ಸತ್ತ ಆರು ತಿಂಗಳ ಬಳಿಕ ವಿಆರ್ಎಸ್ ಪಡೆದ ವೈದ್ಯೆ
ಇದೇ ಮಾನದಂಡದ ಮೇಲೆ ವೃತ್ತಿಯಲ್ಲಿ ವೈದ್ಯರಾಗಿರುವ ಮಹಿಳೆಯ ಪತಿ ಸಲ್ಲಿಸಿದ ಅರ್ಜಿಯನ್ನು ಸರಕಾರ ಪೂರಸ್ಕರಿಸಿದೆ. ಆದರೆ, ತಾಂತ್ರಿಕ ದೋಷದ ಕಾರಣ ಒಡ್ಡಿ ಮಹಿಳೆಯ ಮನವಿಯನ್ನು ತಿರಸ್ಕರಿಸಲಾಗಿತ್ತು.
TIMESOFINDIA.COM 14 Dec 2018, 3:03 pm
ಔರಂಗಾಬಾದ್: ವಿಆರ್ಎಸ್ಗೆ ಮನವಿ ಸಲ್ಲಿಸಿದ್ದ ಸರಕಾರಿ ವೈದ್ಯರೊಬ್ಬರು ಸಾವನ್ನಪ್ಪಿದ 6 ತಿಂಗಳ ಬಳಿಕ ಅದಕ್ಕೆ ಅನುಮೋದನೆ ಪಡೆದ ಪ್ರಸಂಗ ಮಹಾರಾಷ್ಟ್ರದಲ್ಲಿ ಬೆಳಕಿಗೆ ಬಂದಿದೆ.
ಹಿಂಗೋಲಿ ಜಿಲ್ಲೆಯ ಬಾಸ್ಮತ್ ಉಪವಿಭಾಗೀಯ ಆಸ್ಪತ್ರೆಯಲ್ಲಿ ವೈದ್ಯಕೀಯ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಪುಷ್ಪಾ ವಾಮನರಾವ್ ಸಾಲುಂಕೆ (49) ಎಂಬವರು ಸ್ತನ ಕ್ಯಾನ್ಸರ್ನಿಂದ ಬಳಲುತ್ತಿದ್ದರು. 20 ವರ್ಷ ಸೇವಾವಧಿ ಪೂರ್ಣಗೊಳಿಸಿದ್ದ ಅವರು, 2016ರಲ್ಲಿ ವಿಆರ್ಎಸ್ ನೀಡುವಂತೆ ಮನವಿ ಸಲ್ಲಿಸಿದ್ದರು. ಆದರೆ, 20 ವರ್ಷ ಸೇವಾವಧಿ ಪೂರ್ಣಗೊಂಡಿಲ್ಲ ಎಂದು ಅಧಿಕಾರಿಗಳು ಮನವಿಯನ್ನು ತಿರಸ್ಕರಿಸಿದ್ದರು.
ವಿಚಿತ್ರವೆಂದರೆ, ಇದೇ ಮಾನದಂಡದ ಮೇಲೆ ವೃತ್ತಿಯಲ್ಲಿ ವೈದ್ಯರಾಗಿರುವ ಮಹಿಳೆಯ ಪತಿ ಸಲ್ಲಿಸಿದ ಅರ್ಜಿಯನ್ನು ಸರಕಾರ ಪೂರಸ್ಕರಿಸಿದೆ. ಆದರೆ, ತಾಂತ್ರಿಕ ದೋಷದ ಕಾರಣ ಒಡ್ಡಿ ಮಹಿಳೆಯ ಮನವಿಯನ್ನು ತಿರಸ್ಕರಿಸಲಾಗಿತ್ತು.
ವಿಆರ್ಎಸ್ ಮನವಿಯನ್ನು ಪೂರಸ್ಕರಿಸುವಂತೆ ಕೋರಿ ಮಹಿಳೆ ನ್ಯಾಯಾಲಯ ಮೆಟ್ಟಿಲೇರಿದ್ದರು. ಆದರೆ, ಕ್ಯಾನ್ಸರ್ನಿಂದ ಬಳಲುತ್ತಿದ್ದ ಅವರು ಜೂನ್ನಲ್ಲಿ ಇಹಲೋಕ ತ್ಯಜಿಸಿದ್ದರು.
ಹಿಂಗೋಲಿ ಜಿಲ್ಲೆಯ ಬಾಸ್ಮತ್ ಉಪವಿಭಾಗೀಯ ಆಸ್ಪತ್ರೆಯಲ್ಲಿ ವೈದ್ಯಕೀಯ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಪುಷ್ಪಾ ವಾಮನರಾವ್ ಸಾಲುಂಕೆ (49) ಎಂಬವರು ಸ್ತನ ಕ್ಯಾನ್ಸರ್ನಿಂದ ಬಳಲುತ್ತಿದ್ದರು. 20 ವರ್ಷ ಸೇವಾವಧಿ ಪೂರ್ಣಗೊಳಿಸಿದ್ದ ಅವರು, 2016ರಲ್ಲಿ ವಿಆರ್ಎಸ್ ನೀಡುವಂತೆ ಮನವಿ ಸಲ್ಲಿಸಿದ್ದರು. ಆದರೆ, 20 ವರ್ಷ ಸೇವಾವಧಿ ಪೂರ್ಣಗೊಂಡಿಲ್ಲ ಎಂದು ಅಧಿಕಾರಿಗಳು ಮನವಿಯನ್ನು ತಿರಸ್ಕರಿಸಿದ್ದರು.
ವಿಚಿತ್ರವೆಂದರೆ, ಇದೇ ಮಾನದಂಡದ ಮೇಲೆ ವೃತ್ತಿಯಲ್ಲಿ ವೈದ್ಯರಾಗಿರುವ ಮಹಿಳೆಯ ಪತಿ ಸಲ್ಲಿಸಿದ ಅರ್ಜಿಯನ್ನು ಸರಕಾರ ಪೂರಸ್ಕರಿಸಿದೆ. ಆದರೆ, ತಾಂತ್ರಿಕ ದೋಷದ ಕಾರಣ ಒಡ್ಡಿ ಮಹಿಳೆಯ ಮನವಿಯನ್ನು ತಿರಸ್ಕರಿಸಲಾಗಿತ್ತು.
ವಿಆರ್ಎಸ್ ಮನವಿಯನ್ನು ಪೂರಸ್ಕರಿಸುವಂತೆ ಕೋರಿ ಮಹಿಳೆ ನ್ಯಾಯಾಲಯ ಮೆಟ್ಟಿಲೇರಿದ್ದರು. ಆದರೆ, ಕ್ಯಾನ್ಸರ್ನಿಂದ ಬಳಲುತ್ತಿದ್ದ ಅವರು ಜೂನ್ನಲ್ಲಿ ಇಹಲೋಕ ತ್ಯಜಿಸಿದ್ದರು.