ಆ್ಯಪ್ನಗರ

'ಸಂವಿಧಾನ ಶಿಲ್ಪಿ'ಯನ್ನೂ ಬಿಡದ ದುಷ್ಕರ್ಮಿಗಳು; ಅಂಬೇಡ್ಕರ್ ನಿವಾಸದ ಮೇಲೆ ಕಲ್ಲು ತೂರಾಟ..!

ಮುಂಬೈನ ದಾದರ್‌ನ ಹಿಂದೂ ಕಾಲೋನಿಯಲ್ಲಿರುವ ಅಂಬೇಡ್ಕರ್ ಅವರ ನಿವಾಸ ರಾಜಗೃಹ ಉದ್ಯಾನದತ್ತ ಅಪರಿಚಿತ ವ್ಯಕ್ತಿಗಳು ಮಂಗಳವಾರ ರಾತ್ರಿ ಕಲ್ಲುಗಳನ್ನು ತೂರಿದ್ದು, ಪರಿಣಾಮ ಕಿಟಕಿಯ ಗಾಜುಗಳು ಒಡೆದು ಹೋಗಿವೆ. ಹೂ ಕುಂಡಗಳು ಮತ್ತು ಸಿಸಿಟಿವಿ ಕ್ಯಾಮೆರಾಗಳಿಗೆ ಹಾನಿಯಾಗಿದೆ ಎಂದು ಸ್ಥಳೀಯ ಮಾತುಂಗ ಠಾಣಾ ಪೊಲೀಸರು ತಿಳಿಸಿದ್ದಾರೆ.

TIMESOFINDIA.COM 8 Jul 2020, 2:24 pm
ಮುಂಬೈ: ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮುಂಬೈನಲ್ಲಿರುವ ಮನೆಮೇಲೆ ದುಷ್ಕರ್ಮಿಗಳು ಕಲ್ಲುಗಳನ್ನು ತೂರಿ ವಿಧ್ವಂಸಕ ಕೃತ್ಯ ಎಸಗಿದ್ದಾರೆ.
Vijaya Karnataka Web AMBEDKAR HOME


ಮುಂಬೈನ ದಾದರ್‌ನ ಹಿಂದೂ ಕಾಲೋನಿಯಲ್ಲಿರುವ ಅಂಬೇಡ್ಕರ್ ಅವರ ನಿವಾಸ ರಾಜಗೃಹ ಉದ್ಯಾನದತ್ತ ಅಪರಿಚಿತ ವ್ಯಕ್ತಿಗಳು ಮಂಗಳವಾರ ರಾತ್ರಿ ಕಲ್ಲುಗಳನ್ನು ತೂರಿದ್ದು, ಪರಿಣಾಮ ಕಿಟಕಿಯ ಗಾಜುಗಳು ಒಡೆದು ಹೋಗಿವೆ. ಹೂ ಕುಂಡಗಳು ಮತ್ತು ಸಿಸಿಟಿವಿ ಕ್ಯಾಮೆರಾಗಳಿಗೆ ಹಾನಿಯಾಗಿದೆ ಎಂದು ಸ್ಥಳೀಯ ಮಾತುಂಗ ಠಾಣಾ ಪೊಲೀಸರು ತಿಳಿಸಿದ್ದಾರೆ.

ಸೇನೆಯಲ್ಲಿ ಮಹಿಳೆಯರಿಗೆ ಪೂರ್ಣಾವಧಿ ಅವಕಾಶ; ಶೀಘ್ರ ಕಾನೂನು ಜಾರಿ ತರಲು ಕೇಂದ್ರಕ್ಕೆ

ಸದ್ಯ ಬಾಬಾ ಸಾಹೇಬ್ ಅಂಬೇಡ್ಕರ್ ಈ ಮನೆಯಲ್ಲಿ ಅಂಬೇಡ್ಕರ್ ಅವರ ಸೊಸೆ, ಮೊಮ್ಮಕ್ಕಳು, ಪ್ರಕಾಶ್ ಅಂಬೇಡ್ಕರ್, ಆನಂದ್ ರಾವ್ ಮತ್ತು ಭೀಮ್ ರಾವ್ ವಾಸಿಸುತ್ತಿದ್ದಾರೆ. ಕಿಡಿಗೇಡಿಗಳ ದುಷ್ಕೃತ್ಯದ ಬಗ್ಗೆ ಪ್ರಕಾಶ್ ಅಂಬೇಡ್ಕರ್ ಪ್ರತಿಕ್ರಿಯಿಸಿದ್ದು, ‘ಇಬ್ಬರು ಮನೆಯ ಉದ್ಯಾನದತ್ತ ಕಲ್ಲುಗಳನ್ನು ಎಸೆದು ಸಿಸಿಟಿವಿ ಕ್ಯಾಮೆರಾಗಳಿಗೆ ಹಾನಿ ಮಾಡಿದ್ದಾರೆ. ಪೊಲೀಸರು ಈ ವಿಷಯದಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಎಲ್ಲರೂ ಶಾಂತತೆಯನ್ನು ಕಾಪಾಡಬೇಕು. ಮನೆ ಮುಂದೆ ಜಮಾಯಿಸಬಾರದು’ ಎಂದು ಅಂಬೇಡ್ಕರ್ ಅನುಯಾಯಿಗಳಲ್ಲಿ ಮನವಿ ಮಾಡಿದ್ದಾರೆ.

ಖಾಕಿ ಖದರ್‌: ಯುಪಿಯಲ್ಲೇ ಇದ್ದಾನೆ ಡಾನ್‌ ವಿಕಾಸ್‌ ದುಬೆ, ಸಿಸಿಟಿವಿಯಲ್ಲಿ ಸೆರೆಯಾಯ್ತು 'ದಿ ಗ್ರೇಟ್ ಎಸ್ಕೇಪ್'‌!

ಘಟನೆ ಸಂಬಂಧ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಪ್ರತಿಕ್ರಿಯೆ ನೀಡಿದ್ದು, ರಾಜಗೃಹದ ಒಳಗೆ ನುಗ್ಗಿ ಈ ಕೃತ್ಯ ಎಸಗಿರುವುದು ಆಘಾತಕಾರಿ. ಅಂಬೇಡ್ಕರ್ ವಾದವನ್ನು ಒಪ್ಪದವರು ಕೂಡ ಈ ಸ್ಥಳದ ಬಗ್ಗೆ ಗೌರವ ಭಾವನೆ ಹೊಂದಿದ್ದಾರೆ.ಈಕೃತ್ಯ ಎಸಗಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪೊಲೀಸರಿಗೆ ತಿಳಿಸಿರುವುದಾಗಿ ಸೂಚಿಸಿದ್ದಾರೆ.

ಕಾಂಗ್ರೆಸ್‌ಗೆ ಕೇಂದ್ರದ ಬಿಗ್‌ ಶಾಕ್..!‌ ಗಾಂಧಿ ಮನೆತನದ 3 ಟ್ರಸ್ಟ್‌ಗಳ ವಿರುದ್ಧ ತನಿಖೆಗೆ ಆದೇಶ

ಮೂರು ಅಂತಸ್ತು ಹೊಂದಿರುವ ಅಂಬೇಡ್ಕರ್ ಅವರ ನಿವಾಸವನ್ನು ಕೆಲ ಸಮಯದ ಹಿಂದೆ ವಸ್ತು ಸಂಗ್ರಹಾಲಯವಾಗಿ ಪರಿವರ್ತಿಸಲಾಗಿತ್ತು. ಈ ನಿವಾಸ ಅಂಬೇಡ್ಕರ್ ಮ್ಯೂಸಿಯಂ ಎಂದೇ ಪ್ರಸಿದ್ಧಿ ಹೊಂದಿದ್ದು, ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರಿಗೆ ಸಂಬಂಧಿಸಿದ ಅಪರೂಪದ ಚಿತ್ರಗಳು, ಪುಸ್ತಕಗಳು, ಹಲವಾರು ಕಲಾಕೃತಿಗಳು ಸೇರಿದಂತೆ ಅನೇಕ ವಸ್ತುಗಳು ಇವೆ.

ದುಷ್ಕರ್ಮಿಗಳ ಕೃತ್ಯವನ್ನು ಖಂಡಿಸಿ ಅನೇಕ ಸಂಘಟನೆಗಳು ಪ್ರತಿಭಟನೆಯನ್ನೂ ನಡೆಸಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ