳಿಂದ ಬಳಲುತ್ತಿರುವ ಡಿಎಂಕೆ ವರಿಷ್ಠ ಎಂ.ಕರುಣಾನಿಧಿ (94) ಅವರ ರಕ್ತದೊತ್ತಡ ದಿಢೀರ್‌ ಇಳಿಕೆಯಾಗಿದ್ದರಿಂದ ಶುಕ್ರವಾರ ತಡರಾತ್ರಿ 1.30ರ ಸುಮಾರಿಗೆ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Vijaya Karnataka 29 Jul 2018, 10:23 am
ಚೆನ್ನೈ: ವಯೋಸಹಜ ಕಾಯಿಲೆಗಳಿಂದ ಬಳಲುತ್ತಿರುವ ಡಿಎಂಕೆ ವರಿಷ್ಠ ಎಂ.ಕರುಣಾನಿಧಿ (94) ಅವರ ರಕ್ತದೊತ್ತಡ ದಿಢೀರ್‌ ಇಳಿಕೆಯಾಗಿದ್ದರಿಂದ ಶುಕ್ರವಾರ ತಡರಾತ್ರಿ 1.30ರ ಸುಮಾರಿಗೆ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
Vijaya Karnataka Web DMK Leader


ಕರುಣಾನಿಧಿ ಅವರನ್ನು ತುರ್ತು ನಿಗಾ ಘಟಕದಲ್ಲಿ ಇರಿಸಲಾಗಿದೆ. ಜ್ವರ ಹಾಗೂ ಮೂತ್ರ ಸೋಂಕಿನಿಂದ ಬಳಲುತ್ತಿರುವ ಅವರಿಗೆ ತಜ್ಞರ ವೈದ್ಯರಿಂದ ಚಿಕಿತ್ಸೆ ಮುಂದುವರಿಸಲಾಗಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ಶನಿವಾರ ತಿಳಿಸಿವೆ. ಕೆಲವು ದಿನಗಳ ಹಿಂದಷ್ಟೇ ಆಸ್ಪತ್ರೆಯಿಂದ ಗೋಪಾಲಪುರಂ ನಿವಾಸಕ್ಕೆ ಕರೆತರಲಾಗಿದ್ದ ಕರುಣಾನಿಧಿ ಅವರಿಗೆ ಮನೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿತ್ತು. ಆರೋಗ್ಯ ಬಿಗಡಾಯಿಸಿದ್ದರಿಂದ ಶುಕ್ರವಾರ ಬೆಳಗ್ಗೆಯೇ ರಾಜಕೀಯ, ಸಿನಿಮಾ ರಂಗದ ಗಣ್ಯರು ಅವರ ಮನೆಗೆ ಭೇಟಿಕೊಟ್ಟು ಆರೋಗ್ಯ ವಿಚಾರಿಸಿದ್ದರು. ಪ್ರಧಾನಿ ಮೋದಿ, ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಸೇರಿದಂತೆ ಹಲವರು ಕರುಣಾನಿಧಿ ಶೀಘ್ರ ಚೇತರಿಕೆ ಹಾರೈಸಿ ಟ್ವೀಟ್‌ ಮಾಡಿದ್ದರು. ಈಗ ಮತ್ತೆ ಆಸ್ಪತ್ರೆಗೆ ದಾಖಲಾಗಿರುವುದು ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳಲ್ಲಿ ಆತಂಕ ಹೆಚ್ಚಿಸಿದೆ. ಡಿಎಂಕೆ ಪ್ರಧಾನ ಕಾರ‍್ಯದರ್ಶಿ ಕೆ.ಅನ್ಬಳಗನ್‌, ರಾಜ್ಯ ಆರೋಗ್ಯ ಸಚಿವ ಸಿ.ವಿಜಯಭಾಸ್ಕರ್‌, ಅಮ್ಮಾ ಮಕ್ಕಳ್‌ ಮುನ್ನೇತ್ರ ಕಳಗಂ ನಾಯಕ ಟಿ.ಟಿ.ವಿ. ದಿನಕರನ್‌ ಸೇರಿದಂತೆ ಹಲವರು ಶನಿವಾರ ಆಸ್ಪತ್ರೆಗೆ ಭೇಟಿಕೊಟ್ಟು ಆರೋಗ್ಯ ವಿಚಾರಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ