ಹೊಸದಿಲ್ಲಿ: ವೈದ್ಯರ ಮುಷ್ಕರವನ್ನು ಪ್ರತಿಷ್ಠೆಯ ವಿಷಯವಾಗಿ ತೆಗೆದುಕೊಳ್ಳಬೇಡಿ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮನವಿ ಮಾಡಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ವೈದ್ಯರ ಮೇಲೆ ನಡೆಯುತ್ತಿರುವ ಹಿಂಸಾಚಾರ ಪ್ರತಿಭಟಿಸಿ ದೇಶಾದ್ಯಂತ ವೈದ್ಯರು ಮುಷ್ಕರ ನಡೆಸುತ್ತಿರುವ ಹಿನ್ನೆಲೆಯಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ. ವೈದ್ಯರ ಸುರಕ್ಷತೆಗೆ ಕೇಂದ್ರ ಸರಕಾರ ಬದ್ಧವಾಗಿದೆ ಎಂದು ಇದೇ ವೇಳೆ ಅವರು ಭರವಸೆ ನೀಡಿದ್ದಾರೆ.
'ಇದನ್ನು ಪ್ರತಿಷ್ಠೆಯ ವಿಷಯವಾಗಿ ಮಾಡಿಕೊಳ್ಳಬೇಡಿ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಕೈಮುಗಿದು ಕೇಳಿಕೊಳ್ಳುತ್ತೇನೆ. ಮಾರಣಾಂತಿಕವಾಗಿ ಹಲ್ಲೆಗೊಳಗಾದರೂ ವೈದ್ಯರು ತಮಗೆ ಸೂಕ್ತ ರಕ್ಷಣೆ ಕೊಡಿ ಮತ್ತು ತಪ್ಪಿತಸ್ಥರನ್ನು ಕಾನೂನಿಗೆ ಅನುಗುಣವಾಗಿ ಶಿಕ್ಷಿಸಿ ಎಂದಷ್ಟೇ ಕೇಳಿಕೊಂಡಿದ್ದಾರೆ. ಆದರೆ ಬ್ಯಾನರ್ಜಿ ವೈದ್ಯರ ಕೋರಿಕೆ ಪರಿಗಣಿಸದೆ ಗಡುವು ವಿಧಿಸಿದ್ದಾರೆ. ಇದರಿಂದ ಕೆರಳಿದ ವೈದ್ಯ ಸಮುದಾಯ ದೇಶವ್ಯಾಪಿ ಮುಷ್ಕರಕ್ಕೆ ಮುಂದಾಗಿದೆ. ಮುಖ್ಯಮಂತ್ರಿ ತಮ್ಮ ವರ್ತನೆಯನ್ನು ಬದಲಿಸಿಕೊಂಡರೆ ದೇಶಾದ್ಯಂತ ರೋಗಿಗಳು ತೊಂದರೆಗೀಡಾಗುವುದು ತಪ್ಪುತ್ತದೆ' ಎಂದು ಹರ್ಷವರ್ಧನ್ ಎಎನ್ಐಗೆ ತಿಳಿಸಿದರು.
ದೇಶವ್ಯಾಪಿ ಪ್ರತಿಭಟನೆಗೆ ಶುಕ್ರವಾರ ಮಹಾರಾಷ್ಟ್ರದ ವೈದ್ಯರೂ ಸೇರಿಕೊಂಡಿದ್ದಾರೆ. ಹೈದರಾಬಾದ್ನ ನಿಜಾಮ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ವೈದ್ಯರೂ ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ. ದಿಲ್ಲಿ ಮೆಡಿಕಲ್ ಅಸೋಸಿಯೇಶನ್ ಮತ್ತು ಏಮ್ಸ್ನ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಶನ್ ಕೂಡ ಮುಷ್ಕರದಲ್ಲಿ ಭಾಗಿಯಾಗಿದ್ದಾರೆ. ಬಳಿಕ ಏಮ್ಸ್ ವೈದ್ಯರ ನಿಯೋಗವೊಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರನ್ನು ಭೇಟಿ ಮಾಡಿತು.
ಕೋಲ್ಕತದ ಎನ್ಆರ್ಎಸ್ ಮೆಡಿಕಲ್ ಕಾಲೇಜು ವೈದ್ಯರ ಪ್ರತಿಭಟನೆಯ ಕೇಂದ್ರಬಿಂದುವಾಗಿದ್ದು, ಪರಿಬಾಹ ಮುಖೋಪಾಧ್ಯಾಯ ಮತ್ತು ಯಶ್ ಟೇಕ್ವಾನಿ ಎಂಬ ಇಬ್ಬರು ಯುವ ವೈದ್ಯರ ಮೇಲೆ ಸೋಮವಾರ ಮಾರಣಾಂತಿಕ ಹಲ್ಲೆ ನಡೆದಿತ್ತು.
ಇದರಿಂದ ಹೊತ್ತಿಕೊಂಡ ಪ್ರತಿಭಟನೆಯ ಕಿಡಿಯಿಂದ ಬಂಗಾಳದ ಸಾರ್ವಜನಿಕ ಆರೋಗ್ಯ ಪಾಲನೆ ವ್ಯವಸ್ಥೆಯನ್ನೇ ಅತಂತ್ರಗೊಳಿಸಿದೆ.
ಗುರುವಾರದಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೇ ಖುದ್ದಾಗಿ ಮಧ್ಯಪ್ರವೇಶಿಸಿ, ಪ್ರತಿಭಟನೆ ನಡೆಸುತ್ತಿದ್ದ ವೈದ್ಯರ ಸಮಸ್ಯೆಗಳನ್ನು ಆಲಿಸುವ ಬದಲು ಕೂಡಲೇ ಕರ್ತವ್ಯಕ್ಕೆ ಹಾಜರಾಗದಿದ್ದರೆ ಶಿಸ್ತುಕ್ರಮ ಕೈಗೊಳ್ಳುವ ಬೆದರಿಕೆ ಹಾಕಿದರು. ಎಸ್ಎಸ್ಕೆಎಂ ಆಸ್ಪತ್ರೆ ಆವರಣಕ್ಕೆ ತೆರಳಿ, ನಾಲ್ಕು ಗಂಟೆಗಳೊಳಗೆ ಕರ್ತವ್ಯಕ್ಕೆ ಮರಳದಿದ್ದರೆ, ಹಾಸ್ಟೆಲ್ಗಳಿಂದ ತೆರವುಗೊಳಿಸುವುದೂ ಸೇರಿದಂತೆ ಕಠಿಣ ಕ್ರಮ ಎದುರಿಸಬೇಕಾದೀತು ಎಂದು ಎಚ್ಚರಿಸಿದರು.
ಬಿಕ್ಕಟ್ಟು ಬಗೆಹರಿಸಲು ಮುಖ್ಯಮಂತ್ರಿಯೇ ನೇರವಾಗಿ ಮಧ್ಯಸ್ಥಿಕೆ ವಹಿಸಬೇಕೆಂದು ಪ್ರತಿಭಟನೆ ನಿರತ ವೈದ್ಯರು ಆಗ್ರಹಿಸಿದ್ದಾರೆ. ಆದರೆ ಎಸ್ಎಸ್ಕೆಎಂ ಆಸ್ಪತ್ರೆಗೆ ತೆರಳಿ ಮಮತಾ ಬ್ಯಾನರ್ಜಿ ನೀಡಿದ ಎಚ್ಚರಿಕೆ ವೈದ್ಯರ ಭರವಸೆಗಳನ್ನು ನುಚ್ಚುನೂರಾಗಿಸಿದೆ. ತಮಗೆ 'ರಕ್ಷಣೆ ಮತ್ತು ನ್ಯಾಯ' ಒದಗಿಸುವ ವರೆಗೂ ಕರ್ತವ್ಯಕ್ಕೆ ಮರಳುವುದಿಲ್ಲ ಎಂದು ವೈದ್ಯರು ಘೋಷಿಸಿದ್ದಾರೆ.
ಕೋಲ್ಕತ ಮಹಾನಗರಪಾಲಿಕೆಯ 300 ವೈದ್ಯರ ತಂಡವೂ ಪ್ರತಿಭಟನೆಗೆ ಇಳಿದಿದ್ದಾರೆ. ವೈದ್ಯರ ಮೇಲೆ ಹಿಂಸಾಚಾರ, ದಾಳಿ ನಡೆಸುವವರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ವೈದ್ಯರು ಆಗ್ರಹಿಸುತ್ತಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ವೈದ್ಯರ ಮೇಲೆ ನಡೆಯುತ್ತಿರುವ ಹಿಂಸಾಚಾರ ಪ್ರತಿಭಟಿಸಿ ದೇಶಾದ್ಯಂತ ವೈದ್ಯರು ಮುಷ್ಕರ ನಡೆಸುತ್ತಿರುವ ಹಿನ್ನೆಲೆಯಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ. ವೈದ್ಯರ ಸುರಕ್ಷತೆಗೆ ಕೇಂದ್ರ ಸರಕಾರ ಬದ್ಧವಾಗಿದೆ ಎಂದು ಇದೇ ವೇಳೆ ಅವರು ಭರವಸೆ ನೀಡಿದ್ದಾರೆ.
'ಇದನ್ನು ಪ್ರತಿಷ್ಠೆಯ ವಿಷಯವಾಗಿ ಮಾಡಿಕೊಳ್ಳಬೇಡಿ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಕೈಮುಗಿದು ಕೇಳಿಕೊಳ್ಳುತ್ತೇನೆ. ಮಾರಣಾಂತಿಕವಾಗಿ ಹಲ್ಲೆಗೊಳಗಾದರೂ ವೈದ್ಯರು ತಮಗೆ ಸೂಕ್ತ ರಕ್ಷಣೆ ಕೊಡಿ ಮತ್ತು ತಪ್ಪಿತಸ್ಥರನ್ನು ಕಾನೂನಿಗೆ ಅನುಗುಣವಾಗಿ ಶಿಕ್ಷಿಸಿ ಎಂದಷ್ಟೇ ಕೇಳಿಕೊಂಡಿದ್ದಾರೆ. ಆದರೆ ಬ್ಯಾನರ್ಜಿ ವೈದ್ಯರ ಕೋರಿಕೆ ಪರಿಗಣಿಸದೆ ಗಡುವು ವಿಧಿಸಿದ್ದಾರೆ. ಇದರಿಂದ ಕೆರಳಿದ ವೈದ್ಯ ಸಮುದಾಯ ದೇಶವ್ಯಾಪಿ ಮುಷ್ಕರಕ್ಕೆ ಮುಂದಾಗಿದೆ. ಮುಖ್ಯಮಂತ್ರಿ ತಮ್ಮ ವರ್ತನೆಯನ್ನು ಬದಲಿಸಿಕೊಂಡರೆ ದೇಶಾದ್ಯಂತ ರೋಗಿಗಳು ತೊಂದರೆಗೀಡಾಗುವುದು ತಪ್ಪುತ್ತದೆ' ಎಂದು ಹರ್ಷವರ್ಧನ್ ಎಎನ್ಐಗೆ ತಿಳಿಸಿದರು.
ದೇಶವ್ಯಾಪಿ ಪ್ರತಿಭಟನೆಗೆ ಶುಕ್ರವಾರ ಮಹಾರಾಷ್ಟ್ರದ ವೈದ್ಯರೂ ಸೇರಿಕೊಂಡಿದ್ದಾರೆ. ಹೈದರಾಬಾದ್ನ ನಿಜಾಮ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ವೈದ್ಯರೂ ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ. ದಿಲ್ಲಿ ಮೆಡಿಕಲ್ ಅಸೋಸಿಯೇಶನ್ ಮತ್ತು ಏಮ್ಸ್ನ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಶನ್ ಕೂಡ ಮುಷ್ಕರದಲ್ಲಿ ಭಾಗಿಯಾಗಿದ್ದಾರೆ. ಬಳಿಕ ಏಮ್ಸ್ ವೈದ್ಯರ ನಿಯೋಗವೊಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರನ್ನು ಭೇಟಿ ಮಾಡಿತು.
ಕೋಲ್ಕತದ ಎನ್ಆರ್ಎಸ್ ಮೆಡಿಕಲ್ ಕಾಲೇಜು ವೈದ್ಯರ ಪ್ರತಿಭಟನೆಯ ಕೇಂದ್ರಬಿಂದುವಾಗಿದ್ದು, ಪರಿಬಾಹ ಮುಖೋಪಾಧ್ಯಾಯ ಮತ್ತು ಯಶ್ ಟೇಕ್ವಾನಿ ಎಂಬ ಇಬ್ಬರು ಯುವ ವೈದ್ಯರ ಮೇಲೆ ಸೋಮವಾರ ಮಾರಣಾಂತಿಕ ಹಲ್ಲೆ ನಡೆದಿತ್ತು.
ಇದರಿಂದ ಹೊತ್ತಿಕೊಂಡ ಪ್ರತಿಭಟನೆಯ ಕಿಡಿಯಿಂದ ಬಂಗಾಳದ ಸಾರ್ವಜನಿಕ ಆರೋಗ್ಯ ಪಾಲನೆ ವ್ಯವಸ್ಥೆಯನ್ನೇ ಅತಂತ್ರಗೊಳಿಸಿದೆ.
ಗುರುವಾರದಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೇ ಖುದ್ದಾಗಿ ಮಧ್ಯಪ್ರವೇಶಿಸಿ, ಪ್ರತಿಭಟನೆ ನಡೆಸುತ್ತಿದ್ದ ವೈದ್ಯರ ಸಮಸ್ಯೆಗಳನ್ನು ಆಲಿಸುವ ಬದಲು ಕೂಡಲೇ ಕರ್ತವ್ಯಕ್ಕೆ ಹಾಜರಾಗದಿದ್ದರೆ ಶಿಸ್ತುಕ್ರಮ ಕೈಗೊಳ್ಳುವ ಬೆದರಿಕೆ ಹಾಕಿದರು. ಎಸ್ಎಸ್ಕೆಎಂ ಆಸ್ಪತ್ರೆ ಆವರಣಕ್ಕೆ ತೆರಳಿ, ನಾಲ್ಕು ಗಂಟೆಗಳೊಳಗೆ ಕರ್ತವ್ಯಕ್ಕೆ ಮರಳದಿದ್ದರೆ, ಹಾಸ್ಟೆಲ್ಗಳಿಂದ ತೆರವುಗೊಳಿಸುವುದೂ ಸೇರಿದಂತೆ ಕಠಿಣ ಕ್ರಮ ಎದುರಿಸಬೇಕಾದೀತು ಎಂದು ಎಚ್ಚರಿಸಿದರು.
ಬಿಕ್ಕಟ್ಟು ಬಗೆಹರಿಸಲು ಮುಖ್ಯಮಂತ್ರಿಯೇ ನೇರವಾಗಿ ಮಧ್ಯಸ್ಥಿಕೆ ವಹಿಸಬೇಕೆಂದು ಪ್ರತಿಭಟನೆ ನಿರತ ವೈದ್ಯರು ಆಗ್ರಹಿಸಿದ್ದಾರೆ. ಆದರೆ ಎಸ್ಎಸ್ಕೆಎಂ ಆಸ್ಪತ್ರೆಗೆ ತೆರಳಿ ಮಮತಾ ಬ್ಯಾನರ್ಜಿ ನೀಡಿದ ಎಚ್ಚರಿಕೆ ವೈದ್ಯರ ಭರವಸೆಗಳನ್ನು ನುಚ್ಚುನೂರಾಗಿಸಿದೆ. ತಮಗೆ 'ರಕ್ಷಣೆ ಮತ್ತು ನ್ಯಾಯ' ಒದಗಿಸುವ ವರೆಗೂ ಕರ್ತವ್ಯಕ್ಕೆ ಮರಳುವುದಿಲ್ಲ ಎಂದು ವೈದ್ಯರು ಘೋಷಿಸಿದ್ದಾರೆ.
ಕೋಲ್ಕತ ಮಹಾನಗರಪಾಲಿಕೆಯ 300 ವೈದ್ಯರ ತಂಡವೂ ಪ್ರತಿಭಟನೆಗೆ ಇಳಿದಿದ್ದಾರೆ. ವೈದ್ಯರ ಮೇಲೆ ಹಿಂಸಾಚಾರ, ದಾಳಿ ನಡೆಸುವವರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ವೈದ್ಯರು ಆಗ್ರಹಿಸುತ್ತಿದ್ದಾರೆ.