ಲಖನೌ: ಉತ್ತರ ಪ್ರದೇಶದ ಬಹುಕೋಟಿ ರೂ. ಗೋಮತಿ ನದಿಪಾತ್ರದ ಅಭಿವೃದ್ಧಿ ಯೋಜನೆಯಲ್ಲಿ ನಡೆದ ಅಕ್ರಮಗಳ ಕುರಿತು ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ ಗುರುವಾರ ಏಕಕಾಲಕ್ಕೆ ಹಲವು ಕಡೆ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದೆ. ಹಿಂದಿನ ಸಮಾಜವಾದಿ ಪಕ್ಷದ ಆಡಳಿತಾವಧಿಯಲ್ಲಿ ಶುರುವಾದ 1500 ಕೋಟಿ ರೂ. ಮೊತ್ತದ ಈ ಯೋಜನೆಯಲ್ಲಿ ಅಕ್ರಮ ಹಣಕಾಸು ಪರಭಾರೆ ನಡೆದಿದೆ ಎನ್ನುವ ಆರೋಪ ಕೇಳಿ ಬಂದಿದ್ದು, ಇ.ಡಿ ತನಿಖೆ ಕೈಗೆತ್ತಿಕೊಂಡಿದೆ. ಈ ಹಗರಣದ ಆರೋಪಿಗಳು ಹಾಗೂ ಅವರ ಸಹಚರರ ಉತ್ತರ ಪ್ರದೇಶ, ದಿಲ್ಲಿ, ಹರಿಯಾಣ ಮತ್ತು ರಾಜಸ್ಥಾನದ ನಿವಾಸ ಮತ್ತು ಕಚೇರಿಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿ ದಾಖಲೆಪತ್ರಗಳನ್ನು ವಶಪಡಿಸಿಕೊಂಡರು. ಬಿಜೆಪಿ ಸರಕಾರ ರಚನೆಯಾದ ಬಳಿಕ ಈ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಲಾಗಿತ್ತು. ಸಿಬಿಐನ ದೋಷಾರೋಪಪಟ್ಟಿ ಆಧರಿಸಿ ಇಡಿ ಈ ಕುರಿತು ಪ್ರಕರಣ ದಾಖಲಿಸಿಕೊಂಡಿದೆ.
ಉತ್ತರ ಪ್ರದೇಶ ಗೋಮತಿ ಯೋಜನೆ ಅಕ್ರಮ: ಹಲವೆಡೆ ಇ.ಡಿ ಅಧಿಕಾರಿಗಳಿಂದ ದಾಳಿ
ಸಮಾಜವಾದಿ ಪಕ್ಷದ ಆಡಳಿತಾವಧಿಯಲ್ಲಿ ಶುರುವಾದ 1500 ಕೋಟಿ ರೂ. ಮೊತ್ತದ ಈ ಯೋಜನೆಯಲ್ಲಿ ಅಕ್ರಮ ಹಣಕಾಸು ಪರಭಾರೆ ನಡೆದಿದೆ ಎನ್ನುವ ಆರೋಪ ಕೇಳಿ ಬಂದಿದ್ದು, ಇ.ಡಿ ತನಿಖೆ ಕೈಗೆತ್ತಿಕೊಂಡಿದೆ.
Vijaya Karnataka 25 Jan 2019, 5:00 am