ಆ್ಯಪ್ನಗರ

ಲಕ್ಷ ದೀಪೋತ್ಸವದಲ್ಲಿ ಝಗಮಗಿಸಿದ ಅಯೋಧ್ಯೆ: ರಾಮ ನಗರಿಯಲ್ಲಿ ದೀಪಾವಳಿ ಸಂಭ್ರಮ!

ದೀಪಾವಳಿ ಹಿನ್ನೆಲೆಯಲ್ಲಿ ಉತ್ತರಪ್ರದೇಶದ ಅಯೋಧ್ಯೆಯಲ್ಲಿ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಲಕ್ಷ ದೀಪೋತ್ಸವ-2020ಕ್ಕೆ ಚಾಲನೆ ನೀಡಿದರು. ಅಯೋಧ್ಯೆಯ ಸರಯೂ ನದಿ ದಡದಲ್ಲಿ ಸಾವಿರಾರು ಭಕ್ತರು ದೀಪಗಳನ್ನು ಬೆಳಗಿಸಿ ಸಂಭ್ರಮಿಸಿದರು.

Vijaya Karnataka Web 13 Nov 2020, 7:13 pm
ಅಯೋಧ್ಯೆ: ದೀಪಾವಳಿ ಹಿನ್ನೆಲೆಯಲ್ಲಿ ಉತ್ತರಪ್ರದೇಶದ ಅಯೋಧ್ಯೆಯಲ್ಲಿ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಲಕ್ಷ ದೀಪೋತ್ಸವ-2020ಕ್ಕೆ ಚಾಲನೆ ನೀಡಿದರು.
Vijaya Karnataka Web Deepotsava
ಅಯೋಧ್ಯೆಯಲ್ಲಿ ಅದ್ದೂರಿ ಲಕ್ಷ ದೀಪೋತ್ಸವ


ಇಲ್ಲಿನ ರಾಮ್ ಕಿ ಪಾಡಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ಯೋಗಿ ಆದಿತ್ಯನಾಥ್, ಆರತಿ ಬೆಳಗುವ ಮೂಲಕ ಲಕ್ಷ ದೀಪೋತ್ಸವಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು.

ಬಳಿಕ 5.51 ಲಕ್ಷ ದೀಪಗಳನ್ನು ಬೆಳಗುವ ಕಾರ್ಯಕ್ರಮ ಆರಂಭವಾಯಿತು. ಅಯೋಧ್ಯೆಯ ಸರಯೂ ನದಿ ದಡದಲ್ಲಿ ಸಾವಿರಾರು ಭಕ್ತರು ದೀಪಗಳನ್ನು ಬೆಳಗಿಸಿ ಸಂಭ್ರಮಿಸಿದರು.


ರಾಮಜನ್ಮಭೂಮಿಯಲ್ಲಿ ಯೋಗಿ ವಿಶೇಷ ಪೂಜೆ: ದೀಪೋತ್ಸವದಲ್ಲಿ ಪಾಲ್ಗೊಳ್ಳಲಿರುವ ಯುಪಿ ಸಿಎಂ!

ಪ್ರತಿ ವರ್ಷವೂ ಅಯೋಧ್ಯೆಯ ಸರಯೂ ನದಿ ದಂಡೆಯಲ್ಲಿ ದೀಪಾವಳಿ ಮುನ್ನಾದಿನ ಲಕ್ಷ ದೀಪೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತದೆ. ಯೋಗಿ ಆದಿತ್ಯನಾಥ್ ಮುಖ್ಯಮಂತ್ರಿಯಾದಾಗಿನಿಂದ ಈ ದೀಪೋತ್ಸವಕ್ಕೆ ಚಾಲನೆ ನೀಡುತ್ತಾ ಬಂದಿದ್ದಾರೆ.

ಇನ್ನು ಲಕ್ಷ ದೀಪೋತ್ಸವ ಹಾಗೂ ದೀಪಾವಳಿ ಹಿನ್ನೆಲೆಯಲ್ಲಿ ಇಡೀ ಅಯೋಧ್ಯೆ ನಗರ ಸಿಂಗಾರಗೊಂಡಿದ್ದು, ನಗರದ ಪ್ರಮುಖ ಬೀದಿ ಹಾಗೂ ಗೋಡೆಗಳ ಮೇಲೆ ಆಕರ್ಷಕ ವರ್ಣಚಿತ್ರಗಳನ್ನು ಬಿಡಿಸಲಾಗಿದೆ.

ರಾಮಾಯಣದ ವೃತ್ತಾಂತ ಹಾಗೂ ಪ್ರಭು ಶ್ರೀರಾಮ ಹಾಗೂ ಸೀತಾಮಾತೆಯ ಆಕರ್ಷಕ ವರ್ಣಚಿತ್ರಗಳು ನಗರದ ಸೌಂದರ್ಯವನ್ನು ಇಮ್ಮಡಿಗೊಳಿಸಿದೆ.


ಅಯೋಧ್ಯೆಯಲ್ಲಿ ದೀಪಾವಳಿ ದೀಪೋತ್ಸವಕ್ಕೆ ಕ್ಷಣಗಣನೆ..! ಶೋಭಾಯಾತ್ರೆಯಲ್ಲಿ ರಾಮ ನಾಮ ಜಪ

ನಾಳೆ(ನ.14) ದೀಪಾವಳಿ ಸಂಭ್ರಮಾಚರಣೆ ಆರಂಭವಾಗಲಿದ್ದು, ಮೂರು ದಿನಗಳ ಕಾಲ ಅಯೋಧ್ಯೆ ನಗರಿ ಈ ಸಂಭ್ರಮಾಚರಣೆಗೆ ಸಾಕ್ಷಿಯಾಗಲಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ