ಅನ್ಲಾಕ್ ಪ್ರಕ್ರಿಯೆ ನಡುವೆಯೇ ಜನರ ಗುಂಪುಗೂಡುವಿಕೆ ಆರಂಭ: ರಾಜ್ಯಗಳಿಗೆ ತನ್ನ ಕಳವಳ ವ್ಯಕ್ತಪಡಿಸಿದ ಕೇಂದ್ರ
ಕೋವಿಡ್ ಪ್ರಕರಣಗಳಲ್ಲಿ ಇಳಿಕೆಯಾದ ಬೆನ್ನಲ್ಲೇ ರಾಜ್ಯಗಳು ನಿರ್ಬಂಧಗಳು ಸಡಿಲಿಸುತ್ತಿರುವುದರಿಂದ ಮಾರುಕಟ್ಟೆ ಹಾಗೂ ಇತರೆಡೆ ಪುನಃ ಗುಂಪುಗೂಡುವಿಕೆ ಹೆಚ್ಚುತ್ತಿದೆ ಎಂದು ರಾಜ್ಯಗಳಿಗೆ ಬರೆದಿರುವ ಪತ್ರದಲ್ಲಿ ಕೇಂದ್ರ ಸರಕಾರ ಕಳವಳ ವ್ಯಕ್ತಪಡಿಸಿದೆ.
Agencies 19 Jun 2021, 2:02 pm
ಹೈಲೈಟ್ಸ್:
- ಕೋವಿಡ್ ನಿಯಂತ್ರಣಕ್ಕೆ ಐದು ಸೂತ್ರಗಳ ಪಾಲನೆ ಬಹಳ ಮುಖ್ಯ
- ಸೋಂಕು ಪ್ರಸರಣ ತಡೆಗಟ್ಟಲು ಲಸಿಕೆ ಅಭಿಯಾನ ಚುರುಕುಗೊಳಿಸಿ
- ನಿರ್ಬಂಧಗಳನ್ನು ವಿಧಿಸುವಾಗ ಮತ್ತು ಸಡಿಲಿಸುವಾಗ ತಳಮಟ್ಟದ ಮೌಲ್ಯಮಾಪನವಿರಲಿ
- ಕೆಲವು ರಾಜ್ಯಗಳ ಮಾರುಕಟ್ಟೆಗಳಲ್ಲಿ ನಿಯಮಗಳ ಪಾಲನೆ ಆಗುತ್ತಿಲ್ಲ
ಹೊಸದಿಲ್ಲಿ: ರಾಜ್ಯಗಳು ಕೋವಿಡ್ 19 ಸಂಬಂಧಿಸಿದ ಲಾಕ್ಡೌನ್ ನಿಯಮಗಳನ್ನು ಸಡಿಲಿಸುತ್ತಿರುವುದು ಕೆಲವು ಮಾರುಕಟ್ಟೆಗಳು ಹಾಗೂ ಇತರೆ ಸ್ಥಳಗಳಲ್ಲಿ ಜನದಟ್ಟಣೆ ಹೆಚ್ಚಲು ಅವಕಾಶ ನೀಡುತ್ತಿದೆ ಎಂದು ಕೇಂದ್ರ ಸರಕಾರ ಆತಂಕ ವ್ಯಕ್ತಪಡಿಸಿದೆ. ಜತೆಗೆ ರೋಗ ಹರಡುವುದನ್ನು ತಡೆಗಟ್ಟಲು ಕೋವಿಡ್-ಸಮರ್ಪಕ ವರ್ತನೆ, ಪರೀಕ್ಷೆ-ಪತ್ತೆಹಚ್ಚುವಿಕೆ-ಚಿಕಿತ್ಸೆ ಮತ್ತು ಲಸಿಕೆ ನೀಡುವಿಕೆಯ ಅತ್ಯಂತ ಮಹತ್ವದ ಐದು ಮುಖ್ಯ ಕಾರ್ಯತಂತ್ರಗಳ ಪಾಲನೆಯನ್ನು ಖಾತರಿಪಡಿಸಿಕೊಳ್ಳುವಂತೆ ರಾಜ್ಯಗಳಿಗೆ ಮನವಿ ಮಾಡಿದೆ. ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಪತ್ರ ಬರೆದಿದ್ದು, ಕೊರೊನಾ ವೈರಸ್ ಸೋಂಕು ಪ್ರಸರಣದ ಸರಪಣಿಯನ್ನು ತುಂಡರಿಸಲು ಪ್ರಸ್ತುತದ ಸನ್ನಿವೇಶದಲ್ಲಿ ಲಸಿಕೆ ಅತ್ಯಂತ ನಿರ್ಣಾಯಕವಾಗಿದೆ. ಹೀಗಾಗಿ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ನಿಗದಿತ ಸಮಯದೊಳಗೆ ಗರಿಷ್ಠ ಸಂಖ್ಯೆಯಲ್ಲಿ ಜನರಿಗೆ ಲಸಿಕೆ ನೀಡಲು ಲಸಿಕೆ ಅಭಿಯಾನದ ವೇಗವನ್ನು ಹೆಚ್ಚಿಸಬೇಕು ಎಂದು ಸಲಹೆ ನೀಡಿದ್ದಾರೆ.
'ಕೋವಿಡ್ 19 ಎರಡನೆಯ ಅಲೆಯ ವೇಳೆ ಹಲವು ರಾಜ್ಯಗಳಲ್ಲಿ ಭಾರಿ ಪ್ರಮಾಣದಲ್ಲಿ ಸೋಂಕು ಹೆಚ್ಚಳವಾಗಿರುವುದನ್ನು ಕಂಡಿದ್ದೇವೆ. ಹಾಗೆಯೇ ಅವುಗಳಲ್ಲಿ ಹೆಚ್ಚಿನ ರಾಜ್ಯಗಳು ಸೋಂಕು ಹರಡುವಿಕೆಯನ್ನು ತಡೆಯಲು ನಿರ್ಬಂಧಗಳನ್ನು ಜಾರಿಗೊಳಿಸಿದ್ದವು. ಸಕ್ರಿಯ ಪ್ರಕರಣಗಳಲ್ಲಿ ಇಳಿಕೆಯಾದ ಹಿನ್ನೆಲೆಯಲ್ಲಿ ರಾಜ್ಯ ಹಾಗೂ ಯುಟಿಗಳು ನಿರ್ಬಂಧಗಳ ಸಡಿಲಿಕೆಯನ್ನು ಆರಂಭಿಸಿವೆ. ನಿರ್ಬಂಧಗಳನ್ನು ವಿಧಿಸುವ ಅಥವಾ ಸಡಿಲಿಸುವ ನಿರ್ಧಾರಗಳನ್ನು ತಳಮಟ್ಟದ ಪರಿಸ್ಥಿತಿಯ ಮೌಲ್ಯಮಾಪನದ ಆಧಾರದಲ್ಲಿ ನಡೆಯಬೇಕು' ಎಂದು ಅವರು ಹೇಳಿದ್ದಾರೆ.
ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾದ ಬಳಿಕ ಚಟುವಟಿಕೆಗಳನ್ನು ಆರಂಭಿಸುವುದು ಅತ್ಯಗತ್ಯ. ರಾಜ್ಯ ಹಾಗೂ ಯುಟಿಗಳು ಸಂಪೂರ್ಣ ಪ್ರಕ್ರಿಯೆಯನ್ನು ಎಚ್ಚರಿಕೆಯಿಂದ ನಿಭಾಯಿಸಬೇಕು. ನಿರ್ಬಂಧಗಳನ್ನು ತೆರೆಯುವಾಗ ಐದು-ಮಾದರಿಯ ಕಾರ್ಯತಂತ್ರವನ್ನು ಅನುಸರಿಸುವುದು ಬಹಳ ಮುಖ್ಯವಾಗಿದೆ ಎಂದು ಅವರು ಕೋವಿಡ್ ಶಿಷ್ಟಾಚಾರಗಳ ಪಾಲನೆ, ಪರೀಕ್ಷೆ-ಪತ್ತೆ-ಚಿಕಿತ್ಸೆ ಮತ್ತು ಲಸಿಕೆಯ ಸೂತ್ರವನ್ನು ಮರೆಯದಂತೆ ಸೂಚಿಸಿದ್ದಾರೆ.
ಕೆಲವು ರಾಜ್ಯಗಳಲ್ಲಿ ನಿರ್ಬಂಧಗಳನ್ನು ಸಡಿಲಗೊಳಿಸಿರುವುದು ಮಾರುಕಟ್ಟೆ ಮುಂತಾದೆಡೆ ಜನರು ಮತ್ತೆ ಗುಂಪುಗೂಡುವುದಕ್ಕೆ ಅವಕಾಶ ನೀಡುತ್ತಿದೆ. ಇಲ್ಲಿ ಕೋವಿಡ್ ನಡವಳಿಕೆಗಳನ್ನು ಸಮರ್ಪಕವಾಗಿ ಪಾಲನೆ ಮಾಡಲಾಗುತ್ತಿಲ್ಲ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಹೀಗಾಗಿ ನಿಯಮಗಳನ್ನು ಸಡಿಲಗೊಳಿಸುವಾಗ ಕೋವಿಡ್ ಶಿಷ್ಟಾಚಾರಗಳ ಪಾಲನೆ ವಿಚಾರದಲ್ಲಿ ಯಾವುದೇ ರಾಜಿಗೆ ಅವಕಾಶ ನೀಡಬಾರದು ಎಂದು ಸೂಚನೆ ನೀಡಿದ್ದಾರೆ.
'ಕೋವಿಡ್ 19 ಎರಡನೆಯ ಅಲೆಯ ವೇಳೆ ಹಲವು ರಾಜ್ಯಗಳಲ್ಲಿ ಭಾರಿ ಪ್ರಮಾಣದಲ್ಲಿ ಸೋಂಕು ಹೆಚ್ಚಳವಾಗಿರುವುದನ್ನು ಕಂಡಿದ್ದೇವೆ. ಹಾಗೆಯೇ ಅವುಗಳಲ್ಲಿ ಹೆಚ್ಚಿನ ರಾಜ್ಯಗಳು ಸೋಂಕು ಹರಡುವಿಕೆಯನ್ನು ತಡೆಯಲು ನಿರ್ಬಂಧಗಳನ್ನು ಜಾರಿಗೊಳಿಸಿದ್ದವು. ಸಕ್ರಿಯ ಪ್ರಕರಣಗಳಲ್ಲಿ ಇಳಿಕೆಯಾದ ಹಿನ್ನೆಲೆಯಲ್ಲಿ ರಾಜ್ಯ ಹಾಗೂ ಯುಟಿಗಳು ನಿರ್ಬಂಧಗಳ ಸಡಿಲಿಕೆಯನ್ನು ಆರಂಭಿಸಿವೆ. ನಿರ್ಬಂಧಗಳನ್ನು ವಿಧಿಸುವ ಅಥವಾ ಸಡಿಲಿಸುವ ನಿರ್ಧಾರಗಳನ್ನು ತಳಮಟ್ಟದ ಪರಿಸ್ಥಿತಿಯ ಮೌಲ್ಯಮಾಪನದ ಆಧಾರದಲ್ಲಿ ನಡೆಯಬೇಕು' ಎಂದು ಅವರು ಹೇಳಿದ್ದಾರೆ.
ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾದ ಬಳಿಕ ಚಟುವಟಿಕೆಗಳನ್ನು ಆರಂಭಿಸುವುದು ಅತ್ಯಗತ್ಯ. ರಾಜ್ಯ ಹಾಗೂ ಯುಟಿಗಳು ಸಂಪೂರ್ಣ ಪ್ರಕ್ರಿಯೆಯನ್ನು ಎಚ್ಚರಿಕೆಯಿಂದ ನಿಭಾಯಿಸಬೇಕು. ನಿರ್ಬಂಧಗಳನ್ನು ತೆರೆಯುವಾಗ ಐದು-ಮಾದರಿಯ ಕಾರ್ಯತಂತ್ರವನ್ನು ಅನುಸರಿಸುವುದು ಬಹಳ ಮುಖ್ಯವಾಗಿದೆ ಎಂದು ಅವರು ಕೋವಿಡ್ ಶಿಷ್ಟಾಚಾರಗಳ ಪಾಲನೆ, ಪರೀಕ್ಷೆ-ಪತ್ತೆ-ಚಿಕಿತ್ಸೆ ಮತ್ತು ಲಸಿಕೆಯ ಸೂತ್ರವನ್ನು ಮರೆಯದಂತೆ ಸೂಚಿಸಿದ್ದಾರೆ.
ಕೆಲವು ರಾಜ್ಯಗಳಲ್ಲಿ ನಿರ್ಬಂಧಗಳನ್ನು ಸಡಿಲಗೊಳಿಸಿರುವುದು ಮಾರುಕಟ್ಟೆ ಮುಂತಾದೆಡೆ ಜನರು ಮತ್ತೆ ಗುಂಪುಗೂಡುವುದಕ್ಕೆ ಅವಕಾಶ ನೀಡುತ್ತಿದೆ. ಇಲ್ಲಿ ಕೋವಿಡ್ ನಡವಳಿಕೆಗಳನ್ನು ಸಮರ್ಪಕವಾಗಿ ಪಾಲನೆ ಮಾಡಲಾಗುತ್ತಿಲ್ಲ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಹೀಗಾಗಿ ನಿಯಮಗಳನ್ನು ಸಡಿಲಗೊಳಿಸುವಾಗ ಕೋವಿಡ್ ಶಿಷ್ಟಾಚಾರಗಳ ಪಾಲನೆ ವಿಚಾರದಲ್ಲಿ ಯಾವುದೇ ರಾಜಿಗೆ ಅವಕಾಶ ನೀಡಬಾರದು ಎಂದು ಸೂಚನೆ ನೀಡಿದ್ದಾರೆ.