ಆ್ಯಪ್ನಗರ

ಬೆಂಕಿ ಆಕಸ್ಮಿಕ ಮುನ್ನವೇ ನೀರವ್‌ ಮೋದಿ ತನಿಖಾ ದಾಖಲೆ ಸ್ಥಳಾಂತರ: ಸಿಬಿಡಿಟಿ

ಆದಾಯ ತೆರಿಗೆ ಕಚೇರಿಯಲ್ಲಿ ನಡೆದ ಬೆಂಕಿ ಅವಘಡದಲ್ಲಿ ನೀರವ್‌ ಮೋದಿಗೆ ಸಂಬಂಧಿಸಿದ ಯಾವುದೇ ದಾಖಲೆಗಳು ನಾಶವಾಗಿಲ್ಲ

Vijaya Karnataka Web 4 Jun 2018, 11:13 am
ಮುಂಬಯಿ: ಆದಾಯ ತೆರಿಗೆ ಕಚೇರಿಯಲ್ಲಿ ನಡೆದ ಬೆಂಕಿ ಅವಘಡದಲ್ಲಿ ನೀರವ್‌ ಮೋದಿಗೆ ಸಂಬಂಧಿಸಿದ ಯಾವುದೇ ದಾಖಲೆಗಳು ನಾಶವಾಗಿಲ್ಲ ಎಂದು ಕೇಂದ್ರೀಯ ನೇರ ತೆರಿಗೆ ಮಂಡಳಿ (ಸಿಬಿಡಿಟಿ) ಸ್ಪಷ್ಟಪಡಿಸಿದೆ.
Vijaya Karnataka Web neerav


ನೀರವ್‌ ಮೋದಿ ಹಾಗೂ ಮೇಹುಲ್‌ ಚೋಸ್ಕಿ ವಿಚಾರಣೆಗೆ ಸಂಬಂಧಿಸಿದ ಎಲ್ಲ ದಾಖಲೆಗಳು ಸುರಕ್ಷಿತವಾಗಿದ್ದು, ಕಟ್ಟಡದಲ್ಲಿ ಬೆಂಕಿ ಕಾಣಿಸುವ ಮುನ್ನವೇ ಅವುಗಳನ್ನು ಬೇರೆಡೆಗೆ ವರ್ಗಾವಣೆ ಮಾಡಲಾಗಿದೆ ಎಂದು ತಿಳಿಸಿದೆ.

ಕೆಲ ಮಾಧ್ಯಮಗಳಲ್ಲಿ ದಾಖಲೆಗಳು ನಶಿಸಿರುವ ಬಗ್ಗೆ ವರದಿಯಾಗಿದೆ ಎಂದು ಪ್ರಸಾರವಾಗಿತ್ತು. ಈ ಆರೋಪವನ್ನು ಸಂಪೂರ್ಣವಾಗಿ ತಳ್ಳಿಹಾಕಿರುವ ಸಿಬಿಡಿಟಿ, ದಾಖಲೆಗಳನ್ನು ಮೌಲ್ಯಮಾಪನ ಹಾಗೂ ಇನ್ನಿತರ ಪ್ರಕ್ರಿಯೆಗಳಿಗಾಗಿ ಸ್ಥಳಾಂತರಿಸಲಾಗಿದೆ ಎಂದು ಸ್ಪಷ್ಟೀಕರಣ ನೀಡಿದೆ.

13,400 ಕೋಟಿ ರೂ. ಮೌಲ್ಯದ ಪಿಎನ್‌ಬಿ ಹಗರಣದ ಪ್ರಮುಖ ಆರೋಪಿಯಾಗಿ ನೀರವ್‌ ಮೋದಿ ವಿಚಾರಣೆ ಎದುರಿಸುತ್ತಿದ್ದಾರೆ. ಆದಾಯ ತೆರಿಗೆ ಇಲಾಖೆ ಪ್ರಕರಣ ಕುರಿತು ತನಿಖೆ ನಡೆಸುತ್ತಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ